Latest Updates
-
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ! -
ಬಿಸಿಲಿನ ಬೇಗೆಗೆ ದಂಪತಿಗಳ ನಡುವೆ ಜಗಳವೇ? ಈ ಸಣ್ಣ ಬದಲಾವಣೆಗಳು ನಿಮ್ಮ ಸಂಬಂಧವನ್ನು ಬಿರುಕಿನಿಂದ ಕಾಪಾಡುತ್ತವೆ! -
ಉತ್ತರ ಭಾರತದಲ್ಲಿ ಸುಡುವ ಬಿಸಿಲು: ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಬಚಾವ್ ಮಾಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರಗಳೇ ನಿಮಗೆ ರಾಮಬಾಣ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಪಾಲಿಸಿದ್ರೆ ಬೇಸಿಗೆಯಲ್ಲೂ ನೀವು ಕೂಲ್ ಆಗಿರಬಹುದು! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಹೃದಯದ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲಿನ ತಾಪಕ್ಕೆ ದಂಪತಿಗಳ ನಡುವೆ ಜಗಳವೇ? ಸಂಬಂಧ ಗಟ್ಟಿಯಾಗಿರಲು ಇಲ್ಲಿವೆ ನೋಡಿ ಸರಳ ಉಪಾಯಗಳು -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ವಿದ್ಯುತ್ ಬಿಲ್ ಇಲ್ಲದೆ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲ ಬೇಗೆಗೆ ರೆಡ್ ಅಲರ್ಟ್: ಹೀಟ್ ಸ್ಟ್ರೋಕ್ನಿಂದ ಪಾರಾಗಲು ಈ ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ!
ಪ್ರೋಟೀನು ಜಾಸ್ತಿಯಿರುವ ಕಡಲೆಬೀಜದ ಖಾರಾ ಚಟ್ನಿ

* ಶಾಂತಲಾ, ವಿವಿ ಪುರಂ
ಪದಾರ್ಥಪಟ್ಟಿ : ಒಳ್ಳೆ ಜಾತಿ ಕಡಲೆ ಬೀಜ 1 ಕಪ್. ಕೆಂಪು ಮೆಣಸಿನಕಾಯಿ 8-10, ಬೆಳ್ಳುಳ್ಳಿ ಎರಡು ಎಸಳು. ನಿಂಬೆ ರಸ ಅಥವಾ ಹುಣಿಸೆಹಣ್ಣಿನ ರಸ ನಾಲಕ್ಕು ಚಮಚ. ರುಚಿಗೆ ಹೊಂದುವಷ್ಟು ಉಪ್ಪು.
ವಿಧಾನ : ಕಡಲೆಕಾಯಿ ಬೀಜವನ್ನು ಸಣ್ಣ ಉರಿಯಲ್ಲಿ ಹುರಿದುಕೊಳ್ಳಿ. ಬೀಜ ಸ್ಪಲ್ಪ ಮಟ್ಟಿಗೆ ಕೆಂಪಾಗುವ ರೀತಿಯಲ್ಲಿ ಹುರಿದಿರಬೇಕು. ಹುರಿದ ನಂತರ ಬೀಜವನ್ನು ಹಗುರವಾಗಿ ಹಿಚುಕಿದರೆ ಸಿಪ್ಪೆ ಬಿಟ್ಟುಕೊಳ್ಳುತ್ತದೆ. ಮನೆಯಲ್ಲಿ ಮರ ಇದ್ದರೆ ಕೇರಿ ಸಿಪ್ಪೆಯನ್ನು ತೆಗೆಯಿರಿ. ಮರ ಇಲ್ಲದಿದ್ದರೆ ತಟ್ಟೆ ಅಥವಾ ಸ್ಟೀಲ್ ಮರದಲ್ಲಿ ಬೀಜವನ್ನು ಕೇರಿ ಉಫ್ ಎಂದು ಊದಿ ಎಳ್ಳು ಬೆಲ್ಲಕ್ಕೆ ಮಾಡಿಕೊಂಡಂತೆ ಬೀಜ ಸಿದ್ಧಪಡಿಸಿಟ್ಟುಕೊಳ್ಳಿರಿ.
ಕೆಂಪುಮೆಣಸಿನಕಾಯಿಯನ್ನು ಇದೇ ರೀತಿ ಚೂರೇಚೂರು ಎಣ್ಣೆಯಲ್ಲಿ ಗರಿಗರಿಯಾಗುವತನಕ ಹುರಿಯಬೇಕು. ಆನಂತರ ಹುರಿದ ಬೀಜ, ಮೆಣಸಿನಕಾಯಿ, ಬೆಳ್ಳುಳ್ಳಿಯನ್ನು ಮಿಕ್ಸಿಗೆ ಹಾಕಿ ರುಬ್ಬಿರಿ. ತೀರ ನುಣ್ಣಗಾಗಬಾರದು, ತೀರಾ ತರಿತರಿ ಇರಬಾರದು. ರುಬ್ಬುವಾಗಲೇ ಉಪ್ಪು ಹಾಕಿದರೆ ಚೆನ್ನಾಗಿ ಕೂಡಿಕೊಳ್ಳುತ್ತದೆ.
ಇದಕ್ಕೆ ನಿಂಬೆ ರಸ ಅಥವಾ ಹುಣಿಸೆರಸ ಬೆರಸಿ, ಸಾಸಿವೆ ಮತ್ತು ಕರಿಬೇವು ಒಗ್ಗರಣೆ ಸಿಂಪಡಿಸಿರಿ. ಚಪಾತಿ ಜತೆಗೆ ಚೆನ್ನಾಗಿರುತ್ತದೆ. ಅರ್ಜೆಂಟ್ ಅರ್ಜೆಂಟಾಗಿ ಕೆಲಸಕ್ಕೆ ಧಾವಿಸುವವರು ಚಪಾತಿ, ಕಡಲೆಬೀಜದ ಚಟ್ನಿಯ ರೋಲ್ ಮಾಡಿಕೊಂಡು ಹೋದರೆ ಕಾರಿನಲ್ಲಿ ಅಥವಾ ಆಟೋದಲ್ಲಿ ತಿಂದುಕೊಂಡು ಕೆಲಸಕ್ಕೆ ಹೋಗಬಹುದು.



Click it and Unblock the Notifications