Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಹೆರಿಗೆಯ ನಂತರದ ಕೂದಲುದುರುವಿಕೆ ತಡೆಯಲು ಐದು ವಿಧಾನಗಳು
ನೀವು ಈಗಷ್ಟೇ ಮಗುವನ್ನು ಪಡೆದು ಹೊಸ ಜೀವನಕ್ಕೆ ಹೊಂದಿಕೊಳ್ಳುತ್ತಿದ್ದೀರಾ? ಈ ಸಂತೋಷವನ್ನು ಅನುಭವಿಸುವುದರ ಜೊತೆಗೆ ನಿಮ್ಮ ದೇಹದ ಬಗ್ಗೆ ಕಾಳಜಿ ಕೂಡ ಅಷ್ಟೇ ಮುಖ್ಯವಾಗಿದೆ.ಹೆಚ್ಚಿನ ಮಹಿಳೆಯರು ಹೆರಿಗೆಯ ನಂತರ ಮುಖದ ಕಾಂತಿಯನ್ನು ಹಿಂತಿರುಗಿ ಪಡೆಯಲು ಪ್ರಯತ್ನಿಸುತ್ತಾರೆ ಆದರೆ ಕೂದಲಿನ ಕಾಳಜಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿಬಿಟ್ಟಿರುತ್ತಾರೆ.ಮಗು ಹುಟ್ಟಿದ ನಂತರ ತಾಯಿಯ ಈಸ್ಟ್ರೋಜೆನ್ ಮಟ್ಟದಲ್ಲಿ ಏರುಪೇರು ಕಂಡು ಬರುವುದರಿಂದ ಕೂದಲುದುರುವಿಕೆ ಸಾಮಾನ್ಯ.ನೀವೂ ಕೂಡ ಕೂದಲಿನ ಆರೈಕೆಗೆ ಸರಿಯಾದ ಮಾರ್ಗ ಹುಡುಕುತ್ತಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ಐದು ವಿಧಾನಗಳನ್ನು ಪಾಲಿಸಿ.

ಮೊಟ್ಟೆಯ ಬಿಳಿ ಭಾಗ
ನಿಮಗೆ ಬೇರೇನನ್ನು ಮಾಡಲು ಸಮಯವಿಲ್ಲದಿದ್ದರೆ ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಇದರಿಂದ ಸಿಗುವ ಫಲಿತಾಂಶ ನಿಮ್ಮನ್ನು ನಿಬ್ಬೆರಗಾಗಿಸುತ್ತದೆ.ಇದು ನಿಮ್ಮ ಕೂದಲಿಗೆ ಬೇಕಾದ ನುಣುಪನ್ನು ನೀಡಿ ಕೂದಲ ಪೋಷಣೆ ಮಾಡುತ್ತದೆ.

ಮೆಂತೆ ಕಾಳು
ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.ಇದು ಕೂದಲನ್ನು ಆರೋಗ್ಯಯುತವಾಗಿ ಮಾಡುವುದರ ಜೊತೆಗೆ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ.

ಮೊಸರು
ಇದು ಕೂದಲಿಗೆ ಅತ್ಯುತ್ತಮ ಟಾನಿಕ್.ಸ್ವಲ್ಪ ಕಡೆದ ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚಿ ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.ಇದರಿಂದ ದೊರೆತ ಫಲಿತಾಂಶದಿಂದ ನೀವು ನಿಮ್ಮ ಕೂದಲನ್ನು ಇಷ್ಟಪಡಲು ಪ್ರಾರಂಭಿಸುತ್ತೀರಿ.

ಕಾಯಿ ಹಾಲು
ಕೊಬ್ಬರಿ ಎಣ್ಣೆ ಬಳಸುವುದರಿಂದ ಕೂದಲು ಉದುರುವಿಕೆ ತಡೆಯಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯ.ಆದರೆ ಹೆಚ್ಚಿನ ಜನರಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದು ಮಾತ್ರವಲ್ಲ,ಕೂದಲ ಬೆಳವಣಿಗೆ ಕೂಡ ಹೆಚ್ಚುತ್ತದೆ ಎಂಬುದು ತಿಳಿದಿಲ್ಲ.ನಿಯಮಿತವಾಗಿ ಕೂದಲಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದನ್ನು ತಡೆಯುವುದರ ಜೊತೆಗೆ ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಭೃ೦ಗರಾಜ ತೈಲ
ಎಲ್ಲೆಡೆ ಸುಲಭವಾಗಿ ದೊರಕುವ ಭೃ೦ಗರಾ ಅಥವಾ ಫಾಲ್ಸ್ ಡೈಸಿ ಎಂದೇ ಕರೆಯಲ್ಪಡುವ ಸಸ್ಯವು ಕೂದಲು ಉದುರುವಿಕೆ ತಡೆಯಲು ಅನುಕೂಲಕರ.ಒಂದು ಮುಷ್ಠಿ ಭೃಂಗರಾಜ ಎಲೆಗಳನ್ನು ತೆಗೆದುಕೊಳ್ಳಿ ನಂತರ ಇದನ್ನು ಸಂಪೂರ್ಣ ಪೇಸ್ಟ್ ತಯಾರಿಸಿಕೊಳ್ಳಿ.ಇದನ್ನು ಹಾಗೆಯೇ ಕೂದಲಿಗೆ ಹಚ್ಚಬಹುದು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಕೂಡ ಬಳಸಬಹುದು.



Click it and Unblock the Notifications