Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಹೆರಿಗೆಯ ನಂತರದ ಕೂದಲುದುರುವಿಕೆ ತಡೆಯಲು ಐದು ವಿಧಾನಗಳು
ನೀವು ಈಗಷ್ಟೇ ಮಗುವನ್ನು ಪಡೆದು ಹೊಸ ಜೀವನಕ್ಕೆ ಹೊಂದಿಕೊಳ್ಳುತ್ತಿದ್ದೀರಾ? ಈ ಸಂತೋಷವನ್ನು ಅನುಭವಿಸುವುದರ ಜೊತೆಗೆ ನಿಮ್ಮ ದೇಹದ ಬಗ್ಗೆ ಕಾಳಜಿ ಕೂಡ ಅಷ್ಟೇ ಮುಖ್ಯವಾಗಿದೆ.ಹೆಚ್ಚಿನ ಮಹಿಳೆಯರು ಹೆರಿಗೆಯ ನಂತರ ಮುಖದ ಕಾಂತಿಯನ್ನು ಹಿಂತಿರುಗಿ ಪಡೆಯಲು ಪ್ರಯತ್ನಿಸುತ್ತಾರೆ ಆದರೆ ಕೂದಲಿನ ಕಾಳಜಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿಬಿಟ್ಟಿರುತ್ತಾರೆ.ಮಗು ಹುಟ್ಟಿದ ನಂತರ ತಾಯಿಯ ಈಸ್ಟ್ರೋಜೆನ್ ಮಟ್ಟದಲ್ಲಿ ಏರುಪೇರು ಕಂಡು ಬರುವುದರಿಂದ ಕೂದಲುದುರುವಿಕೆ ಸಾಮಾನ್ಯ.ನೀವೂ ಕೂಡ ಕೂದಲಿನ ಆರೈಕೆಗೆ ಸರಿಯಾದ ಮಾರ್ಗ ಹುಡುಕುತ್ತಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ಐದು ವಿಧಾನಗಳನ್ನು ಪಾಲಿಸಿ.

ಮೊಟ್ಟೆಯ ಬಿಳಿ ಭಾಗ
ನಿಮಗೆ ಬೇರೇನನ್ನು ಮಾಡಲು ಸಮಯವಿಲ್ಲದಿದ್ದರೆ ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಇದರಿಂದ ಸಿಗುವ ಫಲಿತಾಂಶ ನಿಮ್ಮನ್ನು ನಿಬ್ಬೆರಗಾಗಿಸುತ್ತದೆ.ಇದು ನಿಮ್ಮ ಕೂದಲಿಗೆ ಬೇಕಾದ ನುಣುಪನ್ನು ನೀಡಿ ಕೂದಲ ಪೋಷಣೆ ಮಾಡುತ್ತದೆ.

ಮೆಂತೆ ಕಾಳು
ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.ಇದು ಕೂದಲನ್ನು ಆರೋಗ್ಯಯುತವಾಗಿ ಮಾಡುವುದರ ಜೊತೆಗೆ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ.

ಮೊಸರು
ಇದು ಕೂದಲಿಗೆ ಅತ್ಯುತ್ತಮ ಟಾನಿಕ್.ಸ್ವಲ್ಪ ಕಡೆದ ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚಿ ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.ಇದರಿಂದ ದೊರೆತ ಫಲಿತಾಂಶದಿಂದ ನೀವು ನಿಮ್ಮ ಕೂದಲನ್ನು ಇಷ್ಟಪಡಲು ಪ್ರಾರಂಭಿಸುತ್ತೀರಿ.

ಕಾಯಿ ಹಾಲು
ಕೊಬ್ಬರಿ ಎಣ್ಣೆ ಬಳಸುವುದರಿಂದ ಕೂದಲು ಉದುರುವಿಕೆ ತಡೆಯಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯ.ಆದರೆ ಹೆಚ್ಚಿನ ಜನರಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದು ಮಾತ್ರವಲ್ಲ,ಕೂದಲ ಬೆಳವಣಿಗೆ ಕೂಡ ಹೆಚ್ಚುತ್ತದೆ ಎಂಬುದು ತಿಳಿದಿಲ್ಲ.ನಿಯಮಿತವಾಗಿ ಕೂದಲಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದನ್ನು ತಡೆಯುವುದರ ಜೊತೆಗೆ ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಭೃ೦ಗರಾಜ ತೈಲ
ಎಲ್ಲೆಡೆ ಸುಲಭವಾಗಿ ದೊರಕುವ ಭೃ೦ಗರಾ ಅಥವಾ ಫಾಲ್ಸ್ ಡೈಸಿ ಎಂದೇ ಕರೆಯಲ್ಪಡುವ ಸಸ್ಯವು ಕೂದಲು ಉದುರುವಿಕೆ ತಡೆಯಲು ಅನುಕೂಲಕರ.ಒಂದು ಮುಷ್ಠಿ ಭೃಂಗರಾಜ ಎಲೆಗಳನ್ನು ತೆಗೆದುಕೊಳ್ಳಿ ನಂತರ ಇದನ್ನು ಸಂಪೂರ್ಣ ಪೇಸ್ಟ್ ತಯಾರಿಸಿಕೊಳ್ಳಿ.ಇದನ್ನು ಹಾಗೆಯೇ ಕೂದಲಿಗೆ ಹಚ್ಚಬಹುದು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಕೂಡ ಬಳಸಬಹುದು.



Click it and Unblock the Notifications