Just In
- 1 hr ago ವೃಷಭ ರಾಶಿಗೆ ಗುರು ಸಂಚಾರ: 11ನೇ ಮನೆಯಲ್ಲಿ ಗುರು ಕರ್ಕ ರಾಶಿಯವರಿಗೆ ಅದೃಷ್ಟವೋ ಅದೃಷ್ಟ
- 3 hrs ago ವೃಷಭ ರಾಶಿಗೆ ಗುರು ಸಂಚಾರ: 12ನೇ ಮನೆಯಲ್ಲಿ ಗುರು ಮಿಥುನ ರಾಶಿಯ ಮೇಲೆ ಬೀರುವ ಪ್ರಭಾವ ಹೇಗಿರಲಿದೆ?
- 3 hrs ago ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- 17 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
Don't Miss
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧುಮೇಹ ಇರುವ ಗರ್ಭಿಣಿಯರು ವಿಶೇಷ ಕಾಳಜಿ ವಹಿಸಬೇಕು
ಗರ್ಭಾವಸ್ಥೆಯಲ್ಲಿರುವಾಗ ತಾಯಿ ಹಾಗೂ ಮಗುವಿನ ಆರೋಗ್ಯ ಬಹಳ ಮುಖ್ಯವಾಗಿರುತ್ತದೆ. 28 ವಾರಗಳ ನಂತರ ಮಗುವಿನ ಚಟುವಟಿಕೆಯು ಹೆಚ್ಚುತ್ತದೆ. ಈ ಸಮಯದಲ್ಲಿ ತಾಯಿಯ ಆರೋಗ್ಯವೂ ಹೆಚ್ಚು ಪೂರಕವಾಗಿರಬೇಕಾಗುವುದು. ಈ ಸಂದರ್ಭದಲ್ಲಿ ತಾಯಿಯ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನ್ಗಳ ವ್ಯತ್ಯಾಸದಿಂದಲೂ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುತ್ತವೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚುವುದರ ಜೊತೆಗೆ ಮಧುಮೇಹದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ತಾಯಿ ತನ್ನ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವ ಅನಿವಾರ್ಯತೆ ಇರುತ್ತದೆ. ಹಾಗಂತ ಮಗುವಿನ ಬೆಳವಣಿಗೆಗೆ ಮಾರಕವಾಗುವಂತಹ ವ್ಯಾಯಾಮ ಹಾಗೂ ಪಥ್ಯಗಳನ್ನು ಮಾಡುವಂತಿಲ್ಲ. ಮಧುಮೇಹ ಇರುವ ಮಹಿಳೆಯರು ಯಾವ ಬಗೆಯ ಆರೋಗ್ಯ ಆರೈಕೆ ಮಾಡಿಕೊಳ್ಳಬೇಕು ಎನ್ನುವ ಸಂಕ್ಷಿಪ್ತ ವಿವರಣೆ ಇಲ್ಲಿದೆ ನೋಡಿ...
ಗರ್ಭಾವಸ್ಥೆಯಲ್ಲಿ ಯಾವ ವ್ಯಾಯಾಮ ಒಳ್ಳೆಯದು?
ಭಾರವನ್ನು ಎತ್ತುವಂತಹ ವ್ಯಾಯಾಮಗಳನ್ನು ಈ ಸಂದರ್ಭದಲ್ಲಿ ನಿರ್ಲಕ್ಷಿಸಬೇಕು. ಲಘು ವ್ಯಾಯಾಮಗಳಾದ ವಾಕಿಂಗ್ ಹಾಗೂ ನೀರಲ್ಲಿ ಈಜುವುದು ಉತ್ತಮವಾದದ್ದು.
ಪ್ರಸವದ ಸಂದರ್ಭದ ಕಾಳಜಿ
ಪ್ರಸವದ ಸಮಯ ಹತ್ತಿರವಾಗುತ್ತಿದ್ದಂತೆ ಅತಿ ಹೆಚ್ಚು ಕಾಳಜಿ ವಹಿಸಬೇಕು. ರಕ್ತದಲ್ಲಿ ಸಕ್ಕರೆ ಪ್ರಮಾಣ ಸಮತೋಲನದಲ್ಲಿ ಇರಬೇಕು. ಇಲ್ಲವಾದರೆ ಸಮತೋಲನದ ಸ್ಥಿತಿಗೆ ಬಹಳ ಹತ್ತಿರವಾಗಿಯಾದರೂ ಇರಬೇಕು. ಪ್ರಸವದ ಸಮಯ ಹತ್ತಿರವಾದಂತೆ ರಕ್ತ ಪರೀಕ್ಷೆಯನ್ನು ಆಗಾಗ ಮಾಡಿಸುತ್ತಿರಬೇಕು. ಮಧುಮೇಹ ಮುಂದುವರಿದಿದ್ದರೆ ಎದೆ ಹಾಲು ಉಣ್ಣುವವರೆಗೂ ಇನ್ಸುಲಿನ್ಅನ್ನು ಮುಂದುವರಿಸಬೇಕಾಗಿರುತ್ತದೆ.
ಮಗುವಿಗೆ ಮಧುಮೇಹ ಬರುವುದೇ?
ಮಗುವಿನ ಸಕ್ಕರೆ ಪ್ರಮಾಣ ಸಾಮಾನ್ಯವಾಗಿರುತ್ತದೆ. ಮಗುವಿನ ದೇಹದಲ್ಲಿ ಸಕ್ಕರೆ ಪ್ರಮಾಣವು ಕಡಿಮೆಯಾಗಿರುತ್ತದೆ. ಆದರೆ ತಾಯಿಯ ಎದೆ ಹಾಲು ಉಣಿಸುವುದರಿಂದ ಮಧುಮೇಹ ಬರುವ ಸಾಧ್ಯತೆ ಇರುತ್ತದೆ. ಹಾಗಾಗಿಯೇ ತಾಯಿ ಇನ್ಸುಲಿನ್ ಸ್ವೀಕರಿಸಬೇಕಾಗುವುದು. ಎದೆಹಾಲು ಉಣಿಸುವುದರ ಬಗ್ಗೆ ಸೂಕ್ತ ಕಾಳಜಿ ನೀಡಬೇಕು.
ಯಾವ ಕ್ರಮ ಕೈಗೊಳ್ಳಬೇಕು?
ಮಧುಮೇಹ ಹೊಂದಿರುವ ತಾಯಿ ಪ್ರಸವದ 6 ವಾರದ ಬಳಿಕ ಗ್ಲೂಕೋಸ್ ಟೊಲೆರೆನ್ಸ್ ಪರೀಕ್ಷೆಗೆ ಒಳಪಡಬೇಕು. ಆಗ ಮಧುಮೇಹ ಇದೆಯೇ? ಇಲ್ಲವೇ? ಎನ್ನುವುದನ್ನು ಕಂಡು ಹಿಡಿಯಬಹುದು. ಭವಿಷ್ಯದಲ್ಲಿ ನಿಮಗೆ ಮಧುಮೇಹ ಬರುವ ಸಾಧ್ಯತೆ ಇರುತ್ತದೆ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮುನ್ನೆಚ್ಚರಿಕೆ ಅತ್ಯಗತ್ಯವಾಗಿರುತ್ತದೆ. ಆರೋಗ್ಯಕರ ಆಹಾರ ಹಾಗೂ ನಿಯಮಿತವಾದ ವ್ಯಾಯಾಮಗಳನ್ನು ಮಾಡಬೇಕು. ಗರ್ಭಾವಸ್ಥೆಗೆ ಒಳಗಾಗುವ ಮುಂಚೆ ನೀವು ಟೈಪ್ 1 ಮತ್ತು ಟೈಪ್ 2ರ ಮಧುಮೇಹ ಹೊಂದಿದವರಾಗಿದ್ದೀರಾ? ಎನ್ನುವುದನ್ನು ಪರೀಕ್ಷಿಸಿಕೊಳ್ಳಿ. ಗರ್ಭಾವಸ್ಥೆಯಲ್ಲಿ ಮಧುಮೇಹ ಮುಂದುವರಿದಿದ್ದರೆ ಫೋಲಿಕ್ ಆಸಿಡ್ ವಿಟಮಿನ್ 5ಎಮ್ಜಿ ಮಾತ್ರೆಯನ್ನು ನಿತ್ಯವೂ ಸೇವಿಸಬೇಕು.