Latest Updates
-
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ!
ನಾಲ್ಕನೇ ತಿಂಗಳಿನಲ್ಲಿ ಗರ್ಭಪಾತ : ಎಚ್ಚರಿಕೆಯ ಗಂಟೆ

ಗರ್ಭಪಾತ ಮಾಡಿ ಒಂದು ಜೀವವನ್ನು ಕೊಲ್ಲುವುದು ತಪ್ಪು. ಆದರೆ ಆ ಗರ್ಭದಿಂದ ತಾಯಿಯ ಆರೋಗ್ಯಕ್ಕೆ ಅಪಾಯ ಉಂಟಾಗುವುದಾದರೆ ಅಂತಹ ಸಂದರ್ಭದಲ್ಲಿ ಗರ್ಭಪಾತ ಮಾಡಬೇಕು.
ಗರ್ಭಿಣಿಯಾಗಿ 3 ತಿಂಗಳವರೆಗೆ ತುಂಬಾ ಎಚ್ಚರವಹಿಸಬೇಕೆಂದು ವೈದ್ಯರು ಹೇಳುತ್ತಾರೆ. ಏಕೆಂದರೆ ಈ ಸಮಯದಲ್ಲಿ ಗರ್ಭಪಾತವಾಗುವ ಸಾಧ್ಯತೆ ಹೆಚ್ಚು. ನಾಲ್ಕನೇ ತಿಂಗಳಿನಿಂದ ಗರ್ಭಪಾತವಗುವ ಸಾಧ್ಯತೆ ಕಡಿಮೆ. ಆದರೆ ಕೆಲವರಿಗೆ ಅನಾರೋಗ್ಯದ ಕಾರಣದಿಂದ ಅಥವಾ ಮತ್ಯಾವುದೋ ಕಾರಣದಿಂದ ಗರ್ಭಪಾತ ಉಂಟಾಗಬಹುದು.
ಈ ರೀತಿ ಗರ್ಭಪಾತ ಉಂಟಾದರೆ ಕೂಡಲೇ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳಬೇಕು. ಹೊಟ್ಟೆಯಲ್ಲಿ ಸತ್ತಂತಹ ಭ್ರೂಣವನ್ನು ಹೊರತೆಗೆಯಬೇಕು, ಇಲ್ಲದಿದ್ದರೆ ಗರ್ಭಿಣಿಯ ಪ್ರಾಣಕ್ಕೆ ಅಪಾಯ ಉಂಟಾಗುವುದು. ಸವಿತರವರ ವಿಷಯದಲ್ಲೂ ಆದದ್ದು ಹೀಗೆಯೇ. ಸರಿಯಾದ ಚಿಕಿತ್ಸೆ ನೀಡಿ ಅವರ ಹೊಟ್ಟೆಯಲ್ಲಿ ಉಳಿದ ಭ್ರೂಣವನ್ನು ತೆಗೆದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗುತ್ತಿರಲಿಲ್ಲ.
ನಾಲ್ಕನೇ ತಿಂಗಳಿನಲ್ಲಿ ಗರ್ಭಪಾತ ಯಾವಾಗ ಉಂಟಾಗುತ್ತದೆ?
* ಗರ್ಭಿಣಿಯಾದಾಗ ಗರ್ಭಕೋಶದ ಇಕ್ಕಟ್ಟು ಭಾಗದಲ್ಲಿ ಅನೇಕ ಬದಲಾವಣೆ ಉಂಟಾಗುತ್ತದೆ. ಗರ್ಭಿಣಿಯರು ರಕ್ತ ಸ್ರಾವವಾಗುತ್ತಿದೆ ಎಂದು ಅನುಭವಾದರೆ ಕೂಡಲೇ ವೈದ್ಯರನ್ನು ಕಾಣಬೇಕು. ಇಲ್ಲದಿದ್ದರೆ ವಿಪರೀತ ರಕ್ತಸ್ರಾವ ಉಂಟಾಗಿ ಪ್ರಾಣಕ್ಕೆ ಅಪಾಯ ಉಂಟಾಗಬಹುದು. ಸೋಂಕು, ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಅಥವಾ ಹೊಟ್ಟೆಗೆ ಏನಾದರೂ ಪೆಟ್ಟು ಬಿದ್ದರೆ ಗರ್ಭಪಾತ ಉಂಟಾಗಬಹುದು.
* ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತ ಸ್ರಾವ ಕಂಡರು ಕೂಡಲೇ ವೈದ್ಯರನ್ನು ಕಾಣಬೇಕು.
* ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆ ನಡೆಸಬಹುದೆಂದು ವೈದ್ಯರು ಹೇಳುತ್ತಾರೆ. ಆದರೆ ಕೆಲವರಿಗೆ ಲೈಂಗಿಕ ಕ್ರಿಯೆಯ ನಂತರ ರಕ್ತ ಕಂಡು ಬರುವುದು. ಈ ರೀತಿ ಕಂಡು ಬಂದರೆ ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.
ವೈದ್ಯರು ಸ್ಕ್ಯಾನ್ ಮಾಡಿ ಮಗುವಿನ ಆರೋಗ್ಯದ ಬಗ್ಗೆ ಹೇಳುತ್ತಾರೆ. ಒಂದು ವೇಳೆ ರಕ್ತಸ್ರಾವ ಕಂಡು ಕೂಡಲೇ ಚಿಕಿತ್ಸೆಯನ್ನು ಪಡೆದರೆ ಮಗುವಿಗೆ ಅಪಾಯ ಉಂಟಾಗುವ ಸಾಧ್ಯತೆ ಕಡಿಮೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ ತಾಯಿ-ಮಗುವಿನ ಪ್ರಾಣಕ್ಕೂ ಅಪಾಯ ಉಂಟಾಗಬಹುದು. ಒಂದು ವೇಳೆ ಮಗುವಿನಿಂದಾಗಿ ಗರ್ಭಿಣಿಯ ಪ್ರಾಣಕ್ಕೆ ಅಪಾಯ ಉಂಟಾಗುವುದಾದರೆ ಆ ಸಂದರ್ಭದಲ್ಲಿ ಅಬಾರ್ಷನ್ ಮಾಡುವುದು ವೈದ್ಯರ ಕರ್ತವ್ಯ ಕೂಡ.



Click it and Unblock the Notifications