Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಆಹಾ, ಸವಿಯಲು ಬಲು ರುಚಿ 'ಆಲೂ ಸಮೋಸಾ'
ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿಬಿಸಿಯಾದ ಚಹಾ ಹಾಗೂ ಅದರೊಟ್ಟಿಗೆ ನಾಲಿಗೆ ಚಪ್ಪರಿಸುವಂತಹ ತಿಂಡಿಯಿದ್ದರೆ ಅದರ ಅದ್ಭುತವೇ ಬೇರೆ. ಇಂತಹ ಸುಂದರ ಅನುಭವಕ್ಕೆ ಆರೋಗ್ಯಕರ ತಿಂಡಿಯಾದರೆ ಇನ್ನಷ್ಟು ದೇಹವು ಉತ್ಸುಕವಾಗಿರುತ್ತದೆ. ನಿಜ, ಸಂಜೆಯ ಲಘು ಉಪಹಾರಕ್ಕೆ ಒಂದು ಉತ್ತಮವಾದ ತಿಂಡಿ ಆಲೂ ಸಮೋಸಾ.
ಇದರಲ್ಲಿ ಪನ್ನೀರ್, ತರಕಾರಿ ಹಾಗೂ ಇನ್ನಿತರ ಆರೋಗ್ಯಕರ ಅಂಶ ಇರುವುದರಿಂದ ರುಚಿಯೊಂದಿಗೆ ಉತ್ತಮವಾದ ಆರೈಕೆಯೂ ಸಿಗುವುದು. ಹಾಗಾದರೆ ಬನ್ನಿ ಈ ರುಚಿಕರ ತಿಂಡಿಯನ್ನು ತಯಾರಿಸುವ ವಿಧಾನವನ್ನು ಅರಿಯೋಣ...

ಬೇಕಾಗುವ ಸಾಮಾಗ್ರಿಗಳು:
* 250 ಗ್ರಾಂ ಮೈದಾ
ಹಿಟ್ಟು
* 2 ಕಪ್ ಬೇಯಿಸಿದ ಆಲೂಗಡ್ಡೆಯ ಚೂರುಗಳು
* ಹಸಿರು ಬಟಾಣಿ ಸ್ವಲ್ಪ
* ಮೆಣಸಿನ ಕಾಯಿ ಸ್ವಲ್ಪ
* ಕಡಲೇಕಾಯಿ/ಶೇಂಗಾ ಸ್ವಲ್ಪ
* ಜೀರಿಗೆ ಸ್ವಲ್ಪ
* ಗರಮ್ ಮಸಾಲ
* ಚಾಟ್ ಮಸಾಲ
* ಹುಳಿ ಪುಡಿ/ಮಾವಿನ ಹುಳಿ ಪುಡಿ
* ಜೀರಿಗೆ ಪುಡಿ
* ಉಪ್ಪು
* ಮೆಣಸಿನ ಪುಡಿ/ಖಾರ ಪುಡಿ
* ಅರಿಶಿನ
* ಓಮ್ ಕಾಳು
* ಹುರಿಯಲು ಎಣ್ಣೆ
* ಬಿಸಿ ನೀರು
* ಸಮೋಸಾ ಮಾಡಲು ತುಪ್ಪ
ವಿಧಾನ:
1. ಬೆಚ್ಚಗಿನ ನೀರಿಗೆ ತುಪ್ಪ, ಉಪ್ಪು, ಓಮ್ಕಾಳು ಒಂದು ಚಮಚ ಎಲ್ಲವನ್ನು ಸೇರಿಸಿ
ಮೃದುವಾಗಿ ಹಿಟ್ಟನ್ನು ಕಲಸಿ, 30 ನಿಮಿಷಗಳ ಕಾಲ ಬಿಡಿ.
2. ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ ಜೀರಿಗೆಯನ್ನು ಹುರಿಯಿರಿ.
ನಂತರ ಮೆಣಸಿನ ಕಾಯಿ, ಅರಿಶಿನ, ಜೀರಿಗೆ ಪುಡಿ, ಹುಳಿ ಪುಡಿಯನ್ನು ಸೇರಿಸಿ.
3. ಆಲೂಗಡ್ಡೆ, ಹಸಿರು ಬಟಾಣಿ, ಹಸಿರು ಮೆಣಸಿನ ಕಾಯಿ, ಕಡಲೇ ಬೀಜವನ್ನು ಸೇರಿಸಿ.
ಚೆನ್ನಾಗಿ ಮಿಶ್ರಣಗೊಳಿಸಿ. ನಂತರ ಉಪ್ಪು, ಗರಮ್ ಮಸಾಲೆ, ಚಾಟ್ ಮಸಾಲೆಯನ್ನು
ಸೇರಿಸಿ ಮಿಶ್ರಣಗೊಳಿಸಿ. ಬಳಿಕ ಉರಿಯಿಂದ ಕೆಳಗಿಳಿಸಿ.
4. ಕಲಸಿಟ್ಟುಕೊಂಡ ಹಿಟ್ಟನ್ನು ಚಿಕ್ಕ ತ್ರಿಕೋನ ಆಕಾರದಲ್ಲಿ ಲಟ್ಟಿಸಿಕೊಂಡು
ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ. ನಂತರ ಬೆರಳುಗಳ ಸಹಾಯದಿಂದ ಮುಚ್ಚಿ.
5. ಹುರಿಯಲು ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿರಿ. ಕಾದ ತಕ್ಷಣ
ತ್ರಿಭುಜಾಕೃತಿಯ ಸಮೋಸವನ್ನು ಎಣ್ಣೆಯಲ್ಲಿ ಬಿಡಿ.
6. ಎಣ್ಣೆಯಲ್ಲಿ ನೊರೆಯಗುಳ್ಳೆಗಳು ಕಡಿಮೆಯಾದಂತೆ ಕಂದು ಬಣ್ಣಕ್ಕೆ
ತಿರುಗುತ್ತವೆ.
7. ಆಗ ಎಣ್ಣೆಯಿಂದ ತೆಗೆದು ಕಾಗದದ ಮೇಲೆ ಹಾಕಿ.
8. ಈಗ ಬಿಸಿ ಬಿಸಿ ಇರುವಾಗಲೇ ಪುದೀನಾ ಚಟ್ನಿ ಅಥವಾ ಟೊಮೆಟೊ ಕೆಚಪ್ನೊಂದಿಗೆ
ಸವಿಯಲು ನೀಡಿ.



Click it and Unblock the Notifications