Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ದಾಲ್ ಬಾಟಿ -ರಾಜಸ್ಥಾನಿ ರೆಸಿಪಿ

ಬಾಟಿ ಮಾಡಲು ಬೇಕಾಗುವ ಸಾಮಾಗ್ರಿಗಳು:
* ಗೋಧಿ ಹಿಟ್ಟು 2 ಕಪ್
* ಒಂದೂವರೆ ಕಪ್ ರವೆ
* 2 ಚಮಚ ಜೀರಿಗೆ
* 5 ಚಮಚ ತುಪ್ಪ
ದಾಲ್ ತಯಾರಿಸಲು ಬೇಕಾಗುವ ಸಾಮಾಗ್ರಿಗಳು
ಬೇಕಾಗುವ ಸಾಮಾಗ್ರಿಗಳು:
* 1 ಕಪ್ ಬೇಳೆ
* 1 ಚಮಚ ಸಾಸಿವೆ
* 1/2 ಚಮಚ ಜೀರಿಗೆ
* 1/2 ಚಮಚ ಅರಿಶಿಣ
* 2 ಚಮಚ ಕೊತ್ತಂಬರಿ ಪುಡಿ
* ಸ್ವಲ್ಪ ಕರಿ ಬೇವಿನ ಎಲೆ
* ಬೆಳ್ಳುಳ್ಳಿ 6-7 ಎಸಳು
* 1 ತುಂಡು ಡಾಲ್ಚಿನಿ (ಚಕ್ಕೆ)
* 1 ಚಿಟಿಕೆಯಷ್ಟು ಇಂಗು
* ರುಚಿಗೆ ತಕ್ಕ ಉಪ್ಪು
* 2 ಹಸಿ ಮೆಣಸಿನ ಕಾಯಿ
* ಸ್ವಲ್ಪ ಕೊತ್ತಂಬರಿ ಸೊಪ್ಪು
* 1/4 ಕಪ್ ಹುಣಸೆ ಹಣ್ಣಿನ ರಸ
* 1 ಚಮಚ ತುಪ್ಪ
ಬಾಟಿ ತಯಾರಿಸುವ ವಿಧಾನ
1. ಗೋಧಿ ಹಿಟ್ಟು, ರವೆ ಮತ್ತು ತುಪ್ಪ, ಜೀರಿಗೆ, ಸ್ವಲ್ಪ ನೀರು ಸೇರಿಸಿ ಹಿಟ್ಟನ್ನು ಕಲೆಸಬೇಕು.
2. ಆ ಮಿಶ್ರಣದಿಂದ ಚಿಕ್ಕ ಉಂಡೆ ಮಾಡಿ ಅದನ್ನು ಕೈಯಿಂದ ತಟ್ಟಿ, ನಂತ ತವಾವನ್ನು ಬಿಸಿ ಮಾಡಿ ಅದರಲ್ಲಿ ಸ್ವಲ್ಪ ಎಣ್ಣೆ ಸವರಿ ಎರಡೂ ಬದಿ ಕಂದು ಬಣ್ಣ ಬರುವವರೆಗೆ ಬಿಸಿ ಮಾಡಬೇಕು. ಈ ರೀತಿ ಮಾಡಿದರೆ ಬಾಟಿ ರೆಡಿ.
ದಾಲ್ ಸಾರು ಮಾಡುವ ವಿಧಾನ:
1. ಬೇಳೆಯನ್ನು 1/2 ಗಂಟೆ ನೀರಿನಲ್ಲಿ ನೆನೆ ಹಾಕಬೇಕು.
2. ನಂತರ ಅದಕ್ಕೆ ಉಪ್ಪು ಮತ್ತು ಅರಿಶಿಣ, ನೀರು ಹಾಕಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಬೇಕು.
3. ಚಕ್ಕೆ ಮತ್ತು ಬೆಳ್ಳುಳ್ಳಿಯನ್ನು ಜಜ್ಜಬೇಕು.
4. ಹಸಿಮೆಣಸಿನ ಕಾಯಿ ಮತ್ತು ಕೊತ್ತಂಬರಿ ಸೊಪ್ಪನ್ನು ಕತ್ತರಿಸಬೇಕು.
5. ಸಾರು ಪಾತ್ರೆಯನ್ನು ಬಿಸಿಮಾಡಿ ತುಪ್ಪ ಹಾಕಿ ಅದಕ್ಕೆ ಇಂಗು, ಜೀರಿಗೆ ಮತ್ತು ಸಾಸಿವೆಯನ್ನು ಹಾಕಬೇಕು.
6. ಸಾಸಿವೆ ಚಿಟಪಟ ಶಬ್ದ ಮಾಡುವಾಗ ಕರಿಬೇವಿನ ಎಲೆಯನ್ನು ಹಾಕಬೇಕು.
7. ಅದಕ್ಕೆ ಹಸಿಮೆಣಸಿನಕಾಯಿ ಮತ್ತು ಕೊತ್ತಂಬರಿ ಪುಡಿ ಹಾಕಿ ಮಿಶ್ರ ಮಾಡಿ.
8. ಈಗ ಜಜ್ಜಿದ ಬೆಳ್ಳುಳ್ಳಿ, ಚಕ್ಕೆಮತ್ತು ಬೇಯಿಸಿದ ಬೇಳೆಯನ್ನು ಸೇರಿಸಿ.
9. ಸ್ವಲ್ಪ ಹೊತ್ತು (5 ನಿಮಿಷ) ಕುದಿಸಿದ ನಂತರ ಹುಣಸೆ ಹಣ್ಣಿನ ರಸ ಹಾಗೂ ಸ್ವಲ್ಪ ಸಕ್ಕರೆ ಸೇರಿಸಿ 5 ನಿಮಿಷ ಕುದಿಸಿ. (ಉಪ್ಪು ಸಾಲದಿದ್ದರೆ ಇನ್ನೂ ಸ್ವಲ್ಪ ಹಾಕಿ).
10. ಈಗ ಕುದಿಯುತ್ತಿರುವ ಬೇಳೆ ಸಾರಿಗೆ ಕೊತ್ತಂಬರಿ ಸೊಪ್ಪು ಹಾಕಿದರೆ ದಾಲ್ ಕರಿ ರೆಡಿ.



Click it and Unblock the Notifications