Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ಶಾಲೆ ಸುತ್ತಮುತ್ತ ಜಂಕ್ ಆಹಾರ ನಿಷೇಧಿಸಬೇಕಾ?

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರು ತಿನ್ನುವ ಆಹಾರದ ಮೇಲೆ ಪಾಲಕರು ಮತ್ತು ಶಿಕ್ಷಕರು ಒಂದು ನಿಗಾ ಇಡುವುದು ಉತ್ತಮ. ಏಕೆಂದರೆ ಇಂತಹ ಪದಾರ್ಥಗಳೇ ಮುಂದೆ ಆರೋಗ್ಯದ ಮೇಲೆ ಮಾತ್ರವಲ್ಲ ಅವರ ಭವಿಷ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಬಲ್ಲದು.
ಕರ್ನಾಟಕದ ಕೆಲ ಖಾಸಗಿ ಶಾಲೆಗಳಲ್ಲಿ ಬ್ರೆಡ್ ಹೊರತಾಗಿ ಬೇಕರಿಯ ಯಾವ ಪದಾರ್ಥಗಳನ್ನೂ ತಿನ್ನಲು ಬಿಡುವುದಿಲ್ಲ. ಪ್ರತಿನಿತ್ಯ ಮನೆಯಲ್ಲಿಯೇ ತಯಾರಿಸಿದ ಆಹಾರ ತಂದರೆ ಸರಿ ಇಲ್ಲದಿದ್ದರೆ ಮಗು ಖಾಲಿ ಹೊಟ್ಟೆಯಲ್ಲಿ ವಾಪಸ್ ಬರಬೇಕಾದೀತು. ಇಂತಹ ಪದ್ಧತಿ ಕರ್ನಾಟಕದ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಜಾರಿಗೆ ಬರಬೇಕು.
ಈ ವಿಷಯ ಯಾಕೆ ಹೇಳಬೇಕಾಯಿತೆಂದರೆ, ದೆಹಲಿಯ ಕೆಲ ಪ್ರಜ್ಞಾವಂತ ಮಕ್ಕಳು ಪಿಜ್ಜಾ, ಬರ್ಗರ್ ಸೇರಿದಂತೆ ಎಲ್ಲಾ ಜಂಕ್ ಆಹಾರವನ್ನು ಶಾಲೆಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಷೇಧಿಸಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಮಕ್ಕಳ ಕಾಳಜಿಯನ್ನು ಮನಗಂಡ ನ್ಯಾಯಮೂರ್ತಿಗಳು ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಆರೋಗ್ಯ ಕೆಡಿಸುವ ಕುರುಕಲು ಆಹಾರ ಮಾತ್ರವಲ್ಲ ತಂಪು ಪಾನೀಯಗಳನ್ನು ಕೂಡ ಬ್ಯಾನ್ ಮಾಡಬೇಕೆಂದು ವಿದ್ಯಾರ್ಥಿಗಳ ವೇದಿಕೆ ಕೋರ್ಟನ್ನು ಕೋರಿದೆ. ಇಂದಿನ ದಿನಗಳಲ್ಲಿ ಎಲ್ಲೆಲ್ಲಿ ಶಾಲಾ ಕಾಲೇಜುಗಳಿವೆಯೋ ಅಲ್ಲಿ ಸುತ್ತಮುತ್ತಲೆಲ್ಲ ಕಾಂಡಿಮೆಂಟ್ಸ್ ಮಾರುವ ಅಂಗಡಿ ಇದ್ದೇ ಇರುತ್ತದೆ. ವ್ಯಾಪಾರ ನೂರಕ್ಕೆ ನೂರರಷ್ಟು ಖಾತ್ರಿ.
ಪಾಠಶಾಲೆಯಲ್ಲಿ ಮಾತ್ರ ಆರೋಗ್ಯ ಕಾಪಾಡುವ ಕುರಿತು ಗಂಟೆಗಟ್ಟಲೆ ಪಾಠ ಮಾಡುತ್ತಾರೆ, ಆದರೆ ಶಾಲೆಯ ಬಾಗಿಲಲ್ಲೇ ಜಂಕ್ ಆಹಾರಗಳು ಲಭ್ಯವಿದ್ದರೂ ಶಾಲೆ ಯಾವ ಕ್ರಮಗಳನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾಗೆ ಕೂಡ ನೋಟೀಸ್ ಜಾರಿಯಾಗಿದ್ದು, ಅರ್ಜಿಗೆ ಉತ್ತರ ನೀಡುವಂತೆ ಕೋರ್ಟ್ ಆಗ್ರಹಿಸಿದೆ.



Click it and Unblock the Notifications