Just In
- 39 min ago ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- 2 hrs ago ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- 2 hrs ago ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- 5 hrs ago ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
Don't Miss
- Automobiles Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಜೆತನ ಸಮಸ್ಯೆ ವಿರುದ್ಧ ಹೋರಾಡುವ ಶಕ್ತಿಶಾಲಿ ಆಹಾರಗಳಿವು...
ಹೂವೊಂದು ಬೇಕು ಬಳ್ಳಿಗೆ, ಮಗುವೊಂದು ಬೇಕು ಹೆಣ್ಣಿಗೆ ಎಂದು ಕವಿಗಳು ಹಾಡಿ ಹೊಗಳಿದ್ದಾರೆ. ಹೌದು, ಒಂದು ಹೆಣ್ಣು ಪರಿಪೂರ್ಣಳೆಂದು ಭಾವಿಸುವುದು ತಾನು ತಾಯಿಯಾದಾಗ ಮಾತ್ರ. ಇಂದಿನ ದಿನಗಳಲ್ಲಿ ಈ ಬಯಕೆ ಈಡೇರದಿರುವ ಬಹಳಷ್ಟು ಪ್ರಕರಣಗಳು ಕಂಡುಬರುತ್ತವೆ. ತಾಯಿಯಾಗಲು ಪತಿ, ಪತ್ನಿ ಇಬ್ಬರ ಪಾತ್ರವೂ ಸಮಾನವಾಗಿದೆ. ಆದರೂ ಸಮಾಜ ಈ ವೈಫಲ್ಯತೆಗೆ ಹೆಣ್ಣನ್ನೇ ದೂಷಿಸುತ್ತದೆ. ಅಕ್ಕಪಕ್ಕದವರ ಚುಚ್ಚುನುಡಿಗಳಿಂದ ಮೊದಲೇ ಮಗುವಾಗದ ಸಂಕಟ ನೂರ್ಮಡಿಗೊಂಡು ಜೀವನದ ಸಂತಸವನ್ನೇ ನುಂಗಿಹಾಕುತ್ತದೆ.
ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸುವ 10 ವೆಜ್ ಫುಡ್ಸ್
ಇತ್ತೀಚೆಗೆ ಬಂಜೆತನವೆನ್ನುವುದು ವಿಶ್ವಮಟ್ಟದಲ್ಲಿ ದೊಡ್ಡ ಸಮಸ್ಯೆಯಾಗಿ ಬೆಳೆಯುತ್ತಿದೆ. ಇದಕ್ಕೆ ಹಲವಾರು ಕಾರಣಗಳು ಇದೆ. ಆಧುನಿಕ ಜೀವನಶೈಲಿ, ಒತ್ತಡ ಇತ್ಯಾದಿಗಳು. ಆದರೆ ನಮ್ಮ ದೈನಂದಿನ ಕೆಲವೊಂದು ಚಟುವಟಿಕೆಯಿಂದಲೂ ಬಂಜೆತನ ಬರುತ್ತದೆ ಎಂದು ಕೆಲವೊಂದು ಅಧ್ಯಯನಗಳು ಕಂಡುಕೊಂಡಿವೆ. ಯಾವುದೇ ಗರ್ಭನಿರೋಧಕ ಕ್ರಮಗಳನ್ನು ಅನುಸರಿಸಿದೆ ಮಕ್ಕಳಾಗದೆ ಇದ್ದಾಗ ಇದನ್ನು ಬಂಜೆತನವೆಂದು ಕರೆಯಲಾಗುತ್ತದೆ.
ಪುರುಷರ ಫಲವತ್ತತೆಯನ್ನು ಹೆಚ್ಚಿಸಿಕೊಳ್ಳಲು ಒಂದಿಷ್ಟು ಸಲಹೆಗಳು
ಆದರೆ ನೆನಪಿಡಿ ಬಂಜೆತನಕ್ಕೆ ಪುರುಷ ಮತ್ತು ಸ್ತ್ರೀ ಇಬ್ಬರೂ ಸಮಾನವಾಗಿ ಕಾರಣರಾಗಿದ್ದಾರೆ, ಇದಕ್ಕೆ ಮಹಿಳೆಯನ್ನೇ ದೂಷಿಸುವುದು ಸರಿಯಲ್ಲ.. ಒಂದು ವೇಳೆ ತೊಂದರೆ ಮಹಿಳೆಯಲ್ಲಿದೆ ಎಂದರೆ ಅದಕ್ಕೆ ಹಲವಾರು ಕಾರಣಗಳಲ್ಲಿವೆ. ದೇಹದಲ್ಲಿ ಹಾರ್ಮೋನುಗಳ ಸ್ರವಿಕೆಯಲ್ಲಿ ಏರುಪೇರು, ಸಾಕಷ್ಟು ಪೌಷ್ಟಿಕ ಆಹಾರವಿಲ್ಲದಿರುವುದು, ಋತುಚಕ್ರದಲ್ಲಿ ಏರುಪೇರು, ಗರ್ಭನಾಳದಲ್ಲಿ ಸೋಂಕು ಮೊದಲಾದ ಹಲವು ತೊಂದರೆಗಳಿವೆ. ಚಿಂತಿಸದಿರಿ ಕೆಲವೊಂದು ಆಹಾರಗಳ ಸಮರ್ಪಕ ಸೇವನೆಯಿಂದ ಹಾರ್ಮೋನುಗಳ ಏರುಪೇರು ಸರಿಯಾಗಿ ಸಂತಾನಫಲ ಬಯಸುವ ಪ್ರತಿ ಹೆಣ್ಣಿಗೂ ಆಶಾಭಾವನೆ ಮೂಡಿಸುತ್ತದೆ....
ಆಹಾರಕ್ರಮದಲ್ಲಿ ಬೆಳ್ಳುಳ್ಳಿಗೆ ಆದ್ಯತೆ ನೀಡಿ
ಬೆಳ್ಳುಳ್ಳಿಯಲ್ಲಿರುವ ಸೆಲೆನಿಯಂ ಎಂಬ ಖನಿಜ ಫಲಿತವಾಗಿದ್ದ ಅಂಡಾಣು ಸುಲಭವಾಗಿ ದೇಹದಿಂದ ಹೊರಹೋಗದಂತೆ ತಡೆಯುತ್ತದೆ. ಇದರಿಂದಾಗಿ ಗರ್ಭ ನಿಲ್ಲುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ ಫಲವತ್ತತೆಯ ನಿಟ್ಟಿನಲ್ಲಿ ಬೆಳ್ಳುಳ್ಳಿ ಅಗ್ರಸ್ಥಾನದಲ್ಲಿ ನಿಲ್ಲುತ್ತದೆ.
ಎಲೆಕೋಸು
ಸಾಮಾನ್ಯವಾಗಿ ಎಲೆಕೋಸು ಎಂದರೆ ನಮಗೆಲ್ಲಾ ಒಂದು ರೀತಿಯ ಅಸಡ್ಡೆ. ಆದರೆ ಗರ್ಭಧರಿಸಲು ಬಯಸುವ ಮಹಿಳೆಯ ಮಟ್ಟಿಗೆ ಮಾತ್ರ ಎಲೆಕೋಸು ಅತ್ಯಂತ ಉಪಯುಕ್ತ ತರಕಾರಿಯಾಗಿದೆ. ಇದರಲ್ಲಿರುವ di-indole methane ಎಂಬ ಪೋಷಕಾಂಶ ಮಹಿಳೆಯರ ದೇಹದಲ್ಲಿ ಸ್ರವಿತವಾಗುವ ಈಸ್ಟ್ರೋಜೆನ್ ಎಂಬ ಹಾರ್ಮೋನು ಸೂಕ್ತಪ್ರಮಾಣದಲ್ಲಿ ಹಾಗೂ ಕ್ಲುಪ್ತಕಾಲದಲ್ಲಿ ಸ್ರವಿಸಿ fibroids ಮತ್ತು endometriosis ಎಂಬ ಕಾರ್ಯಗಳು ಜರುಗಲು ನೆರವಾಗುತ್ತದೆ. ಎಲೆಕೋಸನ್ನು ಆಯ್ದುಕೊಳ್ಳುವಾಗ ಮೇಲಿನ ತುದಿಯನ್ನು ಬೆರಳಿನಿಂದ ಒತ್ತಿದರೆ ಗಟ್ಟಿಯಾಗಿ ಕಲ್ಲಿನಂತಿರುವ ಕೋಸನ್ನು ಆರಿಸಿಕೊಳ್ಳಬೇಕು. ಮೆದುವಾಗಿ ಒತ್ತಿದರೆ ಸ್ಪಂಜಿನಂತಿರುವ ಕೋಸು ಪೋಷಕಾಂಶಗಳ ಮಟ್ಟಿಗೆ ಉಪಯುಕ್ತವಲ್ಲ.
ವಿಟಮಿನ್ ಡಿ ಕೊರತೆ ಎದುರಾಗದಂತೆ ನೋಡಿ...
ವಿಟಮಿನ್ ಡಿ ಕೊರತೆಯಿಂದಾಗಿ ಬಂಜೆತನ ಅಥವಾ ಗರ್ಭಪಾತವಾಗಬಹುದು. ಇದರಿಂದ ಬೆಳಿಗ್ಗೆ ಹಾಗು ಸಂಜೆ ವೇಳೆ ಬಿಸಿಲಿಗೆ ಮೈಯೊಡ್ಡಿ. ಮೊಟ್ಟೆ, ಗಿಣ್ಣು ಮತ್ತು ಸಾಲ್ಮನ್ ನಂತಹ ಆಹಾರ ಸೇವನೆಯಿಂದ ವಿಟಮಿನ್ ಡಿ ಕೊರತೆಯನ್ನು ನೀಗಿಸಬಹುದು.
ಒಂದು ಲೋಟ ದಾಳಿಂಬೆ ಜ್ಯೂಸ್ ಪ್ರತಿದಿನ ಸೇವಿಸಿ...
ಸಂತಾನೋತ್ಪತ್ತಿಯ ಭಾಗಗಳಿಗೆ ರಕ್ತದ ಪರಿಚಲನೆಯನ್ನು ಉತ್ತೇಜಿಸಲು ದಾಳಿಂಬೆ ನೆರವಾಗುತ್ತದೆ. ಇದು ಗರ್ಭಪಾತದ ಸಮಸ್ಯೆಯನ್ನು ಕಡಿಮೆಗೊಳಿಸುತ್ತದೆ. ಭ್ರೂಣದ ಬೆಳವಣಿಗೆಗೂ ಇದು ಸಹಕಾರಿ. ಒಂದು ಲೋಟ ದಾಳಿಂಬೆ ಜ್ಯೂಸ್ ಅನ್ನು ಪ್ರತೀ ದಿನ ಸೇವಿಸಿ.
ಅಶ್ವಗಂಧದ ಪುಡಿ
ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ಒಂದು ಚಮಚ ಅಶ್ವಗಂಧದ ಹುಡಿಯನ್ನು ಹಾಕಿಕೊಂಡು ಸರಿಯಾಗಿ ಮಿಶ್ರಣ ಮಾಡಿಕೊಳ್ಳಿ. ದಿನದಲ್ಲಿ ಎರಡು ಸಲ ಇದನ್ನು ಕುಡಿಯಿರಿ. ಆದರೆ ಇದನ್ನು ಸೇವಿಸುವ ಮೊದಲು ವೈದ್ಯರ ಸಲಹೆ ಪಡೆಯಿರಿ.
ಮೊಟ್ಟೆ
ಕೋಳಿಮೊಟ್ಟೆ ಫಲವತ್ತತೆಗೆ ಅತ್ಯುತ್ತಮವಾದ ಆಹಾರವಾಗಿದೆ. ಇದರಲ್ಲಿ ಹೆಚ್ಚಿನ ಪ್ರಮಾಣದ ಕೋಲಿನ್, ಫೋಲಿಕ್ ಆಮ್ಲ, ಒಮೆಗಾ ೩ ಕೊಬ್ಬಿನ ಆಮ್ಲ (omega 3 fatty acid) ಮತ್ತು ವಿಟಮಿನ್ ಡಿ ಇದ್ದು ಎಲ್ಲವೂ ಗರ್ಭಾಂಕುರಕ್ಕೆ ನೆರವಾಗುತ್ತವೆ.
ಆಲೂಗಡ್ಡೆ
ಗರ್ಭವತಿಯಾಗ ಬಯಸುವ ಪ್ರತಿಯೊಬ್ಬ ಮಹಿಳೆಯೂ ನಿಯಮಿತವಾಗಿ ಬೇಯಿಸಿದ ಆಲೂಗಡ್ಡೆಯನ್ನು ತಮ್ಮ ಆಹಾರದಲ್ಲಿ ಕಡ್ಡಾಯವಾಗಿ ಸೇರಿಸಬೇಕು. ಏಕೆಂದರೆ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಬಿ ಮತ್ತು ಇ ಜೀವಕೋಶಗಳ ಉತ್ಪತ್ತಿಗೆ ಸಹಕರಿಸುತ್ತವೆ. ಅಂಡಾಶಯದಲ್ಲಿ ಆರೋಗ್ಯವಂತ ಅಂಡ ಉತ್ಪತ್ತಿಯಾಗಲು ಈ ಎರಡು ವಿಟಮಿನ್ ಗಳು ಅತ್ಯಗತ್ಯವಾಗಿವೆ.
ಹಸಿರು ಎಲೆತರಕಾರಿಗಳು
ತಜ್ಞರ ಪ್ರಕಾರ ಗಾಢ ಹಸಿರು ಬಣ್ಣದ ಎಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೋಲಿಕ್ ಆಮ್ಲ ಮತ್ತು ಕಬ್ಬಿಣ ಇರುವುದರಿಂದ ಗರ್ಭಧರಿಸಲು ಬಯಸುವ ಮಹಿಳೆಯರಿಗೆ ಅತ್ಯುತ್ತಮವಾದ ಆಹಾರವಾಗಿದೆ. ಈ ಪೋಷಕಾಂಶಗಳು ಗರ್ಭಾಶಯದ ಒಳಭಾಗದ ಪದರವನ್ನು ಬಲಪಡಿಸುತ್ತದೆ. ವಿಶೇಷವಾಗಿ ಕಬ್ಬಿಣ ಅಂಡವನ್ನು ಗರ್ಭಾಶಯದಲ್ಲಿ ಅಂಟಿಕೊಂಡಿರಲು ಸಹಕರಿಸುತ್ತದೆ. ಬಸಲೆ, ಪಾಲಕ್ ಮೊದಲಾದ ಸೊಪ್ಪುಗಳು ಉತ್ತಮವಾಗಿವೆ.
ದಿನಿನಿತ್ಯದ ಆಹಾರಕ್ರಮದಲ್ಲಿ ಚಿಟಿಕೆಯಷ್ಟು ಅರಿಶಿನ
ಭಾರತೀಯರು ಹೆಚ್ಚಾಗಿ ತಮ್ಮ ಅಡುಗೆಗಳಲ್ಲಿ ಅರಿಶಿನವನ್ನು ಹಿಂದಿನಿಂದಲೂ ಬಳಸುತ್ತಾ ಬಂದಿದ್ದಾರೆ. ಆರೋಗ್ಯವನ್ನು ದೃಷ್ಟಿಯಲ್ಲಿರಿಸಿಕೊಂಡೇ ಅರಿಶಿನವನ್ನು ಅಡುಗೆಯಲ್ಲಿ ಬಳಸಲಾಗುತ್ತಿದೆ. ಅದರಲ್ಲೂ ನಿಯಮಿತವಾಗಿ ಅರಿಶಿನವನ್ನು ದಿನನಿತ್ಯದ ಅಡುಗೆಯಲ್ಲಿ ಬಳಸುವುದರಿಂದ ಇದರಲ್ಲಿರುವ ಹೆಚ್ಚಿನ ಪ್ರಮಾಣದಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮಹಿಳೆಯರಲ್ಲಿ ಗರ್ಭಧರಿಸುವ ಸಂಭವತೆಯನ್ನು ಹೆಚ್ಚಿಸುತ್ತದೆ.