Just In
- 2 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 11 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 11 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 12 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
Don't Miss
- Movies ಪಶ್ಚಾತಾಪದ ಅಗ್ನಿಕುಂಡದಲ್ಲಿ ಪರಿಣಿತಿ ಚೋಪ್ರಾ ; ನನ್ನೆಲ್ಲ ಸೋಲುಗಳಿಗೆ ಆ ವ್ಯಕ್ತಿಗಳೇ ಕಾರಣ ಎಂದ ನಟಿ..!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ!
ನಾನು ಊರಿಗೆ ಬರಲಿ ಎಂದೇ ಕಾಯುತ್ತಿದ್ದ ಇವರೆಲ್ಲ ಈಗ ಬಂದಕೂಡಲೇ 'ಅದು ಮಾಡೆ, ಇದು ಮಾಡಮ್ಮಾ' ಎಂದು ಅಡುಗೆ ತಿಂಡಿಗಳ ಪಟ್ಟಿ ಹಿಡಿದುಕೊಂಡು ನಿಂತಿದ್ದರು. ನಾಲಗೆ ಕೆಟ್ಟಿರಬೇಕು, ಪಾಪ. ಆದರೆ, ಅಡುಗೆ ಮನೆ ಖಾಲಿ ಖಾಲಿ. ಯಾರೂ ಕೂಡ ತಿಂಗಳ ಸಾಮಾನುಗಳನ್ನು ಸೊಸೈಟಿಗೆ ಹೋಗಿ ತಂದಿಟ್ಟಿರಲಿಲ್ಲ. ಮನೆಯಲ್ಲಿ ತರಕಾರಿಗಳೂ ಇರಲಿಲ್ಲ. ಯೋಚನೆ ಮಾಡುತ್ತಿರುವಾಗ ಅಷ್ಟುಹೊತ್ತಿಗೆ ಸರಿಯಾಗಿ ಕೈಗಾಡಿ ತರಕಾರಿಯ ಪುಣ್ಯಾತ್ಮ ಲಕ್ಷ್ಣಣ ಮನೆಮುಂದೆ ಬಂದ. ಬಾರಪ್ಪಾ ಬಾರಪ್ಪಾ ಎಂದು ಬುಟ್ಟಿ ಹಿಡಿದು ಹೋದರೆ ಗಾಡಿಯಲ್ಲಿ ಅಂಥದೇನೂ ತಾಜಾ ತರಕಾರಿ ಕಾಣಿಸಲಿಲ್ಲ.
ಗಾಡಿಯ ಮೂಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸ್ವಲ್ಪ ಅವರೇಕಾಯಿ ಇಟ್ಟಿದ್ದ. ಈಗ ಎಚ್ಚೆತ್ತುಕೊಂಡೆ. ಹೌದಲ್ಲಾ! ಈ ಸೀಸನ್ನಿನಲ್ಲಿ ನಾನು ಅವರೇಕಾಯಿ ಅಡುಗೆ ಮಾಡೇ ಇಲ್ಲವಲ್ಲಾ ಎಂದುಕೊಂಡು 1 ಕೆಜಿ ಖರೀದಿಸಿದೆ. ಕಾಯಿ ಒಣಗಿತ್ತು. ಸೀಸನ್ ಹೋಗುತ್ತಿದೆ, ಈಗ ಬಿಟ್ಟರೆ ಆಮೇಲೆ ಸಿಕ್ಕಲ್ಲ ಎಂದು 'ಹೇಗಾದರೂ ಇರಲಿ ಕೊಡಪ್ಪಾ' ಎಂದು ಲಕ್ಷ್ಣಣನಿಗೆ ಹೇಳಿದೆ.
ಕಾಯಿ ಸುಲಿದರೆ ಬರೀ ಹುಳ. ಕಾಯಿಗಳೂ ಚಪ್ಪಟೆ ಚಪ್ಪಟೆ. ಚೆನ್ನಾದ ಕಾಯಿಗಳು ಕೆಲವು ಇದ್ದವು. ಆದರೆ ಕಾಳುಗಳು ಕಪ್ಪುಕಪ್ಪು, ಸ್ವಲ್ಪ ಬಲಿತಿತ್ತು ಕೂಡ. ಅದನ್ನೇ ಹಾಗೂ ಹೀಗೂ ಕ್ಲೀನ್ ಮಾಡಿ ಸುಲಿದೆ. ಎರಡು ಕಪ್ಪು ಕಾಳು ರೆಡಿ ಆಯಿತು. ಅಡುಗೆ ಮನೆಯ ಶೆಲ್ಫ್ ನಾನು ಆಸ್ಟ್ರೇಲಿಯಾಗೆ ಹೋದಾಗ ಹೇಗೆ ಇಟ್ಟಿದ್ದೇನೋ ಹಾಗೇ ಇತ್ತು. ಧೂಳು ಕೂಡ ಒರೆಸಿರಲಿಲ್ಲ. ನಾನಷ್ಟೇ ಉಪಯೋಗಿಸುವ ಸಾಮಾನುಗಳನ್ನು ನಮ್ಮ ಮನೆಯಲ್ಲಿ ಯಾರೂ ಮುಟ್ಟಿಕೂಡ ನೋಡುವುದಿಲ್ಲ. ತುಂಬಾ ಒಳ್ಳೆ ಜನ. ಶೆಲ್ಫ್ ನಲ್ಲಿ ಸ್ಟೀಲ್ ಡಬ್ಬಿಯಲ್ಲಿ ಇಟ್ಟಿದ್ದ ಅಕ್ಕಿ ಹಿಟ್ಟು ಹಾಗೇ ಇತ್ತು. ಪುಣ್ಯಕ್ಕೆ ಕೆಟ್ಟುಹೋಗಿರಲಿಲ್ಲ. ಅದನ್ನೇ ಇನ್ನೊಂದು ಸರತಿ ಜರಡಿ ಹಿಡಿದು ನಾಲಕ್ಕು ಕಪ್ಪು ಹಿಟ್ಟಿಗೆ ಸ್ವಲ್ಪ ಮಜ್ಜಿಗೆ ಸ್ವಲ್ಪ ನೀರು ಉಪ್ಪು ಹಾಕಿ ಕಲಸಿಟ್ಟೆ.
ಹಿತ್ತಲಲ್ಲಿ ಕರಿಬೇವು ಎಲೆ ಬಿಡಿಸಿ ತಂದೆ. ಒಣ ಮೆಣಸಿನಕಾಯಿ ಹೇಗೂ ಸ್ಟಾಕ್ ಇದ್ದೇ ಇರತ್ತೆ. ಅದನ್ನೇ ಒಂದಿಷ್ಟು ಕೈಯಲ್ಲೇ ಪುಡಿಪುಡಿ ಮಾಡಿ ಹಿಟ್ಟಿಗೆ ಸೇರಿಸಿ ಕಲಸಿದೆ. ಕುಕ್ಕರ್ ನಲ್ಲಿ ಬೆಂದು ಇನ್ನಷ್ಟು ಕಪ್ಪು ಕಪ್ಪಾಗಿದ್ದ ಅವರೇಕಾಳುಗಳನ್ನು ಹಿಟ್ಟಿಗೆ ಹಾಕಿದೆ. ಎಣ್ಣೆ ಸವರಿ ಬಾಣಲಿ ರೊಟ್ಟಿ ಮಾಡಿದರೆ "ಅಕ್ಕಿ ರೊಟ್ಟಿ ಬೊಂಬಾಟಾಗಿದೆ ಬೊಂಬಾಟಾಗಿದೆ" ಎಂದು ಬರಗೆಟ್ಟವರಂತೆ ಎಲ್ಲಾ ತಿಂದು ಖಾಲಿಮಾಡಿದರು. ಇವರಿಗೆಲ್ಲ ನಾನು ಮಾಡುವ ಅಡುಗೆ ಬೆಲೆ ಗೊತ್ತಾಗಬೇಕಾದರೆ ಮತ್ತೆ ನಾನು ಮೆಲ್ಬೋರ್ನ್ ಮಗಳ ಮನೆಗೆ ಹೋಗಬೇಕು ಅಂದು ಮನಸ್ಸಿನಲ್ಲೇ ಅಂದುಕೊಂಡೆ. ಇದೇ ಜೀವನವಲ್ಲವೇ?
(ನಿರೂಪಣೆ : ದಟ್ಸ್ ಕನ್ನಡ ಅಡುಗೆ ಶಾಲೆ)