Latest Updates
-
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ!
ಮಳವಳ್ಳಿ ಅವರೆಕಾಳು, ಭಿಲಾಯ್ ಉಪ್ಪಿಟ್ಟು

ಬೇಕಾಗುವ ಪದಾರ್ಥಗಳೆಂದರೆ ಒಂದು ಲೋಟ ಯಾವುದಾದರು ಅಕ್ಕಿ. ಒಂದು ಲೋಟ ಅವರೆಕಾಳು. ಯಥಾಪ್ರಕಾರ ಒಗ್ಗರಣೆ ಸಾಮಾನುಗಳು. ಕೊತ್ತಂಬರಿ ಮತ್ತು ಹಸಿ ತೆಂಗಿನಕಾಯಿ ತುರಿ. ಚೂರು ಇಂಗು. ಈ ಉಪ್ಪಿಟ್ಟನ್ನು ಪ್ರೆಷರ್ ಕುಕ್ಕರಿನಲ್ಲೇ ಮಾಡಬೇಕು.
ಅಕ್ಕಿಯನ್ನು ಬಾಣಲೆಯಲ್ಲಿ ಹಾಕಿ ಚೆನ್ನಾಗಿ ಹುರಿಯಬೇಕು. ಅಕ್ಕಿಯ ಬಿಳುಪು ಮಾಯವಾಗಿ ಕಂದು ಬಣ್ಣಕ್ಕೆ ಹೊರಳುವವರೆಗೆ ಹುರಿಯಬೇಕು. ಹುರಿದ ನಂತರ ಅದನ್ನು ಆರಲು ಬಿಟ್ಟು ತಣ್ಣಗಾದ ನಂತರ ಮಿಕ್ಸಿಗೆ ಹಾಕಿ ರುಬ್ಬಬೇಕು. ಅಕ್ಕಿ ಸಣ್ಣಸಣ್ಣ ಚೂರುಗಳಾಗುವಷ್ಟು, ಅಂದರೆ ದಪ್ಪ ರವೆ ಗಾತ್ರಕ್ಕೆ ರುಬ್ಬಿದರೆ ಸಾಕು. ಇನ್ನೊಂದು ಕಡೆ ಅವರೆಕಾಳನ್ನು ಬರೀ ನೀರಿನಲ್ಲಿ ಕುಕ್ಕರಿನಲ್ಲಿ ಬೇಯಿಸಿ ಇಟ್ಟುಕೊಂಡಿರಬೇಕು. ಅವರೆ ಬೇಗ ಬೇಯುವುದಿಲ್ಲವಾದ್ದರಿಂದ ಐದಾರು ವಿಷಲ್ ಬರುವವರೆಗೂ ಸ್ಟೌವ್ ಮೇಲೆ ಕುಕ್ಕರ್ ಇಟ್ಟಿರಬೇಕು.
ಇನ್ನೊಂದು ಕುಕ್ಕರಿನಲ್ಲಿ ಸ್ವಲ್ಪ ಎಣ್ಣೆ ಸ್ವಲ್ಪ ತುಪ್ಪ ಹಾಕಿರಿ. ಅದು ಬಿಸಿಯಾದ ನಂತರ ಅದಕ್ಕೆ ಜೀರಿಗೆ, ಕರಿಬೇವು, ಸಾಸಿವೆ, ಹಸಿಮೆಣಸಿನಕಾಯಿ, ಇಂಗು ಬೆರೆಸಿ ಒಗ್ಗರಣೆ ತಯಾರಿಸಿಕೊಳ್ಳಿರಿ. ಇದಕ್ಕೆ ಬೇಯಿಸಿದ ಅವರೆಕಾಳು ಮತ್ತು ಅದರಲ್ಲಿರುವ ಬಿಸಿ ನೀರನ್ನು ಸುರಿಯಿರಿ. ಅವರೆಕಾಳು ಉಪ್ಪಿಟ್ಟಿಗೆ ನೀರಿನ ಪ್ರಮಾಣ ಒಂದಕ್ಕೆ ಮೂರರಷ್ಟು ಇರಬೇಕು. ಅಂದರೆ, ಒಂದು ಲೋಟ ಅಕ್ಕಿ ರವೆಗೆ ಮೂರು ಲೋಟ ನೀರು.
ಕುದಿಯುತ್ತಿರುವ ಅವರೆಕಾಳು ಒಗ್ಗರಣೆ ನೀರಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿದ ನಂತರ ಮಾಡಿಟ್ಟುಕೊಂಡ ರವೆ ಹಾಕಿ ಚೆನ್ನಾಗಿ ಕದಡಿರಿ. ಉಪ್ಪಿಟ್ಟು ಗಂಟಾಗದಂತೆ ಎಚ್ಚರವಹಿಸಿ. ರವೆ ಕೂಡಿಕೊಂಡು ಉಪ್ಪಿಟ್ಟಿನ ಹದಕ್ಕೆ ಬರುವವರೆಗೆ ನಿರಂತರವಾಗಿ ಸೌಟಿನಿಂದ ಕಲಕುತ್ತಿರಬೇಕು. ಆನಂತರ ಕುಕ್ಕರಿನ ಮುಚ್ಚಳ ಮುಚ್ಚಿ ಮತ್ತೆ ಸ್ವಲ್ಪ ಹೊತ್ತು ಬೇಯಲು ಬಿಡಿ. ಮುಖ್ಯವಾದ ವಿಚಾರವೆಂದರೆ ಕುಕ್ಕರಿನ ವೈಟ್ ಇಡಬಾರದು.
ಐದಾರು ನಿಮಿಷ ಹಬೆಯಲ್ಲಿ ಬೆಂದ ನಂತರ ಅಕ್ಕಿರವೆ ಉಪ್ಪಿಟ್ಟು ಮೃದುವಾಗುತ್ತದೆ. ಈಗ ಕುಕ್ಕರನ್ನು ಕೆಳಗಿಳಿಸಿ ಮುಚ್ಚಳ ತೆಗೆದು ಅದಕ್ಕೆ ಕೊತ್ತಂಬರಿ ಸೊಪ್ಪು ಮತ್ತು ತೆಂಗಿನಕಾಯಿ ತುರಿಯನ್ನು ಹಾಕಿ ಕಲಸಿರಿ. ಇದು ತುಂಬಾ ರುಚಿಕಟ್ಟಾಗಿರುತ್ತದೆ. ಇತರ ಉಪ್ಪಿಟ್ಟುಗಳಂತೆ ಇದೂ ಇರುತ್ತದೆ ಎಂದು ನಿಮಗೆ ಅನಿಸಿದರೂ ಸಹ ಇದರ ವಿಶೇಷ ಏನಪ್ಪಾ ಅಂದರೆ ಅಕ್ಕಿ ರವೆ ಮತ್ತು ಅವರೆಕಾಳು ಚೆನ್ನಾಗಿ ಬೆಂದು ಪರಸ್ಪರ ಉಪ್ಪಿಟ್ಟಿನಲ್ಲಿ ಬೆರೆತುಕೊಂಡಿರಬೇಕು.



Click it and Unblock the Notifications











