Latest Updates
-
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ!
ನೆಲನೆಲ್ಲಿ ಸೊಪ್ಪಿನ ತಂಪು ತಂಬುಳಿ
ಇಂಥ ಸೊಪ್ಪುಗಳನ್ನು ಹುಡುಕಿ, ಅಡುಗೆಮಾಡಿ ಸವಿಯುವ ಆಸೆಗೆ 1/4 ಚಮಚ ಶ್ರದ್ಧೆ ಇರಬೇಕು
*ತೇಜಸ್ವಿನಿ ಹೆಗಡೆ, ಬೆಂಗಳೂರು
ನೆಲನೆಲ್ಲಿ ಮಳೆಗಾಲದಲ್ಲಿ ಬೆಳೆಯುವ ಪುಟ್ಟಗಿಡ. ನೆಲನೆಲ್ಲಿಗೆ ಸಂಸ್ಕೃತದಲ್ಲಿ ಭೂಮ್ಯಾಮಲಕಿ, ಹಿಂದಿಯಲ್ಲಿ ಪಾತಾಲ ಆಂವಲಾ ಹಾಗೂ ಇಂಗ್ಲೀಷಿನಲ್ಲಿ"Phyllanthus Amarus" ಎಂದು ಕರೆಯಲಾಗುತ್ತದೆ. ತರಕಾರಿಗಿಡಗಳೊಡನೆ ಕಳೆಯಾಗಿ ಬೆಳೆಯುತ್ತದೆ. ಇದರೆಲೆಗಳು ಬೆಟ್ಟದ ನೆಲ್ಲಿಯಂತಿದ್ದರೂ ಆಕಾರದಲ್ಲಿ ಬಲು ಚಿಕ್ಕದಾಗಿರುತ್ತವೆ. ಹಳದಿ ಬಣ್ಣದ ಹೂವುಗಳನ್ನು ಹೊಂದಿರುವ ಈ ಗಿಡದಲ್ಲಿ ಅಗಸ್ಟ್ ಸಪ್ಟೆಂಬರ್ ತಿಂಗಳಿನಲ್ಲಿ ಸಣ್ಣ ಸಣ್ಣ ಹಸಿರು ಬಣ್ಣದ ಗುಂಡಾಕಾರದ ಕಾಯಿಗಳನ್ನು ಕಾಣಬಹುದಾಗಿದೆ.
ನೆಲನೆಲ್ಲಿಯ ಸೊಪ್ಪು ಹಲವು ವಿಧದಲ್ಲಿ ಉಪಯುಕ್ತ. ಕಾಮಾಲೆಗೆ, ಉದರಶೂಲೆಗೆ ಶ್ಲೇಷ್ಮಾತೀಸಾರಕ್ಕೆ ಹಾಗೂ ಕಣ್ಣು ನೋವಿಗೆ ಇದರ ಸೊಪ್ಪು ದಿವ್ಯೌಷಧಿ. ಅಲ್ಲದೇ, ಪಿತ್ತಜನಕಾಂಗದ ಸಮಸ್ಯೆಗಳಿಗೂ ಇದನ್ನು ಔಷಧವನ್ನಾಗಿ ಉಪಯೋಗಿಸುತ್ತಾರೆ. ಇದರ ಕುರಿತಾದ ಹೆಚ್ಚಿನ ಮಾಹಿತಿಗಾಗಿ ವೈದ್ಯ ಎ.ಅರ್.ಎಂ.ಸಾಹೇಬ್ ಅವರ "ಅಪೂರ್ವ ಗಿಡಮೂಲಿಕೆಗಳು ಹಾಗೂ ಸರಳ ಚಿಕಿತ್ಸೆಗಳು" ಎಂಬ ಪುಸ್ತಕವನ್ನು ಓದಬಹುದು.
ನೆಲನೆಲ್ಲಿ ತಂಬುಳಿಗೆ ಬೇಕಾಗುವ ಸಾಮಗ್ರಿಗಳು.
* ನೆಲನೆಲ್ಲಿ ಸೊಪ್ಪು - ಒಂದು ಹಿಡಿ ಅಥವಾ ಮುಷ್ಟಿಯಷ್ಟು
* ಜೀರಿಗೆ - 1/4 ಚಮಚ
* ಬಿಳೇ ಎಳ್ಳು - 1/4 ಚಮಚ
* ಕರಿಮೆಣಸಿನ ಕಾಳು(ಪೆಪ್ಪರ್) 2-3
* ಇಂಗು - ಚಿಟಿಗೆಯಷ್ಟು
* ಕಾಯಿತುರಿ - 1/4 ಭಾಗ
* ಕಡೆದ ಮಜ್ಜಿಗೆ - ಒಂದು ಲೋಟ
* ಬೆಲ್ಲ - ರುಚಿಗೆ ತಕ್ಕಷ್ಟು (ಸಿಹಿ ಆಗದವರು ಬೆಲ್ಲವನ್ನು ಹಾಕದೆಯೂ ಮಾಡಬಹುದು)
* ಉಪ್ಪು - ರುಚಿಗೆ ತಕ್ಕಷ್ಟು
* ತುಪ್ಪ - 1-2 ಚಮಚ
ಮಾಡುವ ವಿಧಾನ:
* ಮೊದಲಿಗೆ ನೆಲನೆಲ್ಲಿ ಸೊಪ್ಪನ್ನು ಚೆನ್ನಾಗಿ ತೊಳೆದು ಹೆಚ್ಚಿಟ್ಟುಕೊಳ್ಳಬೇಕು.
* ಬಾಣಲೆಯಲ್ಲಿ ತುಪ್ಪವನ್ನು ಹಾಕಿ ಜೀರಿಗೆ, ಎಳ್ಳು, ಕರಿಮೆಣಸಿನ ಕಾಳು ಹಾಗೂ ಇಂಗನ್ನು ಹಾಕಿ ಹುರಿಯಬೇಕು.
* ಹಾಕಿದ ಪದಾರ್ಥ ಚಟಗುಡುತ್ತಲೇ, ಇದಕ್ಕೆ ಹೆಚ್ಚಿಟ್ಟ ನೆಲನೆಲ್ಲಿ ಸೊಪ್ಪನ್ನೂ ಹಾಕಿ ಚೆನ್ನಾಗಿ ಹುರಿದು ತಣಿಸಬೇಕು.
* ಚೆನ್ನಾಗಿ ತಣಿದ ನಂತರ ಕಾಯಿತುರಿಯೊಂದಿಗೆ ಬೀಸಿ, ಸೋಸಿ ರಸವನ್ನು ಹಿಂಡಬೇಕು. ಜಿಗುಟನ್ನು ತೆಗೆಯಬೇಕು.
* ಸೋಸಿದ ರಸಕ್ಕೆ ಕಡೆದ ಮಜ್ಜಿಗೆ, ಉಪ್ಪು ಹಾಗೂ ಬೆಲ್ಲವನ್ನು ಹಾಕಿದರೆ ರುಚಿಕರ ಹಾಗೂ ಆರೋಗ್ಯಕರ ತಂಬುಳಿ ತಯಾರೆನ್ನಬಹುದು.
ನೆಲನೆಲ್ಲಿ ಸೊಪ್ಪಿನಿಂದ ಚಟ್ನಿಯನ್ನೂ ತಯಾರಿಸಬಹುದು. ಬಹೋಪಯೋಗಿಯಾಗಿರುವ ಇದು ಸುಲಭದಲ್ಲಿ ಬೆಳೆಯುವಂತಹದ್ದೂ ಆಗಿದೆ. ಇಂಥದ್ದನೆಲ್ಲ ಹುಡುಕಿ, ತಯಾರಿಸಿ, ಸವಿಯುವ ಆಸೆಗೆ 1/4 ಚಮಚ ಶ್ರದ್ಧೆ ಇರಬೇಕು.



Click it and Unblock the Notifications