Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ಈರಲಗೆರೆ ಬದನೆಕಾಯಿ ಗೊಜ್ಜು

ತಾವು ಮಾಡಿದ ಜೀರಿಗೆ ಸಾರಿಗೆ ಬಳಸಿದ ಪದಾರ್ಥಗಳ ಜತೆಗೆ ಇನ್ನು ಕೆಲವನ್ನು ಸೇರಿಸಿ ಮಾಡಬಹುದಾದ ಅಡುಗೆಗೆ ನಾವು ರಸವಾಂಗಿ ಎಂದು ಕರೆಯುತ್ತೇವೆ. ನೀವು ಇದನ್ನು ಪ್ರಯತ್ನಿಸಿ.
ಬೇಕಾದ ಸಾಮಗ್ರಿಗಳಲ್ಲಿ ತಾವು ತಿಳಿಸಿದ ಹಾಗೆ, ಅರ್ಧ ಚಮಚ ಉದ್ದಿನಬೇಳೆ | ಅರ್ಧ ಚಮಚ ಕೊತ್ತಂಬರಿ ಬೀಜ | ಒಂದು ಚಮಚ ಜೀರಿಗೆ | ಐದಾರು ಒಣಮೆಣಸಿನಕಾಯಿ | ಒಂದು ಚಮಚ ಸನ್ ಗೋಲ್ಡ್ ಅಡುಗೆ ಎಣ್ಣೆ | ಇವಿಷ್ಟಲ್ಲದೆ ಒಂದು ಚೂರು ಚಕ್ಕೆ ಇರಲಿ.
ಇವಿಷ್ಟನ್ನೂ ತವದಲ್ಲಿ ಘಂ ಎಂದು ಪರಿಮಳ ಬರುವವರೆಗೆ ಹುರಿದುಕೊಂಡು ಸ್ವಲ್ಪ ಹಸಿ ತೆಂಗಿನತುರಿ ಸ್ವಲ್ಪ ಒಣ ಕೊಬ್ಬರಿ ತುರಿ ಬೆರೆಸಿ ಮಿಕ್ಸಿಗೆ ಹಾಕಿ, ಚೂರು ನೀರು ಬೆರೆಸಿ ನುಣ್ಣಗೆ ರುಬ್ಬಿಟ್ಟುಕೊಳ್ಳಿರಿ.
ನಮ್ಮ ಕಡೆ ಸಿಗುವ ಈರಲಗೆರೆ ಬದನೆಕಾಯಿ (ಮೈಸೂರು ಬದನೆಕಾಯಿ) ಮತ್ತು ಚವಳಿಕಾಯಿ(ಗೋರಿ ಕಾಯಿ) ಯನ್ನು ಸಣ್ಣಗೆ ಹೆಚ್ಚಿ ಚೂರು ಒಗ್ಗರಣೆಯಲ್ಲಿ ಹೆಚ್ಚು ಹೊತ್ತು ಬೇಯಿಸಬೇಕು. ನೀರು ಬೆರೆಸದೆ ಎಣ್ಣೆ ಒಗ್ಗರಣೆಯಲ್ಲಿ ಮಾತ್ರ ಬೇಯುವಂತೆ ಮಾಡಿರಿ. ಚೆನ್ನಾಗಿ ಬೆಂದ ನಂತ ರುಬ್ಬಿಕೊಂಡ ಪದಾರ್ಥವನ್ನು ಹಾಕಿ ಚೆನ್ನಾಗಿ ಬೇಯಿಸಿರಿ. ಇದಕ್ಕೆ ಉಪ್ಪು, ಹುಣಿಸೆಹಣ್ಣು ಅಥವಾ ಟೊಮೆಟೋ ಮತ್ತು ಸಕ್ಕರೆ ಅಥವಾ ಬೆಲ್ಲ ಹಾಕಿ.
ಇದನ್ನು ಚಪಾತಿ ಜತೆಗೆ ತಿನ್ನುವುದಕ್ಕೆ ಅಥವಾ ಅನ್ನಕ್ಕೆ ಕಲಸುವುದಕ್ಕೆ ಬಳಸಬಹುದು. ನಾನು ಹೇಳಿದ ಎರಡು ತರಕಾರಿ ಗಳು ಬಿಟ್ಟು ಬೇರೇ ಯಾವ ತರಕಾರಿಗಳೂ ರಸವಾಂಗಿಗೆ ಸೂಟ್ ಆಗುವುದಿಲ್ಲ. ಹ್ಯಾಪಿ ಕುಕ್ಕಿಂಗ್ ಅಂಡ್ ಪ್ಯಾಪಿ ಡೈನಿಂಗ್!



Click it and Unblock the Notifications