Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಕಣ್ಣಲ್ಲಿ ಅಲ್ಲ, ಬಾಯಲ್ಲಿ ನೀರೂರಿಸುವ ಈರುಳ್ಳಿ ಉಪ್ಪಿನಕಾಯಿ

ಬೇಕಾಗುವ ಸಾಮಾಗ್ರಿಗಳು:
* 1/2 ಕೆಜಿ ಈರುಳ್ಳಿ
* ಬೆಳ್ಳುಳ್ಳಿ 100 ಗ್ರಾಂ
* ಹಸಿಮೆಣಸಿನ ಕಾಯಿ 4-5
* ಮೆಣಸಿನ ಪುಡಿ 2 ಚಮಚ
* ಒಳ್ಳೆಣ್ಣೆ 75ml
* ಹುಣಸೆಹಣ್ಣಿನ ಗಟ್ಟಿ ರಸ 2 ಚಮಚ
* ಬೆಲ್ಲ (ಒಂದು ಚಿಕ್ಕ ತುಂಡು)
* ಸ್ವಲ್ಪ ಕರಿ ಬೇವಿನ ಎಲೆ
* ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಈರುಳ್ಳಿ ಮತ್ತು ಹಸಿಮೆಣಸಿ ಕಾಯಿಯನ್ನು ಕತ್ತರಿಸಬೇಕು. ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಇಡಿ.
2. 50ml ಎಣ್ಣೆಯನ್ನು ಬಿಸಿ ಮಾಡಿ ಅದಕ್ಕೆ ಮೇಲಿನ ಮಿಶ್ರಣವನ್ನು ಹಾಕಿ ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
3. ಈಗ ಕಡಿಮೆ ಉರಿ ಮಾಡಿ ಅದಕ್ಕೆ ಮೆಣಸಿನ ಪುಡಿ, ಉಪ್ಪು ಹಾಕಿ ಸ್ವಲ್ಪ ಹೊತ್ತು ಸೌಟ್ ನಿಂದ ತಿರುಗಿಸುತ್ತಾ ಇರಬೇಕು.
4. ಈಗ ಗ್ಯಾಸ್ ಉರಿ ಸ್ವಲ್ಪ ಜಾಸ್ತಿ ಮಾಡಿ ಬಾಣಲೆ ಇರುವ ಮಿಶ್ರಣಕ್ಕೆ ಹುಣಸೆ ಹಣ್ಣಿನ ರಸ ಹಾಕಿ 3 ನಿಮಿಷ ಕುದಿಸಬೇಕು.
5. ಬೆಲ್ಲವನ್ನು ಪುಡಿ ಮಾಡಿ ಈ ಮಿಶ್ರಣಕ್ಕೆ ಸೇರಿಸಿ ನಂತರ ಚೆನ್ನಾಗಿ ಮಿಶ್ರ ಮಾಡಿ ಸ್ವಲ್ಪ ಹೊತ್ತು ಕಾಯಿಸಿ.
6. ಉಳಿದ ಎಣ್ಣೆಯನ್ನು ಬಿಸಿ ಮಾಡಿ ಈ ಮಿಶ್ರಣದ ಮೇಲೆ ಸುರಿಯಿರಿ.
7. ಉರಿಯಿಂದ ತೆಗೆದು ಒಂದು ಗಂಟೆ ತಣ್ಣಗಾಗಲು ಇಟ್ಟು ನಂತರ ಡಬ್ಬದಲ್ಲಿ ಮುಚ್ಚಿಡಿ.



Click it and Unblock the Notifications