Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಮಳವಳ್ಳಿ ಅವರೆಕಾಳು, ಭಿಲಾಯ್ ಉಪ್ಪಿಟ್ಟು

ಬೇಕಾಗುವ ಪದಾರ್ಥಗಳೆಂದರೆ ಒಂದು ಲೋಟ ಯಾವುದಾದರು ಅಕ್ಕಿ. ಒಂದು ಲೋಟ ಅವರೆಕಾಳು. ಯಥಾಪ್ರಕಾರ ಒಗ್ಗರಣೆ ಸಾಮಾನುಗಳು. ಕೊತ್ತಂಬರಿ ಮತ್ತು ಹಸಿ ತೆಂಗಿನಕಾಯಿ ತುರಿ. ಚೂರು ಇಂಗು. ಈ ಉಪ್ಪಿಟ್ಟನ್ನು ಪ್ರೆಷರ್ ಕುಕ್ಕರಿನಲ್ಲೇ ಮಾಡಬೇಕು.
ಅಕ್ಕಿಯನ್ನು ಬಾಣಲೆಯಲ್ಲಿ ಹಾಕಿ ಚೆನ್ನಾಗಿ ಹುರಿಯಬೇಕು. ಅಕ್ಕಿಯ ಬಿಳುಪು ಮಾಯವಾಗಿ ಕಂದು ಬಣ್ಣಕ್ಕೆ ಹೊರಳುವವರೆಗೆ ಹುರಿಯಬೇಕು. ಹುರಿದ ನಂತರ ಅದನ್ನು ಆರಲು ಬಿಟ್ಟು ತಣ್ಣಗಾದ ನಂತರ ಮಿಕ್ಸಿಗೆ ಹಾಕಿ ರುಬ್ಬಬೇಕು. ಅಕ್ಕಿ ಸಣ್ಣಸಣ್ಣ ಚೂರುಗಳಾಗುವಷ್ಟು, ಅಂದರೆ ದಪ್ಪ ರವೆ ಗಾತ್ರಕ್ಕೆ ರುಬ್ಬಿದರೆ ಸಾಕು. ಇನ್ನೊಂದು ಕಡೆ ಅವರೆಕಾಳನ್ನು ಬರೀ ನೀರಿನಲ್ಲಿ ಕುಕ್ಕರಿನಲ್ಲಿ ಬೇಯಿಸಿ ಇಟ್ಟುಕೊಂಡಿರಬೇಕು. ಅವರೆ ಬೇಗ ಬೇಯುವುದಿಲ್ಲವಾದ್ದರಿಂದ ಐದಾರು ವಿಷಲ್ ಬರುವವರೆಗೂ ಸ್ಟೌವ್ ಮೇಲೆ ಕುಕ್ಕರ್ ಇಟ್ಟಿರಬೇಕು.
ಇನ್ನೊಂದು ಕುಕ್ಕರಿನಲ್ಲಿ ಸ್ವಲ್ಪ ಎಣ್ಣೆ ಸ್ವಲ್ಪ ತುಪ್ಪ ಹಾಕಿರಿ. ಅದು ಬಿಸಿಯಾದ ನಂತರ ಅದಕ್ಕೆ ಜೀರಿಗೆ, ಕರಿಬೇವು, ಸಾಸಿವೆ, ಹಸಿಮೆಣಸಿನಕಾಯಿ, ಇಂಗು ಬೆರೆಸಿ ಒಗ್ಗರಣೆ ತಯಾರಿಸಿಕೊಳ್ಳಿರಿ. ಇದಕ್ಕೆ ಬೇಯಿಸಿದ ಅವರೆಕಾಳು ಮತ್ತು ಅದರಲ್ಲಿರುವ ಬಿಸಿ ನೀರನ್ನು ಸುರಿಯಿರಿ. ಅವರೆಕಾಳು ಉಪ್ಪಿಟ್ಟಿಗೆ ನೀರಿನ ಪ್ರಮಾಣ ಒಂದಕ್ಕೆ ಮೂರರಷ್ಟು ಇರಬೇಕು. ಅಂದರೆ, ಒಂದು ಲೋಟ ಅಕ್ಕಿ ರವೆಗೆ ಮೂರು ಲೋಟ ನೀರು.
ಕುದಿಯುತ್ತಿರುವ ಅವರೆಕಾಳು ಒಗ್ಗರಣೆ ನೀರಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿದ ನಂತರ ಮಾಡಿಟ್ಟುಕೊಂಡ ರವೆ ಹಾಕಿ ಚೆನ್ನಾಗಿ ಕದಡಿರಿ. ಉಪ್ಪಿಟ್ಟು ಗಂಟಾಗದಂತೆ ಎಚ್ಚರವಹಿಸಿ. ರವೆ ಕೂಡಿಕೊಂಡು ಉಪ್ಪಿಟ್ಟಿನ ಹದಕ್ಕೆ ಬರುವವರೆಗೆ ನಿರಂತರವಾಗಿ ಸೌಟಿನಿಂದ ಕಲಕುತ್ತಿರಬೇಕು. ಆನಂತರ ಕುಕ್ಕರಿನ ಮುಚ್ಚಳ ಮುಚ್ಚಿ ಮತ್ತೆ ಸ್ವಲ್ಪ ಹೊತ್ತು ಬೇಯಲು ಬಿಡಿ. ಮುಖ್ಯವಾದ ವಿಚಾರವೆಂದರೆ ಕುಕ್ಕರಿನ ವೈಟ್ ಇಡಬಾರದು.
ಐದಾರು ನಿಮಿಷ ಹಬೆಯಲ್ಲಿ ಬೆಂದ ನಂತರ ಅಕ್ಕಿರವೆ ಉಪ್ಪಿಟ್ಟು ಮೃದುವಾಗುತ್ತದೆ. ಈಗ ಕುಕ್ಕರನ್ನು ಕೆಳಗಿಳಿಸಿ ಮುಚ್ಚಳ ತೆಗೆದು ಅದಕ್ಕೆ ಕೊತ್ತಂಬರಿ ಸೊಪ್ಪು ಮತ್ತು ತೆಂಗಿನಕಾಯಿ ತುರಿಯನ್ನು ಹಾಕಿ ಕಲಸಿರಿ. ಇದು ತುಂಬಾ ರುಚಿಕಟ್ಟಾಗಿರುತ್ತದೆ. ಇತರ ಉಪ್ಪಿಟ್ಟುಗಳಂತೆ ಇದೂ ಇರುತ್ತದೆ ಎಂದು ನಿಮಗೆ ಅನಿಸಿದರೂ ಸಹ ಇದರ ವಿಶೇಷ ಏನಪ್ಪಾ ಅಂದರೆ ಅಕ್ಕಿ ರವೆ ಮತ್ತು ಅವರೆಕಾಳು ಚೆನ್ನಾಗಿ ಬೆಂದು ಪರಸ್ಪರ ಉಪ್ಪಿಟ್ಟಿನಲ್ಲಿ ಬೆರೆತುಕೊಂಡಿರಬೇಕು.



Click it and Unblock the Notifications