Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ರಾಮಮಂದಿರ ಉದ್ಘಾಟನೆ ದಿನ ಮನೆಯಲ್ಲಿ ರಾಮನ ಪೂಜಿಸಿ ನೈವೇದ್ಯ ಅರ್ಪಿಸಲು 3 ರೆಸಿಪಿ
ಜನವರಿ 22ಕ್ಕೆ ರಾಮ ಮಂದಿರ ಉದ್ಘಾಟನೆ. ಈ ದಿನದಂದು ಎಲ್ಲಾ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಗುವುದು, ಹಿಂದೂಗಳ ಮನೆ-ಮನೆಗಳಲ್ಲಿ ಶ್ರೀರಾಮನಿಗೆ ಪೂಜೆ ಸಲ್ಲಿಸಲಾಗುವುದು, ಶ್ರೀರಾಮನಿಗೆ ಪೂಜೆ ಸಲ್ಲಿಸುವಾಗ ನೈವೇದ್ಯವಾಗಿ ಇವುಗಳನ್ನು ಅರ್ಪಿಸಬಹುದು.

ರೆಸಿಪಿ 1
ಅಕ್ಕಿಪಾಯಸ
ಬಾಸುಮತಿ ಅಕ್ಕಿ 1/2ಕಪ್
ಬಾದಾಮಿ 6-8
ಪಿಸ್ತಾ 6-8
ಒಣದ್ರಾಕ್ಷಿ 8-10
ಹಾಲು 1 ಲೀಟರ್
ಸಕ್ಕರೆ 3/4 ಕಪ್
ಏಲಕ್ಕಿ 3-4
ಸ್ವಲ್ಪ ಕೇಸರಿ
ವಿಧಾನ
ಅಕ್ಕಿಯನ್ನು ತೊಳೆದು 15 ನಿಮಿಷ ನೆನೆಹಾಕಿ, ನಂತರ ಅದರ ನಿರನ್ನು ಸೋಸಿ,ನೀರಿನಂಶ
ಸಂಪೂರ್ಣ ಹೋಗಿರಬೇಕು, ತರಿತರಿಯಾಗಿ ರುಬ್ಬಿ.
* ಬಾದಾಮಿ, ಪಿಸ್ತವನ್ನು ಚಿಕ್ಕದಾಗಿ ಕತ್ತರಿಸಿ
* ನಂತರ ದಪ್ಪ ತಳವಿರುವ ಪಾತ್ರೆಯಲ್ಲಿ ಹಾಲು ಬಿಸಿ ಮಾಡಿ
* ಅದಕ್ಕೆ ಅಕ್ಕಿಪುಡಿ, ಸಕ್ಕರೆ ಸೇರಿಸಿ, ಏಲಕ್ಕಿ ಗುದ್ದಿ ಹಾಕಿ, ನಂತರ ಬೆಂದ
ಮೇಲೆ ಪಿಸ್ತಾ, ಬಾದಾಮಿಯಿಂದ ಅಲಂಕರಿಸಿ.
ರೆಸಿಪಿ 2
ಬೇಕಾಗುವ ಸಾಮಗ್ರಿ
1/2 ಕಪ್ ಹೆಸರು ಬೇಳೆ
1 ಹಸಿ ಮೆಣಸಿನಕಾಯಿ
1 ಚಮಚ ಸೌತೆ
1 ಚಮಚ ತೆಂಗಿನತುರಿ
2 ಚಮಚ ಕೊತ್ತಂಬರಿ ಸೊಪ್ಪು
ರುಚಿಗೆ ತಕ್ಕ ಉಪ್ಪು
1 ಚಮಚ ನಿಂಬೆರಸ
ಮಾಡುವ ವಿಧಾನ
ಹೆಸರುಬೇಳೆಯನ್ನು ಒಂದು ಗಂಟೆ ಕಾಲ ನೆನೆ ಹಾಕಿ, ನಂತರ ಅದರ ನೀರನ್ನು ಚೆನ್ನಾಗಿ
ಸೋಸಿ, ನಂತರ ಉಳಿದೆಲ್ಲಾ ಸಾಮಗ್ರಿ ಸೇರಿಸಿ ಮಿಕ್ಸ್ ಮಾಡಿ, ನಂತರ 1 ಚಮಚ ನಿಂಬೆರಸ
ಹಾಕಿ ಮಿಕ್ಸ್ ಮಾಡಿ ಶ್ರೀರಾಮನಿಗೆ ನೈವೇದ್ಯವನ್ನಾಗಿ ಅರ್ಪಿಸಿ.
ರೆಸಿಪಿ 3
ಕಡ್ಲೆ ಕಾಳು ಉಸಳಿ
ಇದನ್ನು ಕೂಡ ನೈವೇದ್ಯವನ್ನಾಗಿ ಇಡಲಾಗುವುದು.
ಬೇಕಾಗುವ ಸಾಮಗ್ರಿ
1/4 ಕೆಜಿ ಕಡ್ಲೆಕಾಳು (ರಾತ್ರಿಯೇ ನೆನೆಹಾಕಿ), ಬೇಯಿಸಿ
ಕೊತ್ತಂಬರಿಸೊಪ್ಪು 1-2 ಚಮಚ
ಎಣ್ಣೆ 1 ಚಮಚ
ಹಸಿ ಮೆಣಸು 2-3 ಚಮಚ
ಸ್ವಲ್ಪ ಶುಂಠಿ ಪುಡಿ
ಜೀರಿಗೆ ಪುಡಿ1/2 ಚಮಚ
ಅರಿಶಿಣ ಪುಡಿ 1/4 ಚಮಚ
ಕೊತ್ತಂಬರಿ ಪುಡಿ 1 ಚಮಚ
ಮ್ಯಾಂಗೋ ಪುಡಿ 1/4 ಚಮಚ
ಗರಂ ಮಸಾಲ 1/4 ಚಮಚ
ರುಚಿಗೆ ತಕ್ಕ ಉಪ್ಪು
ಮಾಡುವ ವಿಧಾನ
* ಮೊಡಲು ಕಡ್ಲೆಗೆ ರುಚಿಗೆ ತಕ್ಕ ಉಪ್ಪು ಸೇರಿಸಿ ಬೇಯಿಸಿ
* ನಂತರ ಪ್ಯಾನ್ಗೆ ಎಣ್ಣೆ ಹಾಕಿ ಬಿಸಿ ಮಾಡಿ ನಂತರ ಅದಕ್ಕೆ ಜೀರಿಗೆ ಹಾಕಿ,
ಜೀರಿಗೆ ಚಟ್ಪಟ್ ಶಬ್ದ ಮಾಡುವಾಗ ಬೇಯಿಸಿದ ಕಡ್ಲೆ, ನಂತರ ಇತರ ಉಳಿದ ಸಾಮಗ್ರಿ
ಹಾಕಿ ಒಂದು 5 ನಿಮಿಷ ಫ್ರೈ ಮಾಡಿ, ನಂತರ ಕೊತ್ತಂಬರಿ ಸೊಪ್ಪು ಹಾಕಿ ಮಿಕ್ಸ್
ಮಾಡಿ, ನಂತರ ಇದನ್ನು ಪೂಜೆಗೆ ಬಂದವರಿಗೆ ಪ್ರಸಾದವನ್ನಾಗಿ ಮಾಡಬಹುದು.



Click it and Unblock the Notifications