Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಮಕ್ಕಳಾದರೆ ಚೆನ್ನ, ಇಲ್ಲದಿದ್ದರೆ ಇನ್ನೂ ಚೆನ್ನ!

ಭಾರತದಲ್ಲಿ ಸಂತಾನ ನಿಯಂತ್ರಣದ ಜಾಗೃತಿಯನ್ನು ಮೂಡಿಸಲು ಭಾರತದ ಜನಸಂಖ್ಯೆ ನಿಯಂತ್ರಣ ಯೋಜನೆ (FPAI) ಅನೇಕ ಪ್ರಚಾರಗಳನ್ನು ನೀಡಿದೆ, ಈ ಸಂಸ್ಥೆಯು ಜನಸಂಖ್ಯೆ ನಿಯಂತ್ರಣದ ಬಗ್ಗೆ ನಡೆಸಿದ ಅಧ್ಯಯನದಲ್ಲಿ ಈ ಕೆಳಗಿನ ಅಂಶಗಳು ಬೆಳಕಿಗೆ ಬಂದಿದೆ.
1. ಭಾರತದಲ್ಲಿ 36% ಮಹಿಳೆಯರು ಮಾತ್ರ 24-29 ವರ್ಷದ ಒಳಗೆ ಮದುವೆಯಾಗುತ್ತಾರೆ. ಉಳಿದವರು ಅದಕ್ಕಿಂತ ಚಿಕ್ಕ ಪ್ರಾಯದಲ್ಲಿ ಮದುವೆಯಾಗುತ್ತಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮ ದೇಶದಲ್ಲಿ ತುಂಬಾ ಚಿಕ್ಕ ಪ್ರಾಯದಲ್ಲಿಯೇ ಮದುವೆಯಾಗುತ್ತಾರೆ. ಇದರಿಂದಾಗಿ ಜನಸಂಖ್ಯಾ ಹೆಚ್ಚಾಗುತ್ತಿದೆ.
2. ಜನಸಂಖ್ಯಾ ನಿಯಂತ್ರಣದ ಬಗ್ಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸಿದ್ದರೂ ಶೇ.50ರಷ್ಟು ಪುರುಷರು ಮಾತ್ರ ಕಾಂಡೋಮ್ ಗಳನ್ನು ಬಳಸುತ್ತಿದ್ದಾರೆ.
3. ಗರ್ಭನಿರೋಧಕ ಮಾತ್ರೆಗಳನ್ನು ಸೇವಿಸುವ ಮಹಿಳೆಯರ ಸಂಖ್ಯೆ ಶೇ. 48ರಷ್ಟಿದೆ.
4. ಗರ್ಭ ನಿಯಂತ್ರಣಕ್ಕೆ ಗಂಡ-ಹೆಂಡತಿ ಇಬ್ಬರೂ ಮನಸ್ಸು ಮಾಡಬೇಕು ಅನ್ನುವ ಮನಸ್ಥಿತಿ ಶೇ. 52% ಮಾತ್ರ ಕಂಡು ಬರುತ್ತದೆ. ಆದರೆ ಬೇರೆ ದೇಶಗಳಿಗೆ ಹೋಲಿಸಿದರೆ ಈ ರೀತಿಯ ಮನಸ್ಥಿತಿ ತುಂಬಾ ಕಡಿಮೆ ಪ್ರಮಾಣದಲ್ಲಿದೆ.
ಒಂದು ದೇಶದ ಬೆಳವಣಿಗೆಗೆ ಮಾನವ ಸಂಪತ್ತು ಅಗತ್ಯ. ಅದೇ ಮಿತಿ ಮೀರಿದ ಜನಸಂಖ್ಯೆ ದೇಶಕ್ಕೆ ಆರ್ಥಿಕ ಬಿಕ್ಕಟ್ಟನ್ನು ತರುತ್ತದೆ. ಆದ್ದರಿಂದ ಮನೆಗೆ ಒಂದು ಅಥವಾ ಎರಡು ಮಕ್ಕಳು ಮಾತ್ರ ಸಾಕು, ಚಿಕ್ಕ ಸಂಸಾರ ಚೊಕ್ಕ ಸಂಸಾರ.



Click it and Unblock the Notifications