Latest Updates
-
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು!
ನಾಲ್ಕನೇ ತಿಂಗಳಿನಲ್ಲಿ ಗರ್ಭಪಾತ : ಎಚ್ಚರಿಕೆಯ ಗಂಟೆ

ಗರ್ಭಪಾತ ಮಾಡಿ ಒಂದು ಜೀವವನ್ನು ಕೊಲ್ಲುವುದು ತಪ್ಪು. ಆದರೆ ಆ ಗರ್ಭದಿಂದ ತಾಯಿಯ ಆರೋಗ್ಯಕ್ಕೆ ಅಪಾಯ ಉಂಟಾಗುವುದಾದರೆ ಅಂತಹ ಸಂದರ್ಭದಲ್ಲಿ ಗರ್ಭಪಾತ ಮಾಡಬೇಕು.
ಗರ್ಭಿಣಿಯಾಗಿ 3 ತಿಂಗಳವರೆಗೆ ತುಂಬಾ ಎಚ್ಚರವಹಿಸಬೇಕೆಂದು ವೈದ್ಯರು ಹೇಳುತ್ತಾರೆ. ಏಕೆಂದರೆ ಈ ಸಮಯದಲ್ಲಿ ಗರ್ಭಪಾತವಾಗುವ ಸಾಧ್ಯತೆ ಹೆಚ್ಚು. ನಾಲ್ಕನೇ ತಿಂಗಳಿನಿಂದ ಗರ್ಭಪಾತವಗುವ ಸಾಧ್ಯತೆ ಕಡಿಮೆ. ಆದರೆ ಕೆಲವರಿಗೆ ಅನಾರೋಗ್ಯದ ಕಾರಣದಿಂದ ಅಥವಾ ಮತ್ಯಾವುದೋ ಕಾರಣದಿಂದ ಗರ್ಭಪಾತ ಉಂಟಾಗಬಹುದು.
ಈ ರೀತಿ ಗರ್ಭಪಾತ ಉಂಟಾದರೆ ಕೂಡಲೇ ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳಬೇಕು. ಹೊಟ್ಟೆಯಲ್ಲಿ ಸತ್ತಂತಹ ಭ್ರೂಣವನ್ನು ಹೊರತೆಗೆಯಬೇಕು, ಇಲ್ಲದಿದ್ದರೆ ಗರ್ಭಿಣಿಯ ಪ್ರಾಣಕ್ಕೆ ಅಪಾಯ ಉಂಟಾಗುವುದು. ಸವಿತರವರ ವಿಷಯದಲ್ಲೂ ಆದದ್ದು ಹೀಗೆಯೇ. ಸರಿಯಾದ ಚಿಕಿತ್ಸೆ ನೀಡಿ ಅವರ ಹೊಟ್ಟೆಯಲ್ಲಿ ಉಳಿದ ಭ್ರೂಣವನ್ನು ತೆಗೆದಿದ್ದರೆ ಪ್ರಾಣಕ್ಕೆ ಅಪಾಯ ಉಂಟಾಗುತ್ತಿರಲಿಲ್ಲ.
ನಾಲ್ಕನೇ ತಿಂಗಳಿನಲ್ಲಿ ಗರ್ಭಪಾತ ಯಾವಾಗ ಉಂಟಾಗುತ್ತದೆ?
* ಗರ್ಭಿಣಿಯಾದಾಗ ಗರ್ಭಕೋಶದ ಇಕ್ಕಟ್ಟು ಭಾಗದಲ್ಲಿ ಅನೇಕ ಬದಲಾವಣೆ ಉಂಟಾಗುತ್ತದೆ. ಗರ್ಭಿಣಿಯರು ರಕ್ತ ಸ್ರಾವವಾಗುತ್ತಿದೆ ಎಂದು ಅನುಭವಾದರೆ ಕೂಡಲೇ ವೈದ್ಯರನ್ನು ಕಾಣಬೇಕು. ಇಲ್ಲದಿದ್ದರೆ ವಿಪರೀತ ರಕ್ತಸ್ರಾವ ಉಂಟಾಗಿ ಪ್ರಾಣಕ್ಕೆ ಅಪಾಯ ಉಂಟಾಗಬಹುದು. ಸೋಂಕು, ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಅಥವಾ ಹೊಟ್ಟೆಗೆ ಏನಾದರೂ ಪೆಟ್ಟು ಬಿದ್ದರೆ ಗರ್ಭಪಾತ ಉಂಟಾಗಬಹುದು.
* ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತ ಸ್ರಾವ ಕಂಡರು ಕೂಡಲೇ ವೈದ್ಯರನ್ನು ಕಾಣಬೇಕು.
* ಗರ್ಭಿಣಿಯಾಗಿದ್ದಾಗ ಲೈಂಗಿಕ ಕ್ರಿಯೆ ನಡೆಸಬಹುದೆಂದು ವೈದ್ಯರು ಹೇಳುತ್ತಾರೆ. ಆದರೆ ಕೆಲವರಿಗೆ ಲೈಂಗಿಕ ಕ್ರಿಯೆಯ ನಂತರ ರಕ್ತ ಕಂಡು ಬರುವುದು. ಈ ರೀತಿ ಕಂಡು ಬಂದರೆ ವೈದ್ಯರ ಸಲಹೆಯನ್ನು ಪಡೆಯುವುದು ಒಳ್ಳೆಯದು.
ವೈದ್ಯರು ಸ್ಕ್ಯಾನ್ ಮಾಡಿ ಮಗುವಿನ ಆರೋಗ್ಯದ ಬಗ್ಗೆ ಹೇಳುತ್ತಾರೆ. ಒಂದು ವೇಳೆ ರಕ್ತಸ್ರಾವ ಕಂಡು ಕೂಡಲೇ ಚಿಕಿತ್ಸೆಯನ್ನು ಪಡೆದರೆ ಮಗುವಿಗೆ ಅಪಾಯ ಉಂಟಾಗುವ ಸಾಧ್ಯತೆ ಕಡಿಮೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದಿದ್ದರೆ ತಾಯಿ-ಮಗುವಿನ ಪ್ರಾಣಕ್ಕೂ ಅಪಾಯ ಉಂಟಾಗಬಹುದು. ಒಂದು ವೇಳೆ ಮಗುವಿನಿಂದಾಗಿ ಗರ್ಭಿಣಿಯ ಪ್ರಾಣಕ್ಕೆ ಅಪಾಯ ಉಂಟಾಗುವುದಾದರೆ ಆ ಸಂದರ್ಭದಲ್ಲಿ ಅಬಾರ್ಷನ್ ಮಾಡುವುದು ವೈದ್ಯರ ಕರ್ತವ್ಯ ಕೂಡ.



Click it and Unblock the Notifications











