Latest Updates
-
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ?
ನೆಲನೆಲ್ಲಿ ಸೊಪ್ಪಿನ ತಂಪು ತಂಬುಳಿ
ಇಂಥ ಸೊಪ್ಪುಗಳನ್ನು ಹುಡುಕಿ, ಅಡುಗೆಮಾಡಿ ಸವಿಯುವ ಆಸೆಗೆ 1/4 ಚಮಚ ಶ್ರದ್ಧೆ ಇರಬೇಕು
*ತೇಜಸ್ವಿನಿ ಹೆಗಡೆ, ಬೆಂಗಳೂರು
ನೆಲನೆಲ್ಲಿ ಮಳೆಗಾಲದಲ್ಲಿ ಬೆಳೆಯುವ ಪುಟ್ಟಗಿಡ. ನೆಲನೆಲ್ಲಿಗೆ ಸಂಸ್ಕೃತದಲ್ಲಿ ಭೂಮ್ಯಾಮಲಕಿ, ಹಿಂದಿಯಲ್ಲಿ ಪಾತಾಲ ಆಂವಲಾ ಹಾಗೂ ಇಂಗ್ಲೀಷಿನಲ್ಲಿ"Phyllanthus Amarus" ಎಂದು ಕರೆಯಲಾಗುತ್ತದೆ. ತರಕಾರಿಗಿಡಗಳೊಡನೆ ಕಳೆಯಾಗಿ ಬೆಳೆಯುತ್ತದೆ. ಇದರೆಲೆಗಳು ಬೆಟ್ಟದ ನೆಲ್ಲಿಯಂತಿದ್ದರೂ ಆಕಾರದಲ್ಲಿ ಬಲು ಚಿಕ್ಕದಾಗಿರುತ್ತವೆ. ಹಳದಿ ಬಣ್ಣದ ಹೂವುಗಳನ್ನು ಹೊಂದಿರುವ ಈ ಗಿಡದಲ್ಲಿ ಅಗಸ್ಟ್ ಸಪ್ಟೆಂಬರ್ ತಿಂಗಳಿನಲ್ಲಿ ಸಣ್ಣ ಸಣ್ಣ ಹಸಿರು ಬಣ್ಣದ ಗುಂಡಾಕಾರದ ಕಾಯಿಗಳನ್ನು ಕಾಣಬಹುದಾಗಿದೆ.
ನೆಲನೆಲ್ಲಿಯ ಸೊಪ್ಪು ಹಲವು ವಿಧದಲ್ಲಿ ಉಪಯುಕ್ತ. ಕಾಮಾಲೆಗೆ, ಉದರಶೂಲೆಗೆ ಶ್ಲೇಷ್ಮಾತೀಸಾರಕ್ಕೆ ಹಾಗೂ ಕಣ್ಣು ನೋವಿಗೆ ಇದರ ಸೊಪ್ಪು ದಿವ್ಯೌಷಧಿ. ಅಲ್ಲದೇ, ಪಿತ್ತಜನಕಾಂಗದ ಸಮಸ್ಯೆಗಳಿಗೂ ಇದನ್ನು ಔಷಧವನ್ನಾಗಿ ಉಪಯೋಗಿಸುತ್ತಾರೆ. ಇದರ ಕುರಿತಾದ ಹೆಚ್ಚಿನ ಮಾಹಿತಿಗಾಗಿ ವೈದ್ಯ ಎ.ಅರ್.ಎಂ.ಸಾಹೇಬ್ ಅವರ "ಅಪೂರ್ವ ಗಿಡಮೂಲಿಕೆಗಳು ಹಾಗೂ ಸರಳ ಚಿಕಿತ್ಸೆಗಳು" ಎಂಬ ಪುಸ್ತಕವನ್ನು ಓದಬಹುದು.
ನೆಲನೆಲ್ಲಿ ತಂಬುಳಿಗೆ ಬೇಕಾಗುವ ಸಾಮಗ್ರಿಗಳು.
* ನೆಲನೆಲ್ಲಿ ಸೊಪ್ಪು - ಒಂದು ಹಿಡಿ ಅಥವಾ ಮುಷ್ಟಿಯಷ್ಟು
* ಜೀರಿಗೆ - 1/4 ಚಮಚ
* ಬಿಳೇ ಎಳ್ಳು - 1/4 ಚಮಚ
* ಕರಿಮೆಣಸಿನ ಕಾಳು(ಪೆಪ್ಪರ್) 2-3
* ಇಂಗು - ಚಿಟಿಗೆಯಷ್ಟು
* ಕಾಯಿತುರಿ - 1/4 ಭಾಗ
* ಕಡೆದ ಮಜ್ಜಿಗೆ - ಒಂದು ಲೋಟ
* ಬೆಲ್ಲ - ರುಚಿಗೆ ತಕ್ಕಷ್ಟು (ಸಿಹಿ ಆಗದವರು ಬೆಲ್ಲವನ್ನು ಹಾಕದೆಯೂ ಮಾಡಬಹುದು)
* ಉಪ್ಪು - ರುಚಿಗೆ ತಕ್ಕಷ್ಟು
* ತುಪ್ಪ - 1-2 ಚಮಚ
ಮಾಡುವ ವಿಧಾನ:
* ಮೊದಲಿಗೆ ನೆಲನೆಲ್ಲಿ ಸೊಪ್ಪನ್ನು ಚೆನ್ನಾಗಿ ತೊಳೆದು ಹೆಚ್ಚಿಟ್ಟುಕೊಳ್ಳಬೇಕು.
* ಬಾಣಲೆಯಲ್ಲಿ ತುಪ್ಪವನ್ನು ಹಾಕಿ ಜೀರಿಗೆ, ಎಳ್ಳು, ಕರಿಮೆಣಸಿನ ಕಾಳು ಹಾಗೂ ಇಂಗನ್ನು ಹಾಕಿ ಹುರಿಯಬೇಕು.
* ಹಾಕಿದ ಪದಾರ್ಥ ಚಟಗುಡುತ್ತಲೇ, ಇದಕ್ಕೆ ಹೆಚ್ಚಿಟ್ಟ ನೆಲನೆಲ್ಲಿ ಸೊಪ್ಪನ್ನೂ ಹಾಕಿ ಚೆನ್ನಾಗಿ ಹುರಿದು ತಣಿಸಬೇಕು.
* ಚೆನ್ನಾಗಿ ತಣಿದ ನಂತರ ಕಾಯಿತುರಿಯೊಂದಿಗೆ ಬೀಸಿ, ಸೋಸಿ ರಸವನ್ನು ಹಿಂಡಬೇಕು. ಜಿಗುಟನ್ನು ತೆಗೆಯಬೇಕು.
* ಸೋಸಿದ ರಸಕ್ಕೆ ಕಡೆದ ಮಜ್ಜಿಗೆ, ಉಪ್ಪು ಹಾಗೂ ಬೆಲ್ಲವನ್ನು ಹಾಕಿದರೆ ರುಚಿಕರ ಹಾಗೂ ಆರೋಗ್ಯಕರ ತಂಬುಳಿ ತಯಾರೆನ್ನಬಹುದು.
ನೆಲನೆಲ್ಲಿ ಸೊಪ್ಪಿನಿಂದ ಚಟ್ನಿಯನ್ನೂ ತಯಾರಿಸಬಹುದು. ಬಹೋಪಯೋಗಿಯಾಗಿರುವ ಇದು ಸುಲಭದಲ್ಲಿ ಬೆಳೆಯುವಂತಹದ್ದೂ ಆಗಿದೆ. ಇಂಥದ್ದನೆಲ್ಲ ಹುಡುಕಿ, ತಯಾರಿಸಿ, ಸವಿಯುವ ಆಸೆಗೆ 1/4 ಚಮಚ ಶ್ರದ್ಧೆ ಇರಬೇಕು.



Click it and Unblock the Notifications