Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ ಪರಿಸ್ಥಿತಿಗಳಿದ್ದರೆ ಅಬಾರ್ಷನ್ ಅವಶ್ಯಕ
ಗರ್ಭಪಾತ ಮಾಡಿಸುವುದು ಕಾನೂನಿನ ಪ್ರಕಾರ ತಪ್ಪು. ಆದರೆ ಗರ್ಭದಲ್ಲಿರುವ ಮಗು ಸರಿಯಾಗಿ ಬೆಳವಣಿಗೆ ಹೊಂದದಿದ್ದರೆ, ತಾಯಿಗೆ ಏನಾದರೂ ಆರೋಗ್ಯದ ಸಮಸ್ಯೆ ಇದ್ದರೆ ಗರ್ಭಪಾತ ಮಾಡಿಸಬಹುದು ಎಂಬ ಕಾನೂನು ಇದೆ.
ಅದರಲ್ಲೂ ಈ ಕೆಳಗಿನ ಸಂದರ್ಭದಲ್ಲಿ ಅಬಾರ್ಷನ್ ಮಾಡಿಸದಿದ್ದರೆ ತಾಯಿಯ ಪ್ರಾಣಕ್ಕೆ ಅಪಾಯ ಉಂಟಾಗಬಹುದು. ಒಂದು ವೇಳೆ ಮಗು ಹುಟ್ಟಿದರೂ ಅಂತಹ ಮಗು ಆರೋಗ್ಯದಿಂದ ಕೂಡಿರುವುದಿಲ್ಲ. ಆದ್ದರಿಂದ ಈ ಕೆಳಗಿನ ಸಂದರ್ಭಗಳಲ್ಲಿ ಅಬಾರ್ಷನ್ ಒಳ್ಳೆಯದು:

ಗರ್ಭಿಣಿಯಾಗಿದ್ದಾಗ ಚಿಕನ್ ಫಾಕ್ಸ್ ಬಂದರೆ
ಗರ್ಭಿಣಿಯಾಗಿದ್ದಾಗ ಚಿಕನ್ ಫಾಕ್ಸ್ ಬಂದರೆ ಕೂಡಲೇ ಅಬಾರ್ಷನ್ ಮಾಡಿಸುವುದು ಒಳ್ಳೆಯದು. ಏಕೆಂದರೆ ಚಿಕನ್ ಪಾಕ್ಸ್ ವೈರಸ್ ದೇಹದಲ್ಲಿ ಕಡಿಮೆಯೆಂದರೂ 3 ತಿಂಗಳಕಾಲ ಇರುತ್ತದೆ. ಇವು ಗರ್ಭದಲ್ಲಿರುವ ಮಗುವಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆದ್ದರಿಂದ ಅಬಾರ್ಷನ್ ಮಾಡಿಸಿದರೆ ಒಳ್ಳೆಯದು.
ಕ್ಯಾನ್ಸರ್
ಗರ್ಭಿಣಿಯಾಗಿದ್ದಾಗ ಕ್ಯಾನ್ಸರ್ ಎಂದು ಗೊತ್ತಾದರೆ ಕೂಡಲೇ ಅಬಾರ್ಷನ್ ಮಾಡಿಸಬೇಕು. ಇಲ್ಲದಿದ್ದರೆ ಕ್ಯಾನ್ಸರ್ ಗೆ ತೆಗೆದುಕೊಳ್ಳುವ ಚಿಕಿತ್ಸೆ ಮಗುವಿನ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ.
ಮಗುವಿನಲ್ಲಿ ನ್ಯೂನತೆ ಇದ್ದರೆ
ಸ್ಕ್ಯಾನಿಂಗ್ ಮಾಡಿಸಿದಾಗ ಮಗುವಿನಲ್ಲಿ ನ್ಯೂನತೆ ಇದ್ದರೆ ಗರ್ಭಪಾತ ಮಾಡಿಸುವುದು ಒಳ್ಳೆಯದು.
ಗರ್ಭಪಾತವಾಗುವ ಸಾಧ್ಯತೆ ಇದ್ದರೆ
ಅನಾರೋಗ್ಯದ ಕಾರಣದಿಂದ ಗರ್ಭಪಾತವಾಗುವ ಸಾಧ್ಯತೆ 99% ಇದ್ದರೆ ಅಬಾರ್ಷನ್ ಮಾಡಿಸಬೇಕು. ಇಲ್ಲದಿದ್ದರೆ ಗರ್ಭಪಾತವಾಗಿ ಮಹಿಳೆಯ ಸ್ಥಿತಿ ಚಿಂತಾಜನಕವಾಗುವುದು.
ಲೈಂಗಿಕ ಕಾಯಿಲೆ ಇದ್ದರೆ
ಲೈಂಗಿಕ ಕಾಯಿಲೆ ಇದ್ದರೆ ಅದು ಮಗುವಿಗೆ ಬರುವ ಸಾಧ್ಯತೆ ಹೆಚ್ಚು. ಮಗುವಿಗೆ ಕೂಡ ಆ ಕಾಯಿಲೆ ಬರಬಹುದೆಂದು ವೈದ್ಯರು ಹೇಳಿದರೆ ಅಬಾರ್ಷನ್ ಮಾಡಿಸುವುದು ಒಳ್ಳೆಯದು.
ಮಧುಮೇಹವಿದ್ದರೆ
ಮಧುಮೇಹಿ ಗರ್ಭಿಣಿಯ ರಕ್ತದಲ್ಲಿ ಸಕ್ಕರೆಯಂಶ ಅಧಿಕವಾದರೆ ಅಬಾರ್ಷನ್ ಮಾಡಿಸುವುದು ತಾಯಿಯ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.
ಥೈರಾಯ್ಡ್ ಅಧಿಕವಾದರೆ
ಥೈರಾಯ್ಡ್ ಕಾಯಿಲೆ ಅಧಿಕವಾದರೆ ಗರ್ಭಪಾತವಾಗುವುದು, ಇದರ ಬದಲು ಗರ್ಭಪಾತ ಮಾಡಿಸಿದರೆ ಮಹಿಳೆಯ ಪ್ರಾಣವನ್ನು ಕಾಪಾಡಬಹುದು.



Click it and Unblock the Notifications