Latest Updates
-
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್! -
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ
ಬೇಸಿಗೆಯ ಬಿಸಿಗೆ ಗಣಕೆ ಹಣ್ಣಿನ ಪಾನಕ
ಇದು ರಣರಣ ಬೇಸಿಗೆ ದಿನಗಳು. ದೇಹಕ್ಕೆ ತಂಪು ಮಾಡಿಕೊಳ್ಳಲೇಬೇಕು. ಹೆಚ್ಚೆಚ್ಚು ನೀರು ಕುಡಿಯಬೇಕು. ಜ್ಯೂಸ್ ಸೇವಿಸಬೇಕು. ವೆರೈಟಿ ಹಣ್ಣುಗಳು ದೇಹಕ್ಕೆ ತಂಪು ಮಾಡುವುದರ ಜೊತೆಗೆ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಕೂಡ ಒದಗಿಸುತ್ತದೆ.

ನಾವಿಲ್ಲಿ ಗಣಕೆ ಹಣ್ಣಿನಿಂದ ಪಾನಕ ತಯಾರಿಸುವುದು ಹೇಗೆ ಎಂಬುದನ್ನು ತಿಳಿಸುತ್ತಿದ್ದೇವೆ. ಸಾಮಾನ್ಯವಾಗಿ ಗಣಕೆ ಸೊಪ್ಪನ್ನು ನಾವು ಮಾರುಕಟ್ಟೆಯಲ್ಲಿ ಗಮನಿಸಿರುತ್ತೇವೆ. ಆದರೆ ಹಣ್ಣುಗಳು ಮಾರಾಟವಾಗುವುದಿಲ್ಲ. ಆದರೆ ನಿಮ್ಮ ಮನೆಯ ಸುತ್ತಮುತ್ತ ಈ ಹಣ್ಣುಗಳು ಲಭ್ಯವಿದ್ದರೆ ಖಂಡಿತ ಪಾನಕ ಮಾಡಿ ಸೇವಿಸುವುದನ್ನು ಮರೆಯಬೇಡಿ.
ಯುರೋಪಿಯನ್ ನೈಟ್ ಶೇಡ್,ಬ್ಲಾಕ್ ನೈಟ್ ಶೇಡ್, ಬ್ಲಾಕ್ ಬೆರ್ರೀ ನೈಟ್ ಶೇಡ್, ಸೋಲಾನಮ್ ನಿಗ್ರಮ್ ಎಂದು ಇಂಗ್ಲೀಷಿನಲ್ಲಿ ಕರೆಯಲಾಗುವ ಈ ಹಣ್ಣಿಗೆ ಕನ್ನಡದಲ್ಲಿ ಕಾಕೆ ಹಣ್ಣು, ಗಣಕೆ ಹಣ್ಣು ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುತ್ತದೆ. ಹಾಗಾದ್ರೆ ಈ ಹಣ್ಣಿನಿಂದ ಪಾನಕ ತಯಾರಿಸುವುದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ.
Recipe By: Sushma
Recipe Type: Juice
Serves: 1
-
ಬೇಕಾಗುವ ಸಾಮಗ್ರಿಗಳು
. ಗಣಕೆ ಹಣ್ಣು - 40 ರಿಂದ 50 ಹಣ್ಣುಗಳು
. ಸಕ್ಕರೆ - ಮೂರೂ ಚಮಚ
. ಉಪ್ಪು - ಚಿಟಿಕೆ
. ಕಾಳುಮೆಣಸು - ಎರಡು
. ಜೀರಿಗೆ - 10 ಕಾಳುಗಳು
-
ಮಾಡುವ ವಿಧಾನ
ಚೆನ್ನಾಗಿ ತೊಳೆದ ಗಣಕೆ ಹಣ್ಣುಗಳು, ಸಕ್ಕರೆ, ಉಪ್ಪು, ಕಾಳುಮೆಣಸು, ಜೀರಿಗೆ ಯನ್ನು ಸೇರಿಸಿ ನುಣ್ಣಗೆ ಮಿಕ್ಸಿ ಮಾಡಿಕೊಳ್ಳಿ. ಜ್ಯೂಸರ್ ನಲ್ಲಿ ಕೂಡ ಮಾಡಬಹುದು.
ನಂತರ ಸೋಸಿಕೊಂಡರೆ ಗಣಕೆ ಹಣ್ಣಿನ ಪಾನಕ ಸಿದ್ಧವಾಗುತ್ತದೆ.
- ಗಣಕೆ ಹಣ್ಣುಗಳ ಸೇವನೆಯಿಂದ ರಕ್ತ ಶುದ್ಧಿಯಾಗುತ್ತದೆ . ರಕ್ತದ ಕಣಗಳನ್ನು ಹೆಚ್ಚಿಸುವುದಕ್ಕೆ ಇದು ಸಹಕಾರಿ . ದೇಹದ ಟಾಕ್ಸಿಕ್ ಅಂಶವನ್ನು ಹೊರಹಾಕುವುದಕ್ಕೆ ಸಹಕಾರಿ. . ಹೊಟ್ಟೆ ನೋವಿರುವವರು ಇದನ್ನು ಸೇವಿಸುವುದು ಒಳ್ಳೆಯದು. . ಉರಿಯೂತ ಸಮಸ್ಯೆಯನ್ನು ನಿವಾರಿಸುತ್ತದೆ. . ಹಲ್ಲುನೋವಿರುವವರು ಈ ಹಣ್ಣುಗಳನ್ನು ಸೇವಿಸುವುದು ಒಳಿತು



Click it and Unblock the Notifications
