Latest Updates
-
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ?
ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ!

ನಾನು ಊರಿಗೆ ಬರಲಿ ಎಂದೇ ಕಾಯುತ್ತಿದ್ದ ಇವರೆಲ್ಲ ಈಗ ಬಂದಕೂಡಲೇ 'ಅದು ಮಾಡೆ, ಇದು ಮಾಡಮ್ಮಾ' ಎಂದು ಅಡುಗೆ ತಿಂಡಿಗಳ ಪಟ್ಟಿ ಹಿಡಿದುಕೊಂಡು ನಿಂತಿದ್ದರು. ನಾಲಗೆ ಕೆಟ್ಟಿರಬೇಕು, ಪಾಪ. ಆದರೆ, ಅಡುಗೆ ಮನೆ ಖಾಲಿ ಖಾಲಿ. ಯಾರೂ ಕೂಡ ತಿಂಗಳ ಸಾಮಾನುಗಳನ್ನು ಸೊಸೈಟಿಗೆ ಹೋಗಿ ತಂದಿಟ್ಟಿರಲಿಲ್ಲ. ಮನೆಯಲ್ಲಿ ತರಕಾರಿಗಳೂ ಇರಲಿಲ್ಲ. ಯೋಚನೆ ಮಾಡುತ್ತಿರುವಾಗ ಅಷ್ಟುಹೊತ್ತಿಗೆ ಸರಿಯಾಗಿ ಕೈಗಾಡಿ ತರಕಾರಿಯ ಪುಣ್ಯಾತ್ಮ ಲಕ್ಷ್ಣಣ ಮನೆಮುಂದೆ ಬಂದ. ಬಾರಪ್ಪಾ ಬಾರಪ್ಪಾ ಎಂದು ಬುಟ್ಟಿ ಹಿಡಿದು ಹೋದರೆ ಗಾಡಿಯಲ್ಲಿ ಅಂಥದೇನೂ ತಾಜಾ ತರಕಾರಿ ಕಾಣಿಸಲಿಲ್ಲ.
ಗಾಡಿಯ ಮೂಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸ್ವಲ್ಪ ಅವರೇಕಾಯಿ ಇಟ್ಟಿದ್ದ. ಈಗ ಎಚ್ಚೆತ್ತುಕೊಂಡೆ. ಹೌದಲ್ಲಾ! ಈ ಸೀಸನ್ನಿನಲ್ಲಿ ನಾನು ಅವರೇಕಾಯಿ ಅಡುಗೆ ಮಾಡೇ ಇಲ್ಲವಲ್ಲಾ ಎಂದುಕೊಂಡು 1 ಕೆಜಿ ಖರೀದಿಸಿದೆ. ಕಾಯಿ ಒಣಗಿತ್ತು. ಸೀಸನ್ ಹೋಗುತ್ತಿದೆ, ಈಗ ಬಿಟ್ಟರೆ ಆಮೇಲೆ ಸಿಕ್ಕಲ್ಲ ಎಂದು 'ಹೇಗಾದರೂ ಇರಲಿ ಕೊಡಪ್ಪಾ' ಎಂದು ಲಕ್ಷ್ಣಣನಿಗೆ ಹೇಳಿದೆ.
ಕಾಯಿ ಸುಲಿದರೆ ಬರೀ ಹುಳ. ಕಾಯಿಗಳೂ ಚಪ್ಪಟೆ ಚಪ್ಪಟೆ. ಚೆನ್ನಾದ ಕಾಯಿಗಳು ಕೆಲವು ಇದ್ದವು. ಆದರೆ ಕಾಳುಗಳು ಕಪ್ಪುಕಪ್ಪು, ಸ್ವಲ್ಪ ಬಲಿತಿತ್ತು ಕೂಡ. ಅದನ್ನೇ ಹಾಗೂ ಹೀಗೂ ಕ್ಲೀನ್ ಮಾಡಿ ಸುಲಿದೆ. ಎರಡು ಕಪ್ಪು ಕಾಳು ರೆಡಿ ಆಯಿತು. ಅಡುಗೆ ಮನೆಯ ಶೆಲ್ಫ್ ನಾನು ಆಸ್ಟ್ರೇಲಿಯಾಗೆ ಹೋದಾಗ ಹೇಗೆ ಇಟ್ಟಿದ್ದೇನೋ ಹಾಗೇ ಇತ್ತು. ಧೂಳು ಕೂಡ ಒರೆಸಿರಲಿಲ್ಲ. ನಾನಷ್ಟೇ ಉಪಯೋಗಿಸುವ ಸಾಮಾನುಗಳನ್ನು ನಮ್ಮ ಮನೆಯಲ್ಲಿ ಯಾರೂ ಮುಟ್ಟಿಕೂಡ ನೋಡುವುದಿಲ್ಲ. ತುಂಬಾ ಒಳ್ಳೆ ಜನ. ಶೆಲ್ಫ್ ನಲ್ಲಿ ಸ್ಟೀಲ್ ಡಬ್ಬಿಯಲ್ಲಿ ಇಟ್ಟಿದ್ದ ಅಕ್ಕಿ ಹಿಟ್ಟು ಹಾಗೇ ಇತ್ತು. ಪುಣ್ಯಕ್ಕೆ ಕೆಟ್ಟುಹೋಗಿರಲಿಲ್ಲ. ಅದನ್ನೇ ಇನ್ನೊಂದು ಸರತಿ ಜರಡಿ ಹಿಡಿದು ನಾಲಕ್ಕು ಕಪ್ಪು ಹಿಟ್ಟಿಗೆ ಸ್ವಲ್ಪ ಮಜ್ಜಿಗೆ ಸ್ವಲ್ಪ ನೀರು ಉಪ್ಪು ಹಾಕಿ ಕಲಸಿಟ್ಟೆ.
ಹಿತ್ತಲಲ್ಲಿ ಕರಿಬೇವು ಎಲೆ ಬಿಡಿಸಿ ತಂದೆ. ಒಣ ಮೆಣಸಿನಕಾಯಿ ಹೇಗೂ ಸ್ಟಾಕ್ ಇದ್ದೇ ಇರತ್ತೆ. ಅದನ್ನೇ ಒಂದಿಷ್ಟು ಕೈಯಲ್ಲೇ ಪುಡಿಪುಡಿ ಮಾಡಿ ಹಿಟ್ಟಿಗೆ ಸೇರಿಸಿ ಕಲಸಿದೆ. ಕುಕ್ಕರ್ ನಲ್ಲಿ ಬೆಂದು ಇನ್ನಷ್ಟು ಕಪ್ಪು ಕಪ್ಪಾಗಿದ್ದ ಅವರೇಕಾಳುಗಳನ್ನು ಹಿಟ್ಟಿಗೆ ಹಾಕಿದೆ. ಎಣ್ಣೆ ಸವರಿ ಬಾಣಲಿ ರೊಟ್ಟಿ ಮಾಡಿದರೆ "ಅಕ್ಕಿ ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ" ಎಂದು ಬರಗೆಟ್ಟವರಂತೆ ಎಲ್ಲಾ ತಿಂದು ಖಾಲಿಮಾಡಿದರು. ಇವರಿಗೆಲ್ಲ ನಾನು ಮಾಡುವ ಅಡುಗೆ ಬೆಲೆ ಗೊತ್ತಾಗಬೇಕಾದರೆ ಮತ್ತೆ ನಾನು ಮೆಲ್ಬೋರ್ನ್ ಮಗಳ ಮನೆಗೆ ಹೋಗಬೇಕು ಅಂದು ಮನಸ್ಸಿನಲ್ಲೇ ಅಂದುಕೊಂಡೆ. ಇದೇ ಜೀವನವಲ್ಲವೇ?
(ನಿರೂಪಣೆ : ದಟ್ಸ್ ಕನ್ನಡ ಅಡುಗೆ ಶಾಲೆ)



Click it and Unblock the Notifications