Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಆಹಾ, ಸವಿಯಲು ಬಲು ರುಚಿ 'ಆಲೂ ಸಮೋಸಾ'
ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿಬಿಸಿಯಾದ ಚಹಾ ಹಾಗೂ ಅದರೊಟ್ಟಿಗೆ ನಾಲಿಗೆ ಚಪ್ಪರಿಸುವಂತಹ ತಿಂಡಿಯಿದ್ದರೆ ಅದರ ಅದ್ಭುತವೇ ಬೇರೆ. ಇಂತಹ ಸುಂದರ ಅನುಭವಕ್ಕೆ ಆರೋಗ್ಯಕರ ತಿಂಡಿಯಾದರೆ ಇನ್ನಷ್ಟು ದೇಹವು ಉತ್ಸುಕವಾಗಿರುತ್ತದೆ. ನಿಜ, ಸಂಜೆಯ ಲಘು ಉಪಹಾರಕ್ಕೆ ಒಂದು ಉತ್ತಮವಾದ ತಿಂಡಿ ಆಲೂ ಸಮೋಸಾ.
ಇದರಲ್ಲಿ ಪನ್ನೀರ್, ತರಕಾರಿ ಹಾಗೂ ಇನ್ನಿತರ ಆರೋಗ್ಯಕರ ಅಂಶ ಇರುವುದರಿಂದ ರುಚಿಯೊಂದಿಗೆ ಉತ್ತಮವಾದ ಆರೈಕೆಯೂ ಸಿಗುವುದು. ಹಾಗಾದರೆ ಬನ್ನಿ ಈ ರುಚಿಕರ ತಿಂಡಿಯನ್ನು ತಯಾರಿಸುವ ವಿಧಾನವನ್ನು ಅರಿಯೋಣ...

ಬೇಕಾಗುವ ಸಾಮಾಗ್ರಿಗಳು:
* 250 ಗ್ರಾಂ ಮೈದಾ
ಹಿಟ್ಟು
* 2 ಕಪ್ ಬೇಯಿಸಿದ ಆಲೂಗಡ್ಡೆಯ ಚೂರುಗಳು
* ಹಸಿರು ಬಟಾಣಿ ಸ್ವಲ್ಪ
* ಮೆಣಸಿನ ಕಾಯಿ ಸ್ವಲ್ಪ
* ಕಡಲೇಕಾಯಿ/ಶೇಂಗಾ ಸ್ವಲ್ಪ
* ಜೀರಿಗೆ ಸ್ವಲ್ಪ
* ಗರಮ್ ಮಸಾಲ
* ಚಾಟ್ ಮಸಾಲ
* ಹುಳಿ ಪುಡಿ/ಮಾವಿನ ಹುಳಿ ಪುಡಿ
* ಜೀರಿಗೆ ಪುಡಿ
* ಉಪ್ಪು
* ಮೆಣಸಿನ ಪುಡಿ/ಖಾರ ಪುಡಿ
* ಅರಿಶಿನ
* ಓಮ್ ಕಾಳು
* ಹುರಿಯಲು ಎಣ್ಣೆ
* ಬಿಸಿ ನೀರು
* ಸಮೋಸಾ ಮಾಡಲು ತುಪ್ಪ
ವಿಧಾನ:
1. ಬೆಚ್ಚಗಿನ ನೀರಿಗೆ ತುಪ್ಪ, ಉಪ್ಪು, ಓಮ್ಕಾಳು ಒಂದು ಚಮಚ ಎಲ್ಲವನ್ನು ಸೇರಿಸಿ
ಮೃದುವಾಗಿ ಹಿಟ್ಟನ್ನು ಕಲಸಿ, 30 ನಿಮಿಷಗಳ ಕಾಲ ಬಿಡಿ.
2. ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆಯನ್ನು ಹಾಕಿ ಜೀರಿಗೆಯನ್ನು ಹುರಿಯಿರಿ.
ನಂತರ ಮೆಣಸಿನ ಕಾಯಿ, ಅರಿಶಿನ, ಜೀರಿಗೆ ಪುಡಿ, ಹುಳಿ ಪುಡಿಯನ್ನು ಸೇರಿಸಿ.
3. ಆಲೂಗಡ್ಡೆ, ಹಸಿರು ಬಟಾಣಿ, ಹಸಿರು ಮೆಣಸಿನ ಕಾಯಿ, ಕಡಲೇ ಬೀಜವನ್ನು ಸೇರಿಸಿ.
ಚೆನ್ನಾಗಿ ಮಿಶ್ರಣಗೊಳಿಸಿ. ನಂತರ ಉಪ್ಪು, ಗರಮ್ ಮಸಾಲೆ, ಚಾಟ್ ಮಸಾಲೆಯನ್ನು
ಸೇರಿಸಿ ಮಿಶ್ರಣಗೊಳಿಸಿ. ಬಳಿಕ ಉರಿಯಿಂದ ಕೆಳಗಿಳಿಸಿ.
4. ಕಲಸಿಟ್ಟುಕೊಂಡ ಹಿಟ್ಟನ್ನು ಚಿಕ್ಕ ತ್ರಿಕೋನ ಆಕಾರದಲ್ಲಿ ಲಟ್ಟಿಸಿಕೊಂಡು
ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ. ನಂತರ ಬೆರಳುಗಳ ಸಹಾಯದಿಂದ ಮುಚ್ಚಿ.
5. ಹುರಿಯಲು ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಕಾಯಿಸಿರಿ. ಕಾದ ತಕ್ಷಣ
ತ್ರಿಭುಜಾಕೃತಿಯ ಸಮೋಸವನ್ನು ಎಣ್ಣೆಯಲ್ಲಿ ಬಿಡಿ.
6. ಎಣ್ಣೆಯಲ್ಲಿ ನೊರೆಯಗುಳ್ಳೆಗಳು ಕಡಿಮೆಯಾದಂತೆ ಕಂದು ಬಣ್ಣಕ್ಕೆ
ತಿರುಗುತ್ತವೆ.
7. ಆಗ ಎಣ್ಣೆಯಿಂದ ತೆಗೆದು ಕಾಗದದ ಮೇಲೆ ಹಾಕಿ.
8. ಈಗ ಬಿಸಿ ಬಿಸಿ ಇರುವಾಗಲೇ ಪುದೀನಾ ಚಟ್ನಿ ಅಥವಾ ಟೊಮೆಟೊ ಕೆಚಪ್ನೊಂದಿಗೆ
ಸವಿಯಲು ನೀಡಿ.



Click it and Unblock the Notifications