Latest Updates
-
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ!
ಶಿರಸಿಭವನದಲ್ಲಿ ಅಪ್ಪೆಮಿಡಿ ಬೆಳ್ಳುಳ್ಳಿ ಚಟ್ನಿ

* ತೇಜಸ್ವಿನಿ ಹೆಗಡೆ, ಬೆಂಗಳೂರು
ಅಪ್ಪೆಮಿಡಿ ಬೆಳ್ಳುಳ್ಳಿ ಚಟ್ನಿಯು ಬಹು ಉಪಯೋಗಿಯಾಗಿದೆ. ತಯಾರಿಸಲೂ ಬಲು ಸುಲಭ. ತುಂಬಾ ಸ್ವಾದಭರಿತ ಹಾಗೂ ಆರೋಗ್ಯಕರವಾದುದು ಕೂಡ. ಇದನ್ನು ತಯಾರಿಸಲು ಬಳಸುವ ಬೆಳ್ಳುಳ್ಳಿ ಗ್ಯಾಸ್ಟ್ರಿಕ್ ಸಮಸ್ಯೆ, ರಕ್ತ ಶುದ್ಧೀಕರಣಕ್ಕೆ ತುಂಬಾ ಉಪಯುಕ್ತವಾದರೆ ಕರಿಮೆಣಸಿನ ಕಾಳು(Pepper) ಶೀತ, ಕೆಮ್ಮಿಗೆ ರಾಮಬಾಣ. ಹಾಗಾಗಿಯೇ ಈ ಚಟ್ನಿಯನ್ನು ಬಾಣಂತಿಯರ ಚಟ್ನಿಯೆಂದೂ ಹೇಳುತ್ತಾರೆ. ಬಾಣಂತಿಯರು ಈ ಚಟ್ನಿಯನ್ನು ಊಟದ ಪ್ರಾರಂಭದಲ್ಲಿ ಒಂದು ಚಮಚ ಚಟ್ನಿಗೆ ಒಂದು ಚಮಚ ತುಪ್ಪವನ್ನು ಹಾಕಿ ಸೇವಿಸಿದರೆ ಕ್ಷೇಮ.
ಬೇಕಾಗುವ ಸಾಮಗ್ರಿಗಳು:
1. ಬೆಳ್ಳುಳ್ಳಿ - 10 ಎಸಳು (ಸುಮಾರು ಒಂದು ಗಡ್ಡೆ)
2. ಅಪ್ಪೆಮಿಡಿ - ಮೂರು (3)
3. ಕಡ್ಡಿಮೆಣಸು (ಕೆಂಪು ಮೆಣಸು) - 2
4. ತೆಂಗಿನ ಕಾಯಿ - ಅರ್ಧ ಭಾಗ.
5. ಕರಿಮೆಣಸಿನ ಕಾಳು (Pepper) - 1 ಚಮಚ. ವಿ.ಸೂ: 1) ಈ ಚಟ್ನಿಯನ್ನು ಬಾಣಂತಿಯರಿಗಾಗಿಯೇ ತಯಾರಿಸುವಾಗ, ಕೇವಲ ಕರಿಮೆಣಸನ್ನೇ ಬೇಕಿದ್ದರೆ ಸ್ವಲ್ಪ ಜಾಸ್ತಿ ಪ್ರಮಾಣದಲ್ಲಿ ಹಾಕಿ. ಕೆಂಪುಮೆಣಸನ್ನು ಬಳಸದಿದ್ದರೆ ಒಳ್ಳೆಯದು. 2) ಉಪ್ಪಿನಲ್ಲಿ ಹಾಕಿದ ಮಿಡಿಯನ್ನೇ ಬಳಸುವುದರಿಂದ ಮೇಲಿನಿಂದ ಉಪ್ಪನ್ನು ಹಾಕದಿದ್ದರೆ ಒಳಿತು.
ತಯಾರಿಸುವ ವಿಧಾನ :
1. ಮೊದಲಿಗೆ ಬೆಳ್ಳುಳ್ಳಿ ಎಸಳುಗಳನ್ನು ಜಜ್ಜಿ ಸಿಪ್ಪೆಯನ್ನು ಸುಲಿದಿಟ್ಟುಕೊಳ್ಳಬೇಕು. ಅಪ್ಪೆಮಿಡಿಗಳನ್ನು ಚೆನ್ನಾಗಿ ತೊಳೆದು ಸಣ್ಣ ಚೂರಾಗಿಸಿಟ್ಟುಕೊಳ್ಳಬೇಕು.
2. ಬಾಣಲೆಗೆ 2 ಚಮಚ ತೆಂಗಿನೆಣ್ಣೆಯನ್ನು ಹಾಕಿ ಮೊದಲಿಗೆ ಬೆಳ್ಳುಳ್ಳಿಯನ್ನು ಹುರಿಯಬೇಕು. ಬೆಳ್ಳುಳ್ಳಿ ಎಸಳುಗಳು ಕಂದುಬಣ್ಣಕ್ಕೆ ತಿರುಗತೊಡಗಿದ್ದಾಗ, ಕಡ್ಡಿಮೆಣಸು ಚೂರುಗಳು ಹಾಗೂ ಮಾವಿನಮಿಡಿ ಚೂರುಗಳನ್ನು ಹಾಕಿ, ಮಿಡಿಯ ಚೂರುಗಳು ತುಸು ಬಾಡುವತನಕ ಹುರಿಯಬೇಕು.
3. ಹುರಿದ ಪದಾರ್ಥಗಳು ಚೆನ್ನಾಗಿ ತಣಿದ ನಂತರ ಕಾಯಿತುರಿ ಹಾಗೂ ಕಾಳುಮೆಣಸನ್ನು ಜೊತೆಗೆ ಹಾಕಿ ನುಣ್ಣನೆ ರುಬ್ಬಬೇಕು. ಬಾಯಲ್ಲಿ ನೀರೂರಿಸುವ, ಆರೋಗ್ಯಕರ ಚಟ್ನಿ ಈಗ ತಿನ್ನಲು ರೆಡಿ.
ಈ ಚಟ್ನಿಯನ್ನು ತಯಾರಿಸಿದ ನಂತರ ಸ್ವಲ್ಪ ನೀರನ್ನು ಹಾಕಿ ಕುದಿಸಿ, ಆರಿಸಿ, ಗಾಳಿಯಾಡದ ಡಬ್ಬಿಯಲ್ಲಿ ಹಾಕಿ, ಫ್ರಿಜ್ನಲ್ಲಿಟ್ಟರೆ, ಚಟ್ನಿ ಒಂದುವಾರದವರೆಗೂ ಬಳಕೆಗೆ ಬರುತ್ತದೆ. ಅದರ ಸ್ವಾದವೂ ಕೆಡುವುದಿಲ್ಲ.



Click it and Unblock the Notifications
