Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶಿರಸಿಭವನದಲ್ಲಿ ಅಪ್ಪೆಮಿಡಿ ಬೆಳ್ಳುಳ್ಳಿ ಚಟ್ನಿ

* ತೇಜಸ್ವಿನಿ ಹೆಗಡೆ, ಬೆಂಗಳೂರು
ಅಪ್ಪೆಮಿಡಿ ಬೆಳ್ಳುಳ್ಳಿ ಚಟ್ನಿಯು ಬಹು ಉಪಯೋಗಿಯಾಗಿದೆ. ತಯಾರಿಸಲೂ ಬಲು ಸುಲಭ. ತುಂಬಾ ಸ್ವಾದಭರಿತ ಹಾಗೂ ಆರೋಗ್ಯಕರವಾದುದು ಕೂಡ. ಇದನ್ನು ತಯಾರಿಸಲು ಬಳಸುವ ಬೆಳ್ಳುಳ್ಳಿ ಗ್ಯಾಸ್ಟ್ರಿಕ್ ಸಮಸ್ಯೆ, ರಕ್ತ ಶುದ್ಧೀಕರಣಕ್ಕೆ ತುಂಬಾ ಉಪಯುಕ್ತವಾದರೆ ಕರಿಮೆಣಸಿನ ಕಾಳು(Pepper) ಶೀತ, ಕೆಮ್ಮಿಗೆ ರಾಮಬಾಣ. ಹಾಗಾಗಿಯೇ ಈ ಚಟ್ನಿಯನ್ನು ಬಾಣಂತಿಯರ ಚಟ್ನಿಯೆಂದೂ ಹೇಳುತ್ತಾರೆ. ಬಾಣಂತಿಯರು ಈ ಚಟ್ನಿಯನ್ನು ಊಟದ ಪ್ರಾರಂಭದಲ್ಲಿ ಒಂದು ಚಮಚ ಚಟ್ನಿಗೆ ಒಂದು ಚಮಚ ತುಪ್ಪವನ್ನು ಹಾಕಿ ಸೇವಿಸಿದರೆ ಕ್ಷೇಮ.
ಬೇಕಾಗುವ ಸಾಮಗ್ರಿಗಳು:
1. ಬೆಳ್ಳುಳ್ಳಿ - 10 ಎಸಳು (ಸುಮಾರು ಒಂದು ಗಡ್ಡೆ)
2. ಅಪ್ಪೆಮಿಡಿ - ಮೂರು (3)
3. ಕಡ್ಡಿಮೆಣಸು (ಕೆಂಪು ಮೆಣಸು) - 2
4. ತೆಂಗಿನ ಕಾಯಿ - ಅರ್ಧ ಭಾಗ.
5. ಕರಿಮೆಣಸಿನ ಕಾಳು (Pepper) - 1 ಚಮಚ. ವಿ.ಸೂ: 1) ಈ ಚಟ್ನಿಯನ್ನು ಬಾಣಂತಿಯರಿಗಾಗಿಯೇ ತಯಾರಿಸುವಾಗ, ಕೇವಲ ಕರಿಮೆಣಸನ್ನೇ ಬೇಕಿದ್ದರೆ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹಾಕಿ. ಕೆಂಪುಮೆಣಸನ್ನು ಬಳಸದಿದ್ದರೆ ಒಳ್ಳೆಯದು. 2) ಉಪ್ಪಿನಲ್ಲಿ ಹಾಕಿದ ಮಿಡಿಯನ್ನೇ ಬಳಸುವುದರಿಂದ ಮೇಲಿನಿಂದ ಉಪ್ಪನ್ನು ಹಾಕದಿದ್ದರೆ ಒಳಿತು.
ತಯಾರಿಸುವ ವಿಧಾನ :
1. ಮೊದಲಿಗೆ ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಸಿಪ್ಪೆಯನ್ನು ಸುಲಿದಿಟ್ಟುಕೊಳ್ಳಬೇಕು. ಅಪ್ಪೆಮಿಡಿಗಳನ್ನು ಚೆನ್ನಾಗಿ ತೊಳೆದು ಸಣ್ಣ ಚೂರಾಗಿಸಿಟ್ಟುಕೊಳ್ಳಬೇಕು.
2. ಬಾಣಲೆಗೆ 2 ಚಮಚ ತೆಂಗಿನೆಣ್ಣೆಯನ್ನು ಹಾಕಿ ಮೊದಲಿಗೆ ಬೆಳ್ಳುಳ್ಳಿಯನ್ನು ಹುರಿಯಬೇಕು. ಬೆಳ್ಳುಳ್ಳಿ ಎಸಳುಗಳು ಕಂದುಬಣ್ಣಕ್ಕೆ ತಿರುಗತೊಡಗಿದ್ದಾಗ, ಕಡ್ಡಿಮೆಣಸು ಚೂರುಗಳು ಹಾಗೂ ಮಾವಿನಮಿಡಿ ಚೂರುಗಳನ್ನು ಹಾಕಿ, ಮಿಡಿಯ ಚೂರುಗಳು ತುಸು ಬಾಡುವತನಕ ಹುರಿಯಬೇಕು.
3. ಹುರಿದ ಪದಾರ್ಥಗಳು ಚೆನ್ನಾಗಿ ತಣಿದ ನಂತರ ಕಾಯಿತುರಿ ಹಾಗೂ ಕಾಳುಮೆಣಸನ್ನು ಜೊತೆಗೆ ಹಾಕಿ ನುಣ್ಣನೆ ರುಬ್ಬಬೇಕು. ಬಾಯಲ್ಲಿ ನೀರೂರಿಸುವ, ಆರೋಗ್ಯಕರ ಚಟ್ನಿ ಈಗ ತಿನ್ನಲು ರೆಡಿ.
ಈ ಚಟ್ನಿಯನ್ನು ತಯಾರಿಸಿದ ನಂತರ ಸ್ವಲ್ಪ ನೀರನ್ನು ಹಾಕಿ ಕುದಿಸಿ, ಆರಿಸಿ, ಗಾಳಿಯಾಡದ ಡಬ್ಬಿಯಲ್ಲಿ ಹಾಕಿ, ಫ್ರಿಜ್ನಲ್ಲಿಟ್ಟರೆ, ಚಟ್ನಿ ಒಂದುವಾರದವರೆಗೂ ಬಳಕೆಗೆ ಬರುತ್ತದೆ. ಅದರ ಸ್ವಾದವೂ ಕೆಡುವುದಿಲ್ಲ.



Click it and Unblock the Notifications