Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಸಾಯಂಕಾಲದ ತಿಂಡಿ : ಗೊಜ್ಜವಲಕ್ಕಿ

ಒಂದು ಪಾವು ದಪ್ಪ ಅವಲಕ್ಕಿ
ಒಂದು ನೆಲ್ಲಿಕಾಯಿಯಷ್ಟು ಹುಣಸೇ ಹಣ್ಣು
ಒಂದು ಟೀ ಸ್ಪೂನ್ ಉಪ್ಪು
ಒಂದು ಟೀ ಸ್ಪೂನ್ ಮೆಣಸಿನ ಪುಡಿ
ಒಂದು ಬೊಗಸೆಯಷ್ಟು ತೆಂಗಿನ ಕಾಯಿ ತುರಿ
ನಿಂಬೆ ಹಣ್ಣಿನಷ್ಟು ಬೆಲ್ಲ
ಒಂದೆರಡು ಒಣ ಮೆಣಸಿನಕಾಯಿ, 2 ಚಿಟಕಿ ಸಾಸಿವೆ, 2 ಚಮಚ ಕಡಲೇಬೇಳೆ, ಒಂದು ಚಮಚ ಉದ್ದಿನ ಬೇಳೆ, 4 ಚಮಚ ಎಣ್ಣೆ - ಇವಿಷ್ಟೂ ಒಗ್ಗರಣೆಗೆ.
ಮಾಡುವ ವಿಧಾನ:
ದಪ್ಪ ಅವಲಕ್ಕಿಯನ್ನು ಕುಟ್ಟಿ ರವೆಯಂತೆ ಮಾಡಿಟ್ಟುಕೊಳ್ಳಬೇಕು. ಹುಣಸೇ ಹಣ್ಣನ್ನು ನೀರಿನಲ್ಲಿ ಸ್ವಲ್ಪ ಹೊತ್ತು ನೆನೆಸಿ, ಹುಣಸೇ ನೀರನ್ನು ಮಾತ್ರ ತೆಗೆದಿಟ್ಟುಕೊಳ್ಳಿ. ಈ ಹುಳಿ ನೀರಿಗೆ ಬೆಲ್ಲ, ಉಪ್ಪು, ಮೆಣಸಿನ ಪುಡಿ ಹಾಕಿ ಬೆರೆಸಿ. ಅವಲಕ್ಕಿ ರವೆ ಮತ್ತು ಈ ಮಿಶ್ರಣವನ್ನು ಚೆನ್ನಾಗಿ ಬೆರೆಸಿ. ಇದು ಇಡ್ಲಿ ಹಿಟ್ಟಿನಷ್ಟು ದಪ್ಪಗಾಗಬೇಕು. ಅಗತ್ಯವಿದ್ದರೆ ಒಂದಿಷ್ಟು ನೀರು ಸೇರಿಸಿಕೊಳ್ಳಬಹುದು. ಈ ಮಿಶ್ರಣವನ್ನು 15 ನಿಮಿಷ ಹಾಗೇ ಇಟ್ಟಿರಿ. ನಂತರ ತೆಂಗಿನ ಕಾಯಿ ತುರಿ ಬೆರೆಸಿ.
ಬಾಣಲೆಯಾಂದರಲ್ಲಿ ಕರಿಬೇವು ಒಗ್ಗರಣೆ ಇಟ್ಟು , ಸಾಸಿವೆ ಸಿಡಿಯುತ್ತಲೇ ಈ ಮಿಶ್ರಣವನ್ನು ಹಾಕಿ ಚೆನ್ನಾಗಿ ಮಗುಚಿ. ಬಿಸಿ ಬಿಸಿಯಾಗಿದ್ದಾಗ ತಿನ್ನಲು ತುಂಬಾ ರುಚಿ.



Click it and Unblock the Notifications