Latest Updates
-
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ
ಹೊಸ ವರ್ಷಕ್ಕೆ ಇರಲೇಬೇಕು 'ಯುಗಾದಿ ಪಚಡಿ'

ಬೇಕಾಗುವ ಸಾಮಾಗ್ರಿಗಳು:
1. ಸಿಪ್ಪೆ ಸಹಿತ ಕತ್ತರಿಸಿದ ಮಾವಿನ ಕಾಯಿ 1 ಕಪ್
2. ಕಹಿ ಬೇವಿನ ಮರದ ಹೂ 1 ಕಪ್
3. ತುರಿದ ಬೆಲ್ಲ 1 ಕಪ್
4. ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ 1 ದೊಡ್ಡ ಚಮಚ
5. ಹುಣಸೆ ಹಣ್ಣಿನ ರಸ 3-4 ಚಮಚ
6. ಕೆಂಪು ಮೆಣಸಿನ ಪುಡಿ (ನಿಮಗೆ ಬೇಕಾಗಿದಷ್ಟು)
7. ರುಚಿಗೆ ತಕ್ಕ ಉಪ್ಪು
ತಯಾರಿಸುವ ವಿಧಾನ:
1. ಕತ್ತರಿಸಿದ ಮಾವಿನಕಾಯಿಗೆ ಹುಣಸೆಹಣ್ಣಿನ ರಸ ಸೇರಿಸಿ ಬೇಯಿಸಬೇಕು.
2. ಮಾವಿನಕಾಯಿ ತುಂಡು ಮೃದುವಾಗುವವರೆಗೆ ಬೇಯಿಸಬೇಕು.
3. ಈಗ ಬೆಲ್ಲವನ್ನು ಸೇರಿಸಿ, ಬೆಲ್ಲ ಕರಗಿ ಆ ಮಿಶ್ರಣದ ಜೊತೆ ಮಿಶ್ರವಾಗುವವರೆಗೆ ಬೇಯಿಸಬೇಕು.
4. ಈಗ ಈ ಮಿಶ್ರಣವನ್ನು ಉರಿಯಿಂದ ತೆಗೆದು ಆರಲು ಇಡಬೇಕು.
5. ಈಗ ಬಾಣಲೆಯನ್ನು ಬಿಸಿಮಾಡಿ ಸ್ವಲ್ಪ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದಾಗ ಸಾಸಿವೆಯನ್ನು ಹಾಕಬೇಕು. ಸಾಸಿವೆ ಚಟಾಪಟಾ ಮಾಡುವಾಗ ಕಹಿ ಬೇವಿನ ಹೂ ಮತ್ತು ಚಿಕ್ಕದಾಗಿ ಕತ್ತರಿಸಿದ ತೆಂಗಿನಕಾಯಿ ಹಾಕಿ ಸ್ವಲ್ಪ ಕಂದು ಬಣ್ಣ ಬರುವವರೆಗೆ ಹುರಿಯಬೇಕು.
6. ಈಗ ಮೆಣಸಿನ ಪುಡಿ ಮತ್ತು ರುಚಿಗೆ ತಕ್ಕ ಉಪ್ಪು ಹಾಕಿ ಮಿಶ್ರ ಮಾಡಬೇಕು.
7. ಈಗ ಈ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿ ಜೊತೆ ಮಿಶ್ರ ಮಾಡಿದರೆ ಯುಗಾದಿ ಪಚಡಿ ರೆಡಿ.



Click it and Unblock the Notifications
