Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಹೆರಿಗೆಯ ನಂತರದ ಕೂದಲುದುರುವಿಕೆ ತಡೆಯಲು ಐದು ವಿಧಾನಗಳು
ನೀವು ಈಗಷ್ಟೇ ಮಗುವನ್ನು ಪಡೆದು ಹೊಸ ಜೀವನಕ್ಕೆ ಹೊಂದಿಕೊಳ್ಳುತ್ತಿದ್ದೀರಾ? ಈ ಸಂತೋಷವನ್ನು ಅನುಭವಿಸುವುದರ ಜೊತೆಗೆ ನಿಮ್ಮ ದೇಹದ ಬಗ್ಗೆ ಕಾಳಜಿ ಕೂಡ ಅಷ್ಟೇ ಮುಖ್ಯವಾಗಿದೆ.ಹೆಚ್ಚಿನ ಮಹಿಳೆಯರು ಹೆರಿಗೆಯ ನಂತರ ಮುಖದ ಕಾಂತಿಯನ್ನು ಹಿಂತಿರುಗಿ ಪಡೆಯಲು ಪ್ರಯತ್ನಿಸುತ್ತಾರೆ ಆದರೆ ಕೂದಲಿನ ಕಾಳಜಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿಬಿಟ್ಟಿರುತ್ತಾರೆ.ಮಗು ಹುಟ್ಟಿದ ನಂತರ ತಾಯಿಯ ಈಸ್ಟ್ರೋಜೆನ್ ಮಟ್ಟದಲ್ಲಿ ಏರುಪೇರು ಕಂಡು ಬರುವುದರಿಂದ ಕೂದಲುದುರುವಿಕೆ ಸಾಮಾನ್ಯ.ನೀವೂ ಕೂಡ ಕೂದಲಿನ ಆರೈಕೆಗೆ ಸರಿಯಾದ ಮಾರ್ಗ ಹುಡುಕುತ್ತಿದ್ದಲ್ಲಿ ಈ ಕೆಳಗೆ ನೀಡಲಾಗಿರುವ ಐದು ವಿಧಾನಗಳನ್ನು ಪಾಲಿಸಿ.

ಮೊಟ್ಟೆಯ ಬಿಳಿ ಭಾಗ
ನಿಮಗೆ ಬೇರೇನನ್ನು ಮಾಡಲು ಸಮಯವಿಲ್ಲದಿದ್ದರೆ ಮೂರು ಚಮಚ ಆಲೀವ್ ಎಣ್ಣೆಗೆ ಮೊಟ್ಟೆಯ ಬಿಳಿ ಭಾಗವನ್ನು ಸೇರಿಸಿ ಕೂದಲಿಗೆ ಹಚ್ಚಿ ಇದರಿಂದ ಸಿಗುವ ಫಲಿತಾಂಶ ನಿಮ್ಮನ್ನು ನಿಬ್ಬೆರಗಾಗಿಸುತ್ತದೆ.ಇದು ನಿಮ್ಮ ಕೂದಲಿಗೆ ಬೇಕಾದ ನುಣುಪನ್ನು ನೀಡಿ ಕೂದಲ ಪೋಷಣೆ ಮಾಡುತ್ತದೆ.

ಮೆಂತೆ ಕಾಳು
ಕೂದಲು ಉದುರುವಿಕೆ ತಡೆಯುವಲ್ಲಿ ಮೆಂತೆ ಕಾಳು ಹೆಚ್ಚು ಕೆಲಸ ಮಾಡುತ್ತದೆ. ಮೆಂತೆಕಾಳನ್ನು ರಾತ್ರಿ ನೀರಿನಲ್ಲಿ ನೆನೆಸಿಡಿ ಈ ನೀರನ್ನು ಕೂದಲಿಗೆ ಮರುದಿನ ಬೆಳಗ್ಗೆ ಹಚ್ಚಿ ಇದನ್ನು ಎರಡು ಗಂಟೆಗಳ ಕಾಲ ಹಾಗೆಯೇ ಬಿಡಿ.ಇದು ಕೂದಲನ್ನು ಆರೋಗ್ಯಯುತವಾಗಿ ಮಾಡುವುದರ ಜೊತೆಗೆ ತಲೆಹೊಟ್ಟನ್ನು ಕೂಡ ಹೋಗಲಾಡಿಸುತ್ತದೆ.

ಮೊಸರು
ಇದು ಕೂದಲಿಗೆ ಅತ್ಯುತ್ತಮ ಟಾನಿಕ್.ಸ್ವಲ್ಪ ಕಡೆದ ಮೊಸರನ್ನು ಕೂದಲಿನ ಬುಡಕ್ಕೆ ಹಚ್ಚಿ ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.ಇದರಿಂದ ದೊರೆತ ಫಲಿತಾಂಶದಿಂದ ನೀವು ನಿಮ್ಮ ಕೂದಲನ್ನು ಇಷ್ಟಪಡಲು ಪ್ರಾರಂಭಿಸುತ್ತೀರಿ.

ಕಾಯಿ ಹಾಲು
ಕೊಬ್ಬರಿ ಎಣ್ಣೆ ಬಳಸುವುದರಿಂದ ಕೂದಲು ಉದುರುವಿಕೆ ತಡೆಯಬಹುದು ಎಂಬುದು ಎಲ್ಲರಿಗೂ ತಿಳಿದ ವಿಷಯ.ಆದರೆ ಹೆಚ್ಚಿನ ಜನರಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದು ಮಾತ್ರವಲ್ಲ,ಕೂದಲ ಬೆಳವಣಿಗೆ ಕೂಡ ಹೆಚ್ಚುತ್ತದೆ ಎಂಬುದು ತಿಳಿದಿಲ್ಲ.ನಿಯಮಿತವಾಗಿ ಕೂದಲಿಗೆ ಕಾಯಿ ಹಾಲು ಬಳಸುವುದರಿಂದ ಕೂದಲು ಉದುರುವುದನ್ನು ತಡೆಯುವುದರ ಜೊತೆಗೆ ದಟ್ಟವಾಗಿ ಬೆಳೆಯಲು ಕೂಡ ಸಹಕರಿಸುತ್ತದೆ.

ಭೃ೦ಗರಾಜ ತೈಲ
ಎಲ್ಲೆಡೆ ಸುಲಭವಾಗಿ ದೊರಕುವ ಭೃ೦ಗರಾ ಅಥವಾ ಫಾಲ್ಸ್ ಡೈಸಿ ಎಂದೇ ಕರೆಯಲ್ಪಡುವ ಸಸ್ಯವು ಕೂದಲು ಉದುರುವಿಕೆ ತಡೆಯಲು ಅನುಕೂಲಕರ.ಒಂದು ಮುಷ್ಠಿ ಭೃಂಗರಾಜ ಎಲೆಗಳನ್ನು ತೆಗೆದುಕೊಳ್ಳಿ ನಂತರ ಇದನ್ನು ಸಂಪೂರ್ಣ ಪೇಸ್ಟ್ ತಯಾರಿಸಿಕೊಳ್ಳಿ.ಇದನ್ನು ಹಾಗೆಯೇ ಕೂದಲಿಗೆ ಹಚ್ಚಬಹುದು ಅಥವಾ ಹಾಲಿನ ಜೊತೆ ಮಿಕ್ಸ್ ಮಾಡಿ ಕೂಡ ಬಳಸಬಹುದು.



Click it and Unblock the Notifications
