Just In
- 38 min ago ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- 48 min ago ಗುರು ಸಂಚಾರ: ಮೇ 1ರಿಂದ 3ನೇ ಸ್ಥಾನದಲ್ಲಿರುವ ಗುರು ಮೀನ ರಾಶಿಯವರಿಗೆ ಅದೃಷ್ಟವೇ?
- 12 hrs ago ಗುರು ಸಂಚಾರದಿಂದ ಕುಂಭ ರಾಶಿಯವರ ಆರ್ಥಿಕ ಬದುಕು ಸುಧಾರಿಸಲಿದೆಯೇ?
- 13 hrs ago ಮೇ 1ರಿಂದ ಗುರು ಮಕರ ರಾಶಿಯಲ್ಲಿ ಪಂಚಮ ಸ್ಥಾನದಲ್ಲಿ ಇರುವುದರಿಂದ ಈ ರೀತಿಯೆಲ್ಲಾ ಪ್ರಯೋಜನಗಳಿವೆ
Don't Miss
- News ಬಿಜೆಪಿಗೆ ಮತ್ತೊಂದು ಆಘಾತ, ಮತ್ತೋರ್ವ ವಿಧಾನ ಪರಿಷತ್ ಸದಸ್ಯ ರಾಜೀನಾಮೆ: ಮಾಜಿ ಸಿಎಂ ಏನಂದ್ರು?
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಹಾ, ಸವಿಯಲು ಬಲು ರುಚಿ 'ಆಲೂ ಸಮೋಸಾ'
ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿಬಿಸಿಯಾದ ಚಹಾ ಹಾಗೂ ಅದರೊಟ್ಟಿಗೆ ನಾಲಿಗೆ ಚಪ್ಪರಿಸುವಂತಹ ತಿಂಡಿಯಿದ್ದರೆ ಅದರ ಅದ್ಭುತವೇ ಬೇರೆ. ಇಂತಹ ಸುಂದರ ಅನುಭವಕ್ಕೆ ಆರೋಗ್ಯಕರ ತಿಂಡಿಯಾದರೆ ಇನ್ನಷ್ಟು ದೇಹವು ಉತ್ಸುಕವಾಗಿರುತ್ತದೆ. ನಿಜ, ಸಂಜೆಯ ಲಘು ಉಪಹಾರಕ್ಕೆ ಒಂದು ಉತ್ತಮವಾದ ತಿಂಡಿ ಆಲೂ ಸಮೋಸಾ.
ಇದರಲ್ಲಿ ಪನ್ನೀರ್, ತರಕಾರಿ ಹಾಗೂ ಇನ್ನಿತರ ಆರೋಗ್ಯಕರ ಅಂಶ ಇರುವುದರಿಂದ ರುಚಿಯೊಂದಿಗೆ ಉತ್ತಮವಾದ ಆರೈಕೆಯೂ ಸಿಗುವುದು. ಹಾಗಾದರೆ ಬನ್ನಿ ಈ ರುಚಿಕರ ತಿಂಡಿಯನ್ನು ತಯಾರಿಸುವ ವಿಧಾನವನ್ನು ಅರಿಯೋಣ...
ಬೇಕಾಗುವ ಸಾಮಾಗ್ರಿಗಳು:
* 250 ಗ್ರಾಂ ಮೈದಾ
ಹಿಟ್ಟು
* 2 ಕಪ್ ಬೇಯಿಸಿದ ಆಲೂಗಡ್ಡೆಯ ಚೂರುಗಳು
* ಹಸಿರು ಬಟಾಣಿ ಸ್ವಲ್ಪ
* ಮೆಣಸಿನ ಕಾಯಿ ಸ್ವಲ್ಪ
* ಕಡಲೇಕಾಯಿ/ಶೇಂಗಾ ಸ್ವಲ್ಪ
* ಜೀರಿಗೆ ಸ್ವಲ್ಪ
* ಗರಮ್ ಮಸಾಲ
* ಚಾಟ್ ಮಸಾಲ
* ಹುಳಿ ಪುಡಿ/ಮಾವಿನ ಹುಳಿ ಪುಡಿ
* ಜೀರಿಗೆ ಪುಡಿ
* ಉಪ್ಪು
* ಮೆಣಸಿನ ಪುಡಿ/ಖಾರ ಪುಡಿ
* ಅರಿಶಿನ
* ಓಮ್ ಕಾಳು
* ಹುರಿಯಲು ಎಣ್ಣೆ
* ಬಿಸಿ ನೀರು
* ಸಮೋಸಾ ಮಾಡಲು ತುಪ್ಪ
ವಿಧಾನ:
1. ಬೆಚ್ಚಗಿನ ನೀರಿಗೆ ತುಪ್ಪ, ಉಪ್ಪು, ಓಮ್ಕಾಳು ಒಂದು ಚಮಚ ಎಲ್ಲವನ್ನು ಸೇರಿಸಿ
ಮೃದುವಾಗಿ ಹಿಟ್ಟನ್ನು ಕಲಸಿ, 30 ನಿಮಿಷಗಳ ಕಾಲ ಬಿಡಿ.
2. ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ ಜೀರಿಗೆಯನ್ನು ಹುರಿಯಿರಿ.
ನಂತರ ಮೆಣಸಿನ ಕಾಯಿ, ಅರಿಶಿನ, ಜೀರಿಗೆ ಪುಡಿ, ಹುಳಿ ಪುಡಿಯನ್ನು ಸೇರಿಸಿ.
3. ಆಲೂಗಡ್ಡೆ, ಹಸಿರು ಬಟಾಣಿ, ಹಸಿರು ಮೆಣಸಿನ ಕಾಯಿ, ಕಡಲೇ ಬೀಜವನ್ನು ಸೇರಿಸಿ.
ಚೆನ್ನಾಗಿ ಮಿಶ್ರಣಗೊಳಿಸಿ. ನಂತರ ಉಪ್ಪು, ಗರಮ್ ಮಸಾಲೆ, ಚಾಟ್ ಮಸಾಲೆಯನ್ನು
ಸೇರಿಸಿ ಮಿಶ್ರಣಗೊಳಿಸಿ. ಬಳಿಕ ಉರಿಯಿಂದ ಕೆಳಗಿಳಿಸಿ.
4. ಕಲಸಿಟ್ಟುಕೊಂಡ ಹಿಟ್ಟನ್ನು ಚಿಕ್ಕ ತ್ರಿಕೋನ ಆಕಾರದಲ್ಲಿ ಲಟ್ಟಿಸಿಕೊಂಡು
ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ. ನಂತರ ಬೆರಳುಗಳ ಸಹಾಯದಿಂದ ಮುಚ್ಚಿ.
5. ಹುರಿಯಲು ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿರಿ. ಕಾದ ತಕ್ಷಣ
ತ್ರಿಭುಜಾಕೃತಿಯ ಸಮೋಸವನ್ನು ಎಣ್ಣೆಯಲ್ಲಿ ಬಿಡಿ.
6. ಎಣ್ಣೆಯಲ್ಲಿ ನೊರೆಯಗುಳ್ಳೆಗಳು ಕಡಿಮೆಯಾದಂತೆ ಕಂದು ಬಣ್ಣಕ್ಕೆ
ತಿರುಗುತ್ತವೆ.
7. ಆಗ ಎಣ್ಣೆಯಿಂದ ತೆಗೆದು ಕಾಗದದ ಮೇಲೆ ಹಾಕಿ.
8. ಈಗ ಬಿಸಿ ಬಿಸಿ ಇರುವಾಗಲೇ ಪುದೀನಾ ಚಟ್ನಿ ಅಥವಾ ಟೊಮೆಟೊ ಕೆಚಪ್ನೊಂದಿಗೆ
ಸವಿಯಲು ನೀಡಿ.