Latest Updates
-
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಬಿಸಿಗಾಳಿ ಕಾಟವೇ? ಈ ತಂಪು ಪಾನೀಯಗಳೇ ನಿಮ್ಮ ರಕ್ಷಕ -
ಹಬ್ಬದ ಫ್ಯಾಷನ್: ಈ ಟಿಪ್ಸ್ ಫಾಲೋ ಮಾಡಿ ಮಿಂಚಿ! -
ಬಿಸಿಲ ಧಗೆಯಿಂದ ಪಾರಾಗಲು ನಿಮ್ಮ ವರ್ಕೌಟ್ ರೂಟೀನ್ ಬದಲಾಯಿಸಿ
ತಾಯಿ ಆಗುವ ಮೊದಲು ಹೀಗಿರಲಿ...
ಹೂವೊಂದು ಬೇಕು ಬಳ್ಳಿಗೆ, ಮಗುವೊಂದು ಬೇಕು ಹೆಣ್ಣಿಗೆ ಎಂಬ ಹಾಡು ತಾಯ್ತನದ ಮಹತ್ವವನ್ನು ತಿಳಿಸುತ್ತದೆ. ಹೌದು ತಾಯಿಯಾಗುವುದು ಪ್ರತಿಯೊಂದು ಹೆಣ್ಣಿಗೂ ಇರುವ ಮಹತ್ವಾಕಾಂಕ್ಷೆ. ಆಕೆಯ ಜೀವನವನ್ನು ಪರಿಪೂರ್ಣವಾಗಿಸುವ ಒಂದು ಸುಂದರ ಅನುಭವ. ಆದರೂ ಈ ಅವಧಿಯಲ್ಲಿ ಗರ್ಭಿಣಿಯರು ತೀವ್ರ ತೆರನಾದ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಅದರಲ್ಲಿಯೂ ಮೊದಲ ಮೂರು ತಿಂಗಳ ಅವಧಿಯು ನಿಜಕ್ಕೂ ಕತ್ತಿಯ ಮೇಲಿನ ನಡಿಗೆಯಿದ್ದಂತೆ.
ಅದರಲ್ಲೂ ಮೂರನೇಯ ತಿಂಗಳ ಅವಧಿಯಲ್ಲಿಯಂತೂ ಇದುವರೆಗೆ ಅನುಭವಕ್ಕೆ ಬರದೇ ಇದ್ದ ಮಗುವಿನ ಇರುವಿಕೆ ಈಗ ನಿಧಾನವಾಗಿ ಗಮನಕ್ಕೆ ಬರತೊಡಗುತ್ತದೆ. ಈ ಸಮಯದಲ್ಲಿಯೇ ಮಗುವಿನ ಹೃದಯ, ಮೂತ್ರಪಿಂಡ, ಕಣ್ಣುಗಳು, ಜನನಾಂಗಗಳು, ಧ್ವನಿಪೆಟ್ಟಿಗೆ ಮೊದಲಾದವುಗಳ ಮೊದಲ ಜೀವಕೋಶಗಳು ರೂಪುಗೊಳ್ಳತೊಡಗುತ್ತವೆ. ಆದ್ದರಿಂದ ಗರ್ಭಾವಸ್ಥೆಯಲ್ಲಿ ಸಾಕಷ್ಟು ಎಚ್ಚರಿಕೆ ವಹಿಸುವುದು ತಾಯಿಗೆ ಅಗತ್ಯವಾಗಿದೆ.
ಪ್ರಥಮವಾಗಿ ಪ್ರತಿ ಗರ್ಭಿಣಿಗೂ ನೀಡುವ ಎಚ್ಚರಿಕೆ ಏನೆಂದರೆ ಯಾವುದೇ ಸಮಯದಲ್ಲಿ ಪಪ್ಪಾಯಿಯನ್ನು ಸೇವಿಸಕೂಡದು. ಏಕೆಂದರೆ ಇದು ಗರ್ಭಪಾತಕ್ಕೆ ನೇರವಾದ ಗುಳಿಗೆಯಾಗಿದೆ. ಇನ್ನುಳಿದಂತೆ ಗರ್ಭಿಣಿ ಅನಾರೋಗ್ಯಕರ ಸಿದ್ಧ ಆಹಾರಗಳು, ಹೊರಗಿನಿಂದ ತಂದ ಸಾಗರ ಉತ್ಪನ್ನಗಳು, ಟಿನ್ ನಲ್ಲಿರುವ ಮೀನಿನ ಖಾದ್ಯಗಳು ಇತ್ಯಾದಿಗಳಿಂದ ದೂರವಿರುವುದೇ ಉತ್ತಮ. ಬನ್ನಿ ಗರ್ಭಾವಸ್ಥೆಯಲ್ಲಿ ಆಹಾರಕ್ರಮ, ಹಾಗೂ ಮುನ್ನೆಚ್ಚರಿಕೆ ಕ್ರಮಗಳು ಹೇಗಿರಬೇಕು ಎಂಬುದನ್ನು ಮುಂದೆ ಓದಿ...

ನಿಯಮಿತವಾಗಿ ಬಾದಾಮಿ ಸೇವಿಸಿ
ಬಾದಾಮಿ ಕೆಲವು ಬಾದಾಮಿಗಳನ್ನು ನೀರಿನಲ್ಲಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ನೆನೆಸಿಟ್ಟು ಬಳಿಕ ಸೇವಿಸಬೇಕು. ಇದು ಮಗುವಿನಲ್ಲಿ ಅಲರ್ಜಿಯನ್ನು ಕಡಿಮೆ ಮಾಡುವುದು, ಗರ್ಭಿಣಿಯ ದೇಹದಲ್ಲಿ ನೀರು ತುಂಬಿಕೊಂಡು ರಕ್ತದೊತ್ತಡ ಹೆಚ್ಚಾಗುವ (preeclampsia) ತೊಂದರೆಯನ್ನು ಮತ್ತು ಮಲಬದ್ಧತೆಯಾಗುವ ಸಾಧ್ಯತೆಯಿಂದ ರಕ್ಷಿಸುತ್ತದೆ.

ಸಾಕಷ್ಟು ಎಳನೀರು ಸೇವಿಸಿ
ಎಳನೀರಿನಲ್ಲಿ ಎಲೆಕ್ಟ್ರೋಲೈಟ್ಗಳು, ಕ್ಲೊರೈಡ್ಗಳು, ಮೆಗ್ನಿಷಿಯಂ, ಕ್ಯಾಲ್ಸಿಯಂ, ರೈಬೊಫ್ಲಾವಿನ್ ಮತ್ತು ವಿಟಮಿನ್ ಸಿ ಅಧಿಕ ಪ್ರಮಾಣದಲ್ಲಿ ಇರುವುದರ ಜೊತೆಗೆ ಇದರಲ್ಲಿ ಡಯಟರಿ ಫೈಬರ್ಗಳು ಸಹ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಒಂದು ಮಿತವಾದ ಪ್ರಮಾಣದಲ್ಲಿ ಸಕ್ಕರೆ, ಸೋಡಿಯಂ ಮತ್ತು ಪ್ರೋಟಿನ್ ಸಹ ಎಳೆನೀರಿನಲ್ಲಿ ಲಭ್ಯವಿರುತ್ತದೆ. ಗರ್ಭಿಣಿಯಾದ ಮೊದಲ ಮೂರು ತಿಂಗಳಿನಲ್ಲಿ ಎಳನೀರನ್ನು ಸೇವಿಸುವುದರಿಂದ ಮುಂಜಾನೆ ಮಂಕುತನ, ಮಲಬದ್ಧತೆ, ಎದೆ ಉರಿ, ಸುಸ್ತು, ತಲೆ ಸುತ್ತುವಿಕೆ, ನಿರ್ಜಲೀಕರಣವನ್ನು ತಡೆಯಬಹುದು ಮತ್ತು ರೋಗ ನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸಿಕೊಳ್ಳಬಹುದು.

ಬೆಟ್ಟದ ನೆಲ್ಲಿಕಾಯಿ
ಬೆಟ್ಟದ ನೆಲ್ಲಿಕಾಯಿಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ಸಿ ಇರುತ್ತದೆ. ಇದು ರಕ್ತ ನಾಳಗಳನ್ನು ಹಿಗ್ಗಿಸುವ ಮೂಲಕ ನಿಮ್ಮ ರಕ್ತದೊತ್ತಡವನ್ನು ಸುಸ್ಥಿತಿಯಲ್ಲಿಡುತ್ತದೆ. ಅಲ್ಲದೆ ತಾಜಾ ಬೆಟ್ಟದ ನೆಲ್ಲಿಕಾಯಿಗಳನ್ನು ಸೇವಿಸುವ ಮೂಲಕ ಗರ್ಭಿಣಿಯಾಗಿರುವಾಗ ಎದೆಯುರಿಯನ್ನು ಮತ್ತು ಅಸಿಡಿಟಿಯನ್ನು ಕಡಿಮೆ ಮಾಡಿಕೊಳ್ಳಬಹುದು.

ರಸ್ತೆಬದಿಯ ತಿಂಡಿಗಳಿಂದ ದೂರವಿರಿ
ಗರ್ಭಿಣಿಯಾಗಿದ್ದಾಗ ಹಸಿವಿನಿಂದಿರುವುದು ತರವಲ್ಲ. ಹಸಿವು ತಾಳಲಾರದೇ ಹೊರಗೆ ಅನಾರೋಗ್ಯಕರ ಆಹಾರ ಸೇವಿಸಿದರೆ ಇದು ಗರ್ಭಿಣಿಯ ಮತ್ತು ಗರ್ಭದಲ್ಲಿರುವ ಮಗುವಿನ ಆರೋಗ್ಯದ ಮೇಲೆ ಪ್ರತಿಕೂಲಕರ ಪರಿಣಾಮ ಉಂಟುಮಾಡಬಹುದು. ಅತಿ ಹೆಚ್ಚು ಪೌಷ್ಟಿಕಾಂಶವಿರುವ ಆಹಾರ, ಎನರ್ಜಿ ಡ್ರಿಂಕ್ ಮತ್ತು ಚಾಕಲೇಟುಗಳು, ಭೇಲ್ ಪುರಿ ಮೊದಲಾದ ರಸ್ತೆಬದಿಯ ತಿಂಡಿಗಳು ಎಷ್ಟೇ ಆಸೆ ಉಂಟುಮಾಡಿದರೂ ಇದರ ಪ್ರಲೋಭನೆಗೆ ಒಳಗಾಗದೇ ನೀವೇ ಸ್ವತಃ ಮನೆಯಲ್ಲಿ ತಯಾರಿಸಿದ ಆಹಾರವನ್ನು ಕೈಚೀಲದಲ್ಲಿಟ್ಟುಕೊಂಡು ಹೋದರೆ ಹಸಿವೆಯೂ ನೀಗುತ್ತದೆ ಹಾಗೂ ಆರೋಗ್ಯವೂ ಕೆಡದು.

ಧ್ಯಾನ
ಸಾಮಾನ್ಯವಾಗಿ ಗರ್ಭಾವಸ್ಥೆಯಲ್ಲಿ ಉದ್ಯೋಗ-ಮನೆಯ ವಾತಾವರಣ, ಹೆರಿಗೆಯ ಕುರಿತು ಭಯ, ಭಾರವನ್ನು ಹೊತ್ತು ತಿರುಗುವ ಆತಂಕ, ಏನಾಗುತ್ತದೆಯೋ, ಅಮ್ಮ ಇದ್ದರೆ ಚೆನ್ನಾಗಿತ್ತು ಎನ್ನುವ ದುಗುಡಗಳೆಲ್ಲಾ ಗರ್ಭಿಣಿಗೆ ಆವರಿಸಿ ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತವೆ. ಆದರೆ ಗರ್ಭಾವಸ್ಥೆಯ ಮಾನಸಿಕ ಒತ್ತಡ ತಾಯಿ ಮತ್ತು ಮಗು ಇಬ್ಬರಿಗೂ ಒಳ್ಳೆಯದಲ್ಲ. ಅತಿ ಹೆಚ್ಚಿನ ಒತ್ತಡ ಮಗುವಿನ ತೂಕದ ಮೇಲೆ ನೇರ ಪರಿಣಾಮ ಬೀರುತ್ತದೆ. ಪರಿಣಾಮವಾಗಿ ಹುಟ್ಟುವಾಗ ಮಗುವಿನ ತೂಕ ಅತಿ ಕಡಿಮೆ ಇರುತ್ತದೆ. ಅಲ್ಲದೇ ಸಮಯಕ್ಕೂ ಮುನ್ನವೇ ಹೆರಿಗೆಯಾಗಲೂ ಬಹುದು.



Click it and Unblock the Notifications











