Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಳವಳ್ಳಿ ಅವರೆಕಾಳು, ಭಿಲಾಯ್ ಉಪ್ಪಿಟ್ಟು

ಬೇಕಾಗುವ ಪದಾರ್ಥಗಳೆಂದರೆ ಒಂದು ಲೋಟ ಯಾವುದಾದರು ಅಕ್ಕಿ. ಒಂದು ಲೋಟ ಅವರೆಕಾಳು. ಯಥಾಪ್ರಕಾರ ಒಗ್ಗರಣೆ ಸಾಮಾನುಗಳು. ಕೊತ್ತಂಬರಿ ಮತ್ತು ಹಸಿ ತೆಂಗಿನಕಾಯಿ ತುರಿ. ಚೂರು ಇಂಗು. ಈ ಉಪ್ಪಿಟ್ಟನ್ನು ಪ್ರೆಷರ್ ಕುಕ್ಕರಿನಲ್ಲೇ ಮಾಡಬೇಕು.
ಅಕ್ಕಿಯನ್ನು ಬಾಣಲೆಯಲ್ಲಿ ಹಾಕಿ ಚೆನ್ನಾಗಿ ಹುರಿಯಬೇಕು. ಅಕ್ಕಿಯ ಬಿಳುಪು ಮಾಯವಾಗಿ ಕಂದು ಬಣ್ಣಕ್ಕೆ ಹೊರಳುವವರೆಗೆ ಹುರಿಯಬೇಕು. ಹುರಿದ ನಂತರ ಅದನ್ನು ಆರಲು ಬಿಟ್ಟು ತಣ್ಣಗಾದ ನಂತರ ಮಿಕ್ಸಿಗೆ ಹಾಕಿ ರುಬ್ಬಬೇಕು. ಅಕ್ಕಿ ಸಣ್ಣಸಣ್ಣ ಚೂರುಗಳಾಗುವಷ್ಟು, ಅಂದರೆ ದಪ್ಪ ರವೆ ಗಾತ್ರಕ್ಕೆ ರುಬ್ಬಿದರೆ ಸಾಕು. ಇನ್ನೊಂದು ಕಡೆ ಅವರೆಕಾಳನ್ನು ಬರೀ ನೀರಿನಲ್ಲಿ ಕುಕ್ಕರಿನಲ್ಲಿ ಬೇಯಿಸಿ ಇಟ್ಟುಕೊಂಡಿರಬೇಕು. ಅವರೆ ಬೇಗ ಬೇಯುವುದಿಲ್ಲವಾದ್ದರಿಂದ ಐದಾರು ವಿಷಲ್ ಬರುವವರೆಗೂ ಸ್ಟೌವ್ ಮೇಲೆ ಕುಕ್ಕರ್ ಇಟ್ಟಿರಬೇಕು.
ಇನ್ನೊಂದು ಕುಕ್ಕರಿನಲ್ಲಿ ಸ್ವಲ್ಪ ಎಣ್ಣೆ ಸ್ವಲ್ಪ ತುಪ್ಪ ಹಾಕಿರಿ. ಅದು ಬಿಸಿಯಾದ ನಂತರ ಅದಕ್ಕೆ ಜೀರಿಗೆ, ಕರಿಬೇವು, ಸಾಸಿವೆ, ಹಸಿಮೆಣಸಿನಕಾಯಿ, ಇಂಗು ಬೆರೆಸಿ ಒಗ್ಗರಣೆ ತಯಾರಿಸಿಕೊಳ್ಳಿರಿ. ಇದಕ್ಕೆ ಬೇಯಿಸಿದ ಅವರೆಕಾಳು ಮತ್ತು ಅದರಲ್ಲಿರುವ ಬಿಸಿ ನೀರನ್ನು ಸುರಿಯಿರಿ. ಅವರೆಕಾಳು ಉಪ್ಪಿಟ್ಟಿಗೆ ನೀರಿನ ಪ್ರಮಾಣ ಒಂದಕ್ಕೆ ಮೂರರಷ್ಟು ಇರಬೇಕು. ಅಂದರೆ, ಒಂದು ಲೋಟ ಅಕ್ಕಿ ರವೆಗೆ ಮೂರು ಲೋಟ ನೀರು.
ಕುದಿಯುತ್ತಿರುವ ಅವರೆಕಾಳು ಒಗ್ಗರಣೆ ನೀರಿಗೆ ರುಚಿಗೆ ತಕ್ಕಷ್ಟು ಉಪ್ಪು ಹಾಕಿದ ನಂತರ ಮಾಡಿಟ್ಟುಕೊಂಡ ರವೆ ಹಾಕಿ ಚೆನ್ನಾಗಿ ಕದಡಿರಿ. ಉಪ್ಪಿಟ್ಟು ಗಂಟಾಗದಂತೆ ಎಚ್ಚರವಹಿಸಿ. ರವೆ ಕೂಡಿಕೊಂಡು ಉಪ್ಪಿಟ್ಟಿನ ಹದಕ್ಕೆ ಬರುವವರೆಗೆ ನಿರಂತರವಾಗಿ ಸೌಟಿನಿಂದ ಕಲಕುತ್ತಿರಬೇಕು. ಆನಂತರ ಕುಕ್ಕರಿನ ಮುಚ್ಚಳ ಮುಚ್ಚಿ ಮತ್ತೆ ಸ್ವಲ್ಪ ಹೊತ್ತು ಬೇಯಲು ಬಿಡಿ. ಮುಖ್ಯವಾದ ವಿಚಾರವೆಂದರೆ ಕುಕ್ಕರಿನ ವೈಟ್ ಇಡಬಾರದು.
ಐದಾರು ನಿಮಿಷ ಹಬೆಯಲ್ಲಿ ಬೆಂದ ನಂತರ ಅಕ್ಕಿರವೆ ಉಪ್ಪಿಟ್ಟು ಮೃದುವಾಗುತ್ತದೆ. ಈಗ ಕುಕ್ಕರನ್ನು ಕೆಳಗಿಳಿಸಿ ಮುಚ್ಚಳ ತೆಗೆದು ಅದಕ್ಕೆ ಕೊತ್ತಂಬರಿ ಸೊಪ್ಪು ಮತ್ತು ತೆಂಗಿನಕಾಯಿ ತುರಿಯನ್ನು ಹಾಕಿ ಕಲಸಿರಿ. ಇದು ತುಂಬಾ ರುಚಿಕಟ್ಟಾಗಿರುತ್ತದೆ. ಇತರ ಉಪ್ಪಿಟ್ಟುಗಳಂತೆ ಇದೂ ಇರುತ್ತದೆ ಎಂದು ನಿಮಗೆ ಅನಿಸಿದರೂ ಸಹ ಇದರ ವಿಶೇಷ ಏನಪ್ಪಾ ಅಂದರೆ ಅಕ್ಕಿ ರವೆ ಮತ್ತು ಅವರೆಕಾಳು ಚೆನ್ನಾಗಿ ಬೆಂದು ಪರಸ್ಪರ ಉಪ್ಪಿಟ್ಟಿನಲ್ಲಿ ಬೆರೆತುಕೊಂಡಿರಬೇಕು.



Click it and Unblock the Notifications