Latest Updates
-
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು!
ಹೊಸರುಚಿ : ಅವಲಕ್ಕಿ ಬಿಸಿಬೇಳೆ ಭಾತ್
ಬೇಕಾಗುವ ಸಾಮಾನುಗಳು :-
ಗಟ್ಟಿ ಅವಲಕ್ಕಿ -250 ಗ್ರಾಂ
ಹೆಸರುಬೇಳೆ -250 ಗ್ರಾಂ
ಚಿಕ್ಕ ನಿಂಬೆ ಗಾತ್ರದ ಹುಣಸೆಹಣ್ಣು
ರುಚಿಗೆ ತಕ್ಕ ಉಪ್ಪು
ತರಕಾರಿಗಳು
ಸ್ವಲ್ಪ ಬೀನ್ಸ್
ಕ್ಯಾರೆಟ್ -(3-4)
ಹಸಿ ಬಟಾಣಿ ಕಾಳು - 1- ಲೋಟ
ಆಲೂಗೆಡ್ಡೆ - 2
ಹೆಚ್ಚಿದ ಕ್ಯಾಬೇಜ್ - 1- ಲೋಟ
ದಪ್ಪ ವೆುಣಸಿನಕಾಯಿ - 2(ಕ್ಯಾಪ್ಸಿಕಾಂ)
ಕರಿಬೆವಿನ ಎಲೆ -(8-10)
ಮಸಾಲೆಗೆ ಬೇಕಾಗುವ ಸಾಮಾಗ್ರಿಗಳು:-
ಕಡ್ಲೆ ಬೇಳೆ - 1-ಚಮಚ
ಉದ್ದಿನ ಬೇಳೆ - 1/2 ಚಮಚ
ಧಾನ್ಯದ ಪುಡಿ -3 ಚಿಕ್ಕ ಚಮಚ
ಖಾರದ ಪುಡಿ - 2 ಚಿಕ್ಕ ಚಮಚ
ಜೀರಿಗೆ+ಮೆಂತೆ -1 ಚಿಕ್ಕ ಚಮಚ
ಸ್ವಲ್ಪ ಕೊಬ್ಬರಿ + ಇಂಗು -1ಚಮಚ
ಎಲ್ಲಾ ಮಸಾಲೆ ಸಾಮಾಗ್ರಿಗಳನ್ನು ಹುರಿದು ಪುಡಿ ಮಾಡಿ ಇಟ್ಟು ಕೊಳ್ಳಬೇಕು . ತರಕಾರಿಗಳನ್ನು ಹೆಚ್ಚಿ ಇಟ್ಟು ಕೊಳ್ಳ ಬೇಕು. ದಪ್ಪ ವೆುಣಸಿನಕಾಯಿ ಹೊರತು ಪಡಿಸಿ ಮಿಕ್ಕ ತರಕಾರಿಗಳನ್ನು ಬೇಯಿಸಿಟ್ಟು ಕೊಳ್ಳಬೇಕು.
ಮಾಡುವ ವಿಧಾನ :-
ಅವಲಕ್ಕಿಯನ್ನು ಹತ್ತು ನಿಮಿಷ ನೆನೆಸಿಡಿ.
ಬಳಿಕ ಕುಕ್ಕರ್ನಲ್ಲಿ (3-4) ಲೋಟ ನೀರು ಹಾಕಿ ಹೆಸರುಬೇಳೆಯನ್ನು 1-ವಿಷಿಲ್ನಷ್ಟು ಬೇಯಿಸಿ ಆಮೇಲೆ ಅದಕ್ಕೆ ನೆನೆದಿರುವ ಅವಲಕ್ಕಿ ಮತ್ತು ತರಕಾರಿಗಳನ್ನು ಹಾಕಿ 5- ನಿಮಿಷ ಸಿಮ್ನಲ್ಲಿ ಇಡಿ (ಸಣ್ಣ ಗೆ ಬೆಂಕಿಯಿರಲಿ)
ಎಲ್ಲ ಪದಾರ್ಥಗಳು ಚೆನ್ನಾಗಿ ಬೆಂದ ನಂತರ, ಮಸಾಲೆ ಪುಡಿ ಮತ್ತು ಹುಳಿ ಹಿಂಡಿ ಹಾಕಿ .ಆಮೇಲೆ ರುಚಿಗೆ ತಕ್ಕ ಉಪ್ಪು ಹಾಕಿ . ನೀರು ಸ್ವಲ್ಪ ಜಾಸ್ತಿ ಹಾಕಿ , ಬಿಸಿಬೇಳೆ ಬಾತು ಸ್ವಲ್ಪ ನೀರಾಗಿದ್ದರೆ ಒಳ್ಳೆಯದು(ತೆಳ್ಳಗಿದ್ದರೆ).
ಆರಿದ ನಂತರ ಗಟ್ಟಿಯಾಗುತ್ತದೆ. ಆಮೇಲೆ ಕೆಳಗಿಳಿಸಿಕೊಳ್ಳಿ.
ಬಾಣಲೆಯಲ್ಲಿ ಒಂದು ಸೌಟು ಕಡ್ಲೆ ಕಾಯಿ ಎಣ್ಣೆಗೆ ಸಾಸಿವೆ ಹಾಕಿ ಚಟಪಟ ಗುಟ್ಟಿದ ಮೇಲೆ ,ಹೆಚ್ಚಿದ ದಪ್ಪ ಮೆಣಸಿನಕಾಯಿ , ಕರಿ ಬೇವಿನಎಲೆಗಳನ್ನು ಹಾಕಿ 3-4 ನಿಮಿಷ ಹುರಿದು ಅದನ್ನು ಬಿಸಿ ಬೇಳೆ ಬಾತಿಗೆ ಹಾಕಿ.
ಬಿಸಿಬಿಸಿ ಇರುವಾಗಲೇ ತುಪ್ಪ ಹಾಕಿ ತಿಂದರೆ ರುಚಿಯಾಗಿರುತ್ತದೆ.ನೆಚ್ಚಿ ಕೊಳ್ಳಲು ಸೌತೆಕಾಯಿ ಪಚ್ಚೋಡಿ ಮಾಡಿಕೊಳ್ಳಿ. ಇದು ನಾಲ್ಕೈದು ಜನರಿಗೆ ಸಾಕಾಗುತ್ತದೆ. ಬೇಕಾದರೆ ಹಪ್ಪಳ ಕರಿದು ಜೊತೆಯಲ್ಲಿ ತಿನ್ನಬಹುದು. ವಾರದ ಕೊನೆಯಲ್ಲಿ ಮಾಡಿ ನೋಡಿ, ಆಹ್ಹಾಹ್ಹಾ ಎಷ್ಟೊಂದು ರುಚಿಕರ...



Click it and Unblock the Notifications