Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಪ್ರೋಟೀನು ಜಾಸ್ತಿಯಿರುವ ಕಡಲೆಬೀಜದ ಖಾರಾ ಚಟ್ನಿ

* ಶಾಂತಲಾ, ವಿವಿ ಪುರಂ
ಪದಾರ್ಥಪಟ್ಟಿ : ಒಳ್ಳೆ ಜಾತಿ ಕಡಲೆ ಬೀಜ 1 ಕಪ್. ಕೆಂಪು ಮೆಣಸಿನಕಾಯಿ 8-10, ಬೆಳ್ಳುಳ್ಳಿ ಎರಡು ಎಸಳು. ನಿಂಬೆ ರಸ ಅಥವಾ ಹುಣಿಸೆಹಣ್ಣಿನ ರಸ ನಾಲಕ್ಕು ಚಮಚ. ರುಚಿಗೆ ಹೊಂದುವಷ್ಟು ಉಪ್ಪು.
ವಿಧಾನ : ಕಡಲೆಕಾಯಿ ಬೀಜವನ್ನು ಸಣ್ಣ ಉರಿಯಲ್ಲಿ ಹುರಿದುಕೊಳ್ಳಿ. ಬೀಜ ಸ್ಪಲ್ಪ ಮಟ್ಟಿಗೆ ಕೆಂಪಾಗುವ ರೀತಿಯಲ್ಲಿ ಹುರಿದಿರಬೇಕು. ಹುರಿದ ನಂತರ ಬೀಜವನ್ನು ಹಗುರವಾಗಿ ಹಿಚುಕಿದರೆ ಸಿಪ್ಪೆ ಬಿಟ್ಟುಕೊಳ್ಳುತ್ತದೆ. ಮನೆಯಲ್ಲಿ ಮರ ಇದ್ದರೆ ಕೇರಿ ಸಿಪ್ಪೆಯನ್ನು ತೆಗೆಯಿರಿ. ಮರ ಇಲ್ಲದಿದ್ದರೆ ತಟ್ಟೆ ಅಥವಾ ಸ್ಟೀಲ್ ಮರದಲ್ಲಿ ಬೀಜವನ್ನು ಕೇರಿ ಉಫ್ ಎಂದು ಊದಿ ಎಳ್ಳು ಬೆಲ್ಲಕ್ಕೆ ಮಾಡಿಕೊಂಡಂತೆ ಬೀಜ ಸಿದ್ಧಪಡಿಸಿಟ್ಟುಕೊಳ್ಳಿರಿ.
ಕೆಂಪುಮೆಣಸಿನಕಾಯಿಯನ್ನು ಇದೇ ರೀತಿ ಚೂರೇಚೂರು ಎಣ್ಣೆಯಲ್ಲಿ ಗರಿಗರಿಯಾಗುವತನಕ ಹುರಿಯಬೇಕು. ಆನಂತರ ಹುರಿದ ಬೀಜ, ಮೆಣಸಿನಕಾಯಿ, ಬೆಳ್ಳುಳ್ಳಿಯನ್ನು ಮಿಕ್ಸಿಗೆ ಹಾಕಿ ರುಬ್ಬಿರಿ. ತೀರ ನುಣ್ಣಗಾಗಬಾರದು, ತೀರಾ ತರಿತರಿ ಇರಬಾರದು. ರುಬ್ಬುವಾಗಲೇ ಉಪ್ಪು ಹಾಕಿದರೆ ಚೆನ್ನಾಗಿ ಕೂಡಿಕೊಳ್ಳುತ್ತದೆ.
ಇದಕ್ಕೆ ನಿಂಬೆ ರಸ ಅಥವಾ ಹುಣಿಸೆರಸ ಬೆರಸಿ, ಸಾಸಿವೆ ಮತ್ತು ಕರಿಬೇವು ಒಗ್ಗರಣೆ ಸಿಂಪಡಿಸಿರಿ. ಚಪಾತಿ ಜತೆಗೆ ಚೆನ್ನಾಗಿರುತ್ತದೆ. ಅರ್ಜೆಂಟ್ ಅರ್ಜೆಂಟಾಗಿ ಕೆಲಸಕ್ಕೆ ಧಾವಿಸುವವರು ಚಪಾತಿ, ಕಡಲೆಬೀಜದ ಚಟ್ನಿಯ ರೋಲ್ ಮಾಡಿಕೊಂಡು ಹೋದರೆ ಕಾರಿನಲ್ಲಿ ಅಥವಾ ಆಟೋದಲ್ಲಿ ತಿಂದುಕೊಂಡು ಕೆಲಸಕ್ಕೆ ಹೋಗಬಹುದು.



Click it and Unblock the Notifications









