Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಗರ್ಭಿಣಿಯರೇ ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಇರಲಿ ಎಚ್ಚರ!
ಪ್ರಕೃತಿ ದತ್ತವಾದ ಕೊಡುಗೆಯಾಗಿರುವ ತಾಯ್ತನವೆಂಬುದು ಹೆಣ್ಣಿಗೆ ವರವಾಗಿದೆ. ಈ ಸಮಯಗಳಲ್ಲಿ ಆಕೆ ತನ್ನ ದೇಹದ ಕಡೆಗೆ ಆರೈಕೆಗೆ ಹೆಚ್ಚಿನ ಗಮನ ನೀಡಬೇಕಾಗುತ್ತದೆ. ತನ್ನೊಂದಿಗೆ ಇನ್ನೊಂದು ಜೀವವನ್ನು ಹೊರುವ ಒಡಲು ಕೆಟ್ಟದ್ದು ಒಳ್ಳೆಯದರ ಬಗೆಗೆ ಯೋಚಿಸಬೇಕು. ನಿಮಗೆ ಹೆಚ್ಚು ತ್ರಾಸನ್ನು ನೀಡುವ ಆಹಾರವನ್ನು ಸೇವಿಸಲೇಬಾರದು ಅಂತೆಯೇ ಬಾಯಿ ರುಚಿಯೆಂದು ಸಿಕ್ಕಸಿಕ್ಕದ್ದನ್ನೆಲ್ಲಾ ತುರುಕಬಾರದು ಇದರಿಂದ ನಂತರ ಉಂಟಾಗುವ ಸಮಸ್ಯೆಯನ್ನು ನೀವೇ ಅನುಭವಿಸಬೇಕಾಗುತ್ತದೆ.
ಅಂತೆಯೇ ಮಳೆಗಾಲದಲ್ಲಿಯೂ ಕೂಡ ಸಾಧ್ಯವಾದಷ್ಟು ಮುನ್ನೆಚ್ಚರಿಕೆಯನ್ನು ಪಾಲಿಸುವುದು ಅಷ್ಟೇ ಮುಖ್ಯ. ಗರ್ಭಿಣಿಯರು ಸೇವಿಸುವ ಆಹಾರವೇ ಒಡಲ ಕಂದನಿಗೂ ಆಹಾರವಾಗಿರುವುದರಿಂದ ಆಹಾರದ ಮೂಲಕ ಅನೈಚ್ಛಿಕವಾಗಿ ಸೇರುವ ವಿಷಕಾರಿ ಪದಾರ್ಥಗಳು ಕಂದನ ಹೊಟ್ಟೆಯನ್ನೂ ಸೇರುತ್ತವೆ. ಹಾಗಾಗಿ ಮಳೆಗಾಲದಲ್ಲಿ ಸೇವಿಸುವ ಆಹಾರದ ಕುರಿತು ಕೊಂಚ ಎಚ್ಚರಿಕೆ ವಹಿಸುವುದು ಅತ್ಯವಶ್ಯಕ.

ರಸ್ತೆ ಬದಿಯ ಆಹಾರದಿಂದ ಆದಷ್ಟು ದೂರವಿರಿ
ನೀವು ಆಹಾರವನ್ನು ಸೇವಿಸುವ ಪರಿಸರವು ಶುಚಿಯಾಗಿ ಮತ್ತು ಆರೋಗ್ಯಕರವಾಗಿದೆಯೇ ಎಂಬುದನ್ನು ಗಮನಿಸಿ. ತೆರೆದಿಟ್ಟ ಆಹಾರವನ್ನು ಯಾವುದೇ ಕಾರಣಕ್ಕು ಸೇವಿಸಲು ಹೋಗಬೇಡಿ. ಅದರಲ್ಲೂ ರಸ್ತೆ ಬದಿಯ ವ್ಯಾಪಾರಿಗಳ ಬಳಿ ಬೇಡವೇ ಬೇಡ. ಮಳೆಗಾಲದಲ್ಲಿ ರಸ್ತೆ ಬದಿಯ ಆಹಾರ ನಿಮ್ಮ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬುದನ್ನು ಮಾತ್ರ ಮರೆಯಬೇಡಿ.

ಮೀನಿನ ರುಚಿಗೆ ಮರುಳಾಗದಿರಿ
ಸಾಮಾನ್ಯವಾಗಿ ಕಾರ್ಖಾನೆಗಳ ತ್ಯಾಜ್ಯ ವಸ್ತುಗಳಿಂದ ಪಾದರಸವು ಕಡಲನ್ನು ಸೇರುತ್ತದೆ. ಹೀಗೆ ಸೇರಿದ ಪಾದರಸವು ಮೀಥೈಲ್ ಮರ್ಕುರಿಯಾಗಿ ಪರಿವರ್ತನೆಗೊಳ್ಳುತ್ತದೆ. ಈ ಅಪಾಯಕಾರಿ ಸಂಯುಕ್ತವು ಆ ಕಲುಷಿತ ನೀರಿನಲ್ಲಿರುವ ಮೀನುಗಳನ್ನು ಸೇರಿ ಅದರ ಮಾಂಸದೊಡನೆ ಒಂದುಗೂಡುತ್ತದೆ. ಕೆಲವೊಮ್ಮೆ ಮೀನನ್ನು ಸರಿಯಾಗಿ ಬೇಯಿಸಿದ ನಂತರವೂ ಅಲ್ಲೇ ಉಳಿಯುತ್ತದೆ.

ಎಣ್ಣೆ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡಿ
ದಿನನಿತ್ಯ ಆಹಾರಕ್ರಮದಲ್ಲಿ ತುಪ್ಪ, ಆಲೀವ್ ಎಣ್ಣೆ, ಜೋಳದ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯನ್ನು ಆಹಾರ ತಯಾರಿಸಲು ಬಳಸಿ. ಇವು ಲಘು ಎಣ್ಣೆಗಳು ಆರೋಗ್ಯಕ್ಕೆ ಉತ್ತಮ. ಸಾಸಿವೆ ಎಣ್ಣೆ, ಬೆಣ್ಣೆ, ಕಡಲೆ ಕಾಳು ಎಣ್ಣೆ ಮತ್ತು ಇನ್ನಿತರ ಭಾರವಾದ ಎಣ್ಣೆಗಳನ್ನು ಬಳಸಬೇಡಿ. ಈ ಎಣ್ಣೆಗಳು ಉಷ್ಣಕಾರಕ ಗುಣಗಳನ್ನು ಹೊಂದಿರುತ್ತವೆ.

ಮೊಟ್ಟೆಯಿಂದ ದೂರವಿರಿ
ಮೊಟ್ಟೆ ಸಾಮಾನ್ಯವಾಗಿ ಗರ್ಭಿಣಿಯರು ಮೊಟ್ಟೆಯನ್ನು ತುಂಬಾ ಇಷ್ಟಪಡುತ್ತಾರೆ. ಆದರೆ ಹಸಿ ಅಥವಾ ಅರೆಬೆಂದ ಮೊಟ್ಟೆಯು ಗರ್ಭಿಣಿ ಮಹಿಳೆಯರು ಕಡೆಗಣಿಸಬೇಕಾದ ಆಹಾರಗಳ ಪಟ್ಟಿಗೆ ಸೇರಲ್ಪಡುತ್ತದೆ. ಹಸಿ ಮೊಟ್ಟೆ ಹಾಕಿರುವಂತಹ ಪದಾರ್ಥಗಳಾದ ಕುಕ್ಕಿ ಡೌಗ್, ಕೇಕ್, ಮನೆಯಲ್ಲೇ ತಯಾರಿಸಿದ ಸಾಸ್ ಇತ್ಯಾದಿಗಳಿಂದ ಆದಷ್ಟು ದೂರವಿರುವುದೇ ಉತ್ತಮ.

ಬೆಳ್ಳುಳ್ಳಿಯನ್ನು ಸೇವಿಸಿ
ಸಾಮಾನ್ಯವಾಗಿ ಮಳೆಗಾಲದಲ್ಲಿ ಶೀತ, ಜ್ವರ, ಫ್ಲೂ, ಕೆಮ್ಮು ಮೊದಲಾದವು ಸುಲಭವಾಗಿ ಗರ್ಭಿಣಿಗೆ ಆವರಿಸುತ್ತವೆ. ಇದಕ್ಕೆ ಕುಂಠಿತಗೊಂಡ ರೋಗ ನಿರೋಧಕ ಶಕ್ತಿ ಕಾರಣ. ಆದರೆ ಬೆಳ್ಳುಳ್ಳಿಯ ಸೇವನೆ ಈ ಶಕ್ತಿ ಕುಂಠಿತಗೊಳ್ಳದಂತೆ ತಡೆಯುತ್ತದೆ ಹಾಗೂ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡಿ ಶೀತ, ಪ್ಲೂ ಜ್ವರ, ಕೆಮ್ಮು ನೆಗಡಿ ಮೊದಲಾದ ತೊಂದರೆಗಳಿಂದ ರಕ್ಷಿಸುತ್ತದೆ.

ದಿನನಿತ್ಯ ಎಳನೀರು ಕುಡಿಯಿರಿ
ಗರ್ಭಿಣಿಯಾದ ಮೊದಲ ಮೂರು ತಿಂಗಳಿನಲ್ಲಿ ಎಳನೀರನ್ನು ಸೇವಿಸುವುದರಿಂದ ಮುಂಜಾನೆ ಮಂಕುತನ, ಮಲಬದ್ಧತೆ, ಎದೆ ಉರಿ, ಸುಸ್ತು, ತಲೆ ಸುತ್ತುವಿಕೆ, ನಿರ್ಜಲೀಕರಣವನ್ನು ತಡೆಯಬಹುದು ಮತ್ತು ರೋಗ ನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸಿಕೊಳ್ಳಬಹುದು. ಅಲ್ಲದೆ ಇದು ನಮ್ಮ ದೇಹದಲ್ಲಿ ಕಳೆದು ಹೋಗಿರುವ ಉಪ್ಪಿನಂಶವನ್ನು ಸಹ ಮರು ತುಂಬಿಸುತ್ತದೆಯಂತೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಎಳನೀರು, ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಮೂತ್ರಾನಾಳದ ಇನ್ಫೆಕ್ಷನ್ ಅನ್ನು ತಡೆಯುತ್ತದೆ ಮತ್ತು ಅಧಿಕ ರಕ್ತ ಒತ್ತಡವನ್ನು ಕಡಿಮೆ ಮಾಡುತ್ತದೆ.



Click it and Unblock the Notifications











