Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಗರ್ಭಪಾತ ತರಬಹುದೇ ಆರೋಗ್ಯಕ್ಕೆ ಅಪಾಯ?

ಗರ್ಭಪಾತವಾದಾಗ ಗಮನಿಸಬೇಕಾದ ಅಂಶಗಳು:
* ಗರ್ಭಪಾತ ಉಂಟಾದಾಗ ಆಸ್ಪತ್ರೆಗೆ ದಾಖಲಿಸುವ ಅವಶ್ಯಕತೆಯಿಲ್ಲ. ಈ ಸಮಯದಲ್ಲಿ ತುಂಬಾ ವಿಶ್ರಾಂತಿ ತೆಗೆದುಕೊಳ್ಳಬೇಕು. ಆದರೆ ವಿಪರೀತ ರಕ್ತಸ್ರಾವ ಉಂಟಾದರೆ ಆಸ್ಪತ್ರೆಗೆ ಹೋಗಬೇಕು.
* ಆದರೆ ಕೆಲವರಿಗೆ ಗರ್ಭಿಣಿಯಾಗಿದ್ದಾಗ ಸ್ವಲ್ಪ ರಕ್ತಸ್ರಾವ ಉಂಟಾಗಬಹುದು. ಅದಕ್ಕಾಗಿ ಭಯ ಪಡಬೇಕಾಗಿಲ್ಲ. ತುಂಬಾ ರಕ್ತ ಸ್ರಾವ ಉಂಟಾದರೆ ಮಾತ್ರ ವೈದ್ಯರನ್ನು ಕೂಡಲೇ ಕಾಣಬೇಕು.
* ಅಬಾರ್ಷನ್ ಪಿಲ್ಸ್ ಸೇವಿಸಿ ಅಬಾರ್ಷನ್ ಆದರೆ ಅಥವಾ ಗರ್ಭಪಾತವಾದಾಗ ಕೆಲವೊಮ್ಮೆ ಭ್ರೂಣವು ಸಂಪೂರ್ಣವಾಗಿ ಹೋಗುವುದಿಲ್ಲ. ಈ ಭ್ರೂಣ ಗರ್ಭಕೋಶದಲ್ಲಿ ಹಾಗೇ ಉಳಿದುಕೊಂಡರೆ ಗರ್ಭಕೋಶದ ಆರೋಗ್ಯಕ್ಕೆ ಅಪಾಯ. ಆದ್ದರಿಂದ ಗರ್ಭಪಾತ ಆದರೆ ಸತ್ತ ಭ್ರೂಣದ ಅಂಶ ಹೊಟ್ಟೆಯಲ್ಲಿ ಉಳಿದಿಲ್ಲ ಅನ್ನುವುದನ್ನು ವೈದ್ಯರನ್ನು ಕಂಡು ಖಚಿತಪಡಿಸಿಕೊಳ್ಳಬೇಕು.
*ಗರ್ಭಪಾತವಾಗಿ ವಿಪರೀತ ರಕ್ತಸ್ರಾವವಾದರೆ ರಕ್ತಹೀನತೆ ಉಂಟಾಗಬಹುದು. ಆದ್ದರಿಂದ ಗರ್ಭಪಾತವಾದಾಗ ದೇಹದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಬಾರದು.
* ಗರ್ಭಪಾತವಾದ ನಂತರ ದೈಹಿಕ ಮತ್ತು ಮಾನಸಿಕ ವಿಶ್ರಾಂತಿ ನೀಡಬೇಕು. ಗರ್ಭಪಾತವಾದ ಕೆಲವು ವಾರಗಳವರೆಗೆ ಸಂಗಾತಿ ಜೊತೆ ಸೇರಬಾರದು.
* ಗರ್ಭಪಾತವಾದ ಸಮಯದಲ್ಲಿ ನೋವು ನಿವಾರಕ ಮಾತ್ರೆಗಳಾದ ಆಸ್ಪಿರಿನ್ (aspirin), ಐಬೂಫ್ರೊಫೆನ್(ibuprofen) ಮುಂತಾದ ಮಾತ್ರೆಗಳನ್ನು ಸೇವಿಸಬಾರದು. ಈ ಮಾತ್ರೆಗಳು ಮಿತಿಮಿರಿದ ರಕ್ತಸ್ರಾವಕ್ಕೆ ಕಾರಣವಾಗುವುದು ಅಲ್ಲದೆ ದೇಹದಲ್ಲಿ ರಕ್ತ ಹೀನತೆ ಸಮಸ್ಯೆ ಉಂಟು ಮಾಡುತ್ತದೆ.
* ಗರ್ಭಪಾತ ಉಂಟಾದಾದೆ ದೈಹಿಕ ನೋವು ಕೆಲವೇ ವಾರಗಳಲ್ಲಿ ಕಡಿಮೆಯಾಗುತ್ತದೆ. ಅದರೆ ಮಾನಸಿಕ ನೋವು ತುಂಬಾ ಇರುವುದರಿಂದ ಈ ಸಮಯದಲ್ಲಿ ಮನೆಯವರು ಅವರಿಗೆ ಮಾನಸಿಕ ಅರೋಗ್ಯ ತುಂಬಬೇಕು.



Click it and Unblock the Notifications