Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಶಾಲೆ ಸುತ್ತಮುತ್ತ ಜಂಕ್ ಆಹಾರ ನಿಷೇಧಿಸಬೇಕಾ?

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರು ತಿನ್ನುವ ಆಹಾರದ ಮೇಲೆ ಪಾಲಕರು ಮತ್ತು ಶಿಕ್ಷಕರು ಒಂದು ನಿಗಾ ಇಡುವುದು ಉತ್ತಮ. ಏಕೆಂದರೆ ಇಂತಹ ಪದಾರ್ಥಗಳೇ ಮುಂದೆ ಆರೋಗ್ಯದ ಮೇಲೆ ಮಾತ್ರವಲ್ಲ ಅವರ ಭವಿಷ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಬಲ್ಲದು.
ಕರ್ನಾಟಕದ ಕೆಲ ಖಾಸಗಿ ಶಾಲೆಗಳಲ್ಲಿ ಬ್ರೆಡ್ ಹೊರತಾಗಿ ಬೇಕರಿಯ ಯಾವ ಪದಾರ್ಥಗಳನ್ನೂ ತಿನ್ನಲು ಬಿಡುವುದಿಲ್ಲ. ಪ್ರತಿನಿತ್ಯ ಮನೆಯಲ್ಲಿಯೇ ತಯಾರಿಸಿದ ಆಹಾರ ತಂದರೆ ಸರಿ ಇಲ್ಲದಿದ್ದರೆ ಮಗು ಖಾಲಿ ಹೊಟ್ಟೆಯಲ್ಲಿ ವಾಪಸ್ ಬರಬೇಕಾದೀತು. ಇಂತಹ ಪದ್ಧತಿ ಕರ್ನಾಟಕದ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಜಾರಿಗೆ ಬರಬೇಕು.
ಈ ವಿಷಯ ಯಾಕೆ ಹೇಳಬೇಕಾಯಿತೆಂದರೆ, ದೆಹಲಿಯ ಕೆಲ ಪ್ರಜ್ಞಾವಂತ ಮಕ್ಕಳು ಪಿಜ್ಜಾ, ಬರ್ಗರ್ ಸೇರಿದಂತೆ ಎಲ್ಲಾ ಜಂಕ್ ಆಹಾರವನ್ನು ಶಾಲೆಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಷೇಧಿಸಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಮಕ್ಕಳ ಕಾಳಜಿಯನ್ನು ಮನಗಂಡ ನ್ಯಾಯಮೂರ್ತಿಗಳು ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಆರೋಗ್ಯ ಕೆಡಿಸುವ ಕುರುಕಲು ಆಹಾರ ಮಾತ್ರವಲ್ಲ ತಂಪು ಪಾನೀಯಗಳನ್ನು ಕೂಡ ಬ್ಯಾನ್ ಮಾಡಬೇಕೆಂದು ವಿದ್ಯಾರ್ಥಿಗಳ ವೇದಿಕೆ ಕೋರ್ಟನ್ನು ಕೋರಿದೆ. ಇಂದಿನ ದಿನಗಳಲ್ಲಿ ಎಲ್ಲೆಲ್ಲಿ ಶಾಲಾ ಕಾಲೇಜುಗಳಿವೆಯೋ ಅಲ್ಲಿ ಸುತ್ತಮುತ್ತಲೆಲ್ಲ ಕಾಂಡಿಮೆಂಟ್ಸ್ ಮಾರುವ ಅಂಗಡಿ ಇದ್ದೇ ಇರುತ್ತದೆ. ವ್ಯಾಪಾರ ನೂರಕ್ಕೆ ನೂರರಷ್ಟು ಖಾತ್ರಿ.
ಪಾಠಶಾಲೆಯಲ್ಲಿ ಮಾತ್ರ ಆರೋಗ್ಯ ಕಾಪಾಡುವ ಕುರಿತು ಗಂಟೆಗಟ್ಟಲೆ ಪಾಠ ಮಾಡುತ್ತಾರೆ, ಆದರೆ ಶಾಲೆಯ ಬಾಗಿಲಲ್ಲೇ ಜಂಕ್ ಆಹಾರಗಳು ಲಭ್ಯವಿದ್ದರೂ ಶಾಲೆ ಯಾವ ಕ್ರಮಗಳನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾಗೆ ಕೂಡ ನೋಟೀಸ್ ಜಾರಿಯಾಗಿದ್ದು, ಅರ್ಜಿಗೆ ಉತ್ತರ ನೀಡುವಂತೆ ಕೋರ್ಟ್ ಆಗ್ರಹಿಸಿದೆ.



Click it and Unblock the Notifications