Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆಯೂ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ಸರಳ ಟಿಪ್ಸ್! -
ಟಾಟಾ ಮುಂಬೈ ಮ್ಯಾರಥಾನ್ 2027: ನೋಂದಣಿಗೆ ಸಿದ್ಧರಾಗಿ, ಓಟಗಾರರಿಗೆ ಇಲ್ಲಿದೆ ಮಹತ್ವದ ಸಲಹೆಗಳು! -
ಆರ್ಬಿಐ ಸಭೆಗೂ ಮುನ್ನ ದಂಪತಿಗಳಿಗೆ ಎಚ್ಚರಿಕೆ: ಇಂದೇ ಈ 30 ನಿಮಿಷದ ಫೈನಾನ್ಶಿಯಲ್ ಟೆಸ್ಟ್ ಮಾಡಿ! -
ಹಾಲುಣಿಸುವ ತಾಯಂದಿರೇ ಗಮನಿಸಿ: ಬೆನ್ನು ಮತ್ತು ಕುತ್ತಿಗೆ ನೋವು ಮರೆಯಾಗಲು ಈ 8 ನಿಮಿಷದ ವ್ಯಾಯಾಮ ಸಾಕು! -
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ!
ಅಜೀರ್ಣ ಸಮಸ್ಯೆಯಿದ್ದರೆ ಗರ್ಭಧಾರಣೆ ಕಷ್ಟ!

ಆದರೆ ಈ ಸಮಸ್ಯೆಗಳಲ್ಲದೆ ಅಜೀರ್ಣ ಸಮಸ್ಯೆಯಿದ್ದರೆ ಕೂಡ ಗರ್ಭಧಾರಣೆಯಲ್ಲಿ ತೊಂದರೆ ಕಾಣಿಸಿಕೊಳ್ಳಬಹುದು. ಅಜೀರ್ಣ ಸಮಸ್ಯೆ ಗರ್ಭಧಾರಣೆಗೆ ಹೇಗೆ ತಡೆಯೊಡ್ಡುತ್ತದೆ ಎಂದು ನೋಡೋಣ ಬನ್ನಿ:
ಪೋಷಕಾಂಶದ ಕೊರತೆ: ಅಜೀರ್ಣ ಸಮಸ್ಯೆಯಿದ್ದರೆ ದೇಹದಲ್ಲಿ ಆಹಾರದಲ್ಲಿರುವ ಪೋಷಕಾಂಶಗಳನ್ನು ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆಯಿದ್ದು ಒಂದು ವೇಳೆ ಗರ್ಭಿಣಿಯಾದರೂ ಮಗುವಿಗೆ ಅಗತ್ಯದ ಪೋಷಕಾಂಶ ದೊರೆಯುವುದಿಲ್ಲ. ಇದರಿಂದ ಮಗುವಿನ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ.
ಹಾರ್ಮೋನ್ ಗಳು ಕಡಿಮೆಯಾಗುತ್ತದೆ: ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯದಿದ್ದಾಗ ಹಾರ್ಮೋನ್ ಗಳ ಚಟುಚಟಿಕೆಗಳು ಕೂಡ ಕಡಿಮೆಯಾಗುತ್ತದೆ. ವಿಟಮಿನ್ ಗಳು ಹಾಗೂ ಖನಿಜಾಂಶಗಳ ಕೊರತೆ ಉಂಟಾದರೆ ಓವ್ಯೂಲೇಷನ್ ಸರಿಯಾಗಿ ಆಗುವುದಿಲ್ಲ. ಇದರಿಂದ ಗರ್ಭಧಾರಣೆಗೆ ತೊಂದರೆ ಉಂಟಾಗುವುದು.
ದೇಹದ ತೂಕ ಕಡಿಮೆಯಾಗುವುದು: ಮಲಬದ್ಧತೆ ಸಮಸ್ಯೆ ಇದ್ದರೆ ದೇಹದ ತೂಕ ಕಡಿಮೆಯಾಗುವುದು. ತುಂಬಾ ತೆಳ್ಳಗಾಗಿ, ದೇಹಕ್ಕೆ ಅಗತ್ಯವಾದ ಪೋಷಕಂಶಗಳು ದೊರೆಯದಿದ್ದಾಗ ನಿಯಮಿತ ಮುಟ್ಟು ಕಂಡು ಬರುವುದಿಲ್ಲ. ಮುಟ್ಟು ನಿಯಮಿತವಿಲ್ಲದಿದ್ದರೆ ಗರ್ಭಧಾರಣೆಯಾಗುವುದಿಲ್ಲ.
ರಕ್ತಹೀನತೆ: ಪೋಷಕಾಂಶಗಳ ಕೊರತೆಯಿಂದ ರಕ್ತ ಹೀನತೆ ಉಂಟಾಗುತ್ತದೆ. ಮಹಿಳೆ ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂತ ಮಗುವಿಗೆ ಜನ್ಮ ಕೊಡಲು ಸಾಧ್ಯ.
ಆದ್ದರಿಂದ ಅಜೀರ್ಣ ಸಮಸ್ಯೆ ಇದ್ದರೆ ಗರ್ಭಧಾರೆಯ ಮೊದಲು ವೈದ್ಯರನ್ನು ಕಂಡು ಸೂಕ್ತ ಸಲಹೆಗಳನ್ನು ತೆಗೆದುಕೊಳ್ಳುವುದು ಒಳ್ಳೆಯದು.



Click it and Unblock the Notifications