Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಇಡ್ಲಿಗೆ ಬೆಸ್ಟ್ ಜೋಡಿ ಘಮ ಘಮ ಈರುಳ್ಳಿ ಸಾಂಬಾರ್

ಈರುಳ್ಳಿ ಸಾಂಬಾರ್ ಗೆ ಬೇಕಾಗುವ ಸಾಮಗ್ರಿ: 2 ಚಮಚ ಧನಿಯಾ, 2 ಚಮಚ ಉದ್ದಿನ ಬೇಳೆ, 2 ಕೆಂಪು ಮೆಣಸಿನಕಾಯಿ, 1/2 ಕಪ್ ತೆಂಗಿನ ತುರಿ, 1/4 ಕಪ್ ಜೀರಿಗೆ, 1/4 ಕೆ.ಜಿ ಚಿಕ್ಕ ಈರುಳ್ಳಿ (ನಾಟಿ), 1 ಟೊಮೆಟೊ, ಕೊತ್ತಂಬರಿ, ಸಾಸಿವೆ, ಎಣ್ಣೆ, ಉಪ್ಪು, 1 ಚಮಚ ತುಪ್ಪ
ಈರುಳ್ಳಿ ಸಾಂಬಾರ್ ಮಾಡುವುದು ಹೇಗೆ?
* ಒಂದು ಬಾಣಲೆಗೆ ಎಣ್ಣೆ ಹಾಕಿ ಕಾದ ನಂತರ ಉದ್ದಿನ ಬೇಳೆಯನ್ನು ಸ್ವಲ್ಪ ಕೆಂಪಗಾಗುವ ತನಕ ಹುರಿದುಕೊಳ್ಳಬೇಕು. ಇದಾದ ನಂತರ ಅದರಲ್ಲಿ ಧನಿಯಾ ಬೀಜ, ಜೀರಿಗೆ, ಕೆಂಪು ಮೆಣಸಿನಕಾಯಿ ಮತ್ತು ತೆಂಗಿನ ತುರಿಯನ್ನು ಹುರಿದು ಪಕ್ಕಕ್ಕಿಟ್ಟುಕೊಳ್ಳಬೇಕು.
* ಒಂದು ಪಾತ್ರೆಗೆ ಒಂದು ಲೋಟ ನೀರು ಹಾಕಿ ಅದಕ್ಕೆ ಟೊಮೆಟೊ, ಈರುಳ್ಳಿ ಮತ್ತು ರುಚಿಗೆ ತಕ್ಕಂತೆ ಉಪ್ಪು ಹಾಕಬೇಕು. (ಸಾಂಬಾರ್ ಸ್ವಲ್ಪ ಖಾರವಿರಬೇಕೆಂದರೆ ಮೆಣಸಿನಕಾಯಿಪುಡಿ ಅಥವಾ ಸಾಂಬಾರ್ ಪುಡಿ ಬೆರೆಸಬಹುದು). 5-10 ನಿಮಿಷ ಸಣ್ಣ ಉರಿಯಲ್ಲಿ ಈ ಮಿಶ್ರಣವನ್ನು ಬೇಯಿಸುತ್ತಿರಬೇಕು.
* ಹುರಿದಿಟ್ಟುಕೊಂಡಿದ್ದ ಮಿಶ್ರಣವನ್ನು ಪೇಸ್ಟ್ ನಂತೆ ರುಬ್ಬಿಕೊಂಡು ಕುದಿಯುತ್ತಿರುವ ಮಿಶ್ರಣಕ್ಕೆ ಬೆರೆಸಬೇಕು. ಮಸಾಲೆಯ ವಾಸನೆ ಬರುವವರೆಗೂ ಸಾಂಬಾರನ್ನು ತಿರುಗಿಸುತ್ತಿರಬೇಕು.
* ನಂತರ ಒಲೆ ಆರಿಸಿ, ಸಾಂಬಾರಿಗೆ ಸಾಸಿವೆ ಒಗ್ಗರಣೆ ನಿಡಬೇಕು. ಕೊನೆಯಲ್ಲಿ ಇದಕ್ಕೆ ಒಂದು ಚಮಚ ತುಪ್ಪ ಬೆರೆಸಿದರೆ ಸಾಕು ಸಾಂಬಾರ್ ಘಂ ಅಂತಿರುತ್ತೆ.



Click it and Unblock the Notifications