Latest Updates
-
ಕರಣ್-ತೇಜಸ್ವಿ ಗುಟ್ಟಾಗಿ ಮದುವೆಯಾದ್ರಾ? ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! -
ಮುಂಬೈನಲ್ಲಿ ನೀರು ಕಡಿತ: ಬಿಎಂಸಿ ಎಚ್ಚರಿಕೆ ಬೆನ್ನಲ್ಲೇ ಮನೆಯಲ್ಲಿ ನೀರು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ಮದ್ದು! -
ಕಿರೀಟ ಯಾರ ಪಾಲಾಗಲಿದೆ? ದೆಹಲಿಯಲ್ಲಿ ಮಿಸ್ ಗ್ರ್ಯಾಂಡ್ ಇಂಡಿಯಾ 2026 ಫಿನಾಲೆ ಸಂಭ್ರಮದ ಕ್ಷಣಗಳು -
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್!
ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ!

ನಾನು ಊರಿಗೆ ಬರಲಿ ಎಂದೇ ಕಾಯುತ್ತಿದ್ದ ಇವರೆಲ್ಲ ಈಗ ಬಂದಕೂಡಲೇ 'ಅದು ಮಾಡೆ, ಇದು ಮಾಡಮ್ಮಾ' ಎಂದು ಅಡುಗೆ ತಿಂಡಿಗಳ ಪಟ್ಟಿ ಹಿಡಿದುಕೊಂಡು ನಿಂತಿದ್ದರು. ನಾಲಗೆ ಕೆಟ್ಟಿರಬೇಕು, ಪಾಪ. ಆದರೆ, ಅಡುಗೆ ಮನೆ ಖಾಲಿ ಖಾಲಿ. ಯಾರೂ ಕೂಡ ತಿಂಗಳ ಸಾಮಾನುಗಳನ್ನು ಸೊಸೈಟಿಗೆ ಹೋಗಿ ತಂದಿಟ್ಟಿರಲಿಲ್ಲ. ಮನೆಯಲ್ಲಿ ತರಕಾರಿಗಳೂ ಇರಲಿಲ್ಲ. ಯೋಚನೆ ಮಾಡುತ್ತಿರುವಾಗ ಅಷ್ಟುಹೊತ್ತಿಗೆ ಸರಿಯಾಗಿ ಕೈಗಾಡಿ ತರಕಾರಿಯ ಪುಣ್ಯಾತ್ಮ ಲಕ್ಷ್ಣಣ ಮನೆಮುಂದೆ ಬಂದ. ಬಾರಪ್ಪಾ ಬಾರಪ್ಪಾ ಎಂದು ಬುಟ್ಟಿ ಹಿಡಿದು ಹೋದರೆ ಗಾಡಿಯಲ್ಲಿ ಅಂಥದೇನೂ ತಾಜಾ ತರಕಾರಿ ಕಾಣಿಸಲಿಲ್ಲ.
ಗಾಡಿಯ ಮೂಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸ್ವಲ್ಪ ಅವರೇಕಾಯಿ ಇಟ್ಟಿದ್ದ. ಈಗ ಎಚ್ಚೆತ್ತುಕೊಂಡೆ. ಹೌದಲ್ಲಾ! ಈ ಸೀಸನ್ನಿನಲ್ಲಿ ನಾನು ಅವರೇಕಾಯಿ ಅಡುಗೆ ಮಾಡೇ ಇಲ್ಲವಲ್ಲಾ ಎಂದುಕೊಂಡು 1 ಕೆಜಿ ಖರೀದಿಸಿದೆ. ಕಾಯಿ ಒಣಗಿತ್ತು. ಸೀಸನ್ ಹೋಗುತ್ತಿದೆ, ಈಗ ಬಿಟ್ಟರೆ ಆಮೇಲೆ ಸಿಕ್ಕಲ್ಲ ಎಂದು 'ಹೇಗಾದರೂ ಇರಲಿ ಕೊಡಪ್ಪಾ' ಎಂದು ಲಕ್ಷ್ಣಣನಿಗೆ ಹೇಳಿದೆ.
ಕಾಯಿ ಸುಲಿದರೆ ಬರೀ ಹುಳ. ಕಾಯಿಗಳೂ ಚಪ್ಪಟೆ ಚಪ್ಪಟೆ. ಚೆನ್ನಾದ ಕಾಯಿಗಳು ಕೆಲವು ಇದ್ದವು. ಆದರೆ ಕಾಳುಗಳು ಕಪ್ಪುಕಪ್ಪು, ಸ್ವಲ್ಪ ಬಲಿತಿತ್ತು ಕೂಡ. ಅದನ್ನೇ ಹಾಗೂ ಹೀಗೂ ಕ್ಲೀನ್ ಮಾಡಿ ಸುಲಿದೆ. ಎರಡು ಕಪ್ಪು ಕಾಳು ರೆಡಿ ಆಯಿತು. ಅಡುಗೆ ಮನೆಯ ಶೆಲ್ಫ್ ನಾನು ಆಸ್ಟ್ರೇಲಿಯಾಗೆ ಹೋದಾಗ ಹೇಗೆ ಇಟ್ಟಿದ್ದೇನೋ ಹಾಗೇ ಇತ್ತು. ಧೂಳು ಕೂಡ ಒರೆಸಿರಲಿಲ್ಲ. ನಾನಷ್ಟೇ ಉಪಯೋಗಿಸುವ ಸಾಮಾನುಗಳನ್ನು ನಮ್ಮ ಮನೆಯಲ್ಲಿ ಯಾರೂ ಮುಟ್ಟಿಕೂಡ ನೋಡುವುದಿಲ್ಲ. ತುಂಬಾ ಒಳ್ಳೆ ಜನ. ಶೆಲ್ಫ್ ನಲ್ಲಿ ಸ್ಟೀಲ್ ಡಬ್ಬಿಯಲ್ಲಿ ಇಟ್ಟಿದ್ದ ಅಕ್ಕಿ ಹಿಟ್ಟು ಹಾಗೇ ಇತ್ತು. ಪುಣ್ಯಕ್ಕೆ ಕೆಟ್ಟುಹೋಗಿರಲಿಲ್ಲ. ಅದನ್ನೇ ಇನ್ನೊಂದು ಸರತಿ ಜರಡಿ ಹಿಡಿದು ನಾಲಕ್ಕು ಕಪ್ಪು ಹಿಟ್ಟಿಗೆ ಸ್ವಲ್ಪ ಮಜ್ಜಿಗೆ ಸ್ವಲ್ಪ ನೀರು ಉಪ್ಪು ಹಾಕಿ ಕಲಸಿಟ್ಟೆ.
ಹಿತ್ತಲಲ್ಲಿ ಕರಿಬೇವು ಎಲೆ ಬಿಡಿಸಿ ತಂದೆ. ಒಣ ಮೆಣಸಿನಕಾಯಿ ಹೇಗೂ ಸ್ಟಾಕ್ ಇದ್ದೇ ಇರತ್ತೆ. ಅದನ್ನೇ ಒಂದಿಷ್ಟು ಕೈಯಲ್ಲೇ ಪುಡಿಪುಡಿ ಮಾಡಿ ಹಿಟ್ಟಿಗೆ ಸೇರಿಸಿ ಕಲಸಿದೆ. ಕುಕ್ಕರ್ ನಲ್ಲಿ ಬೆಂದು ಇನ್ನಷ್ಟು ಕಪ್ಪು ಕಪ್ಪಾಗಿದ್ದ ಅವರೇಕಾಳುಗಳನ್ನು ಹಿಟ್ಟಿಗೆ ಹಾಕಿದೆ. ಎಣ್ಣೆ ಸವರಿ ಬಾಣಲಿ ರೊಟ್ಟಿ ಮಾಡಿದರೆ "ಅಕ್ಕಿ ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ" ಎಂದು ಬರಗೆಟ್ಟವರಂತೆ ಎಲ್ಲಾ ತಿಂದು ಖಾಲಿಮಾಡಿದರು. ಇವರಿಗೆಲ್ಲ ನಾನು ಮಾಡುವ ಅಡುಗೆ ಬೆಲೆ ಗೊತ್ತಾಗಬೇಕಾದರೆ ಮತ್ತೆ ನಾನು ಮೆಲ್ಬೋರ್ನ್ ಮಗಳ ಮನೆಗೆ ಹೋಗಬೇಕು ಅಂದು ಮನಸ್ಸಿನಲ್ಲೇ ಅಂದುಕೊಂಡೆ. ಇದೇ ಜೀವನವಲ್ಲವೇ?
(ನಿರೂಪಣೆ : ದಟ್ಸ್ ಕನ್ನಡ ಅಡುಗೆ ಶಾಲೆ)



Click it and Unblock the Notifications