Latest Updates
-
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು -
ಭಾರತ-ಇಂಗ್ಲೆಂಡ್ ಟಿ20 ಪಂದ್ಯದ ರೋಚಕತೆ ನಡುವೆ ಫಿಟ್ ಆಗಿರಲು ಈ 7 ನಿಮಿಷದ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಡೇಟಿಂಗ್: ಬಜೆಟ್ ಸ್ನೇಹಿ ಐಡಿಯಾಗಳು ಮತ್ತು ಸುರಕ್ಷಿತವಾಗಿರಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ಕೋಲ್ಕತ್ತಾದಲ್ಲಿ ಭಾರಿ ಮಳೆ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಮಿಸ್ ಮಾಡಬೇಡಿ! -
ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆ ಕಾಡ್ತಿದೆಯಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ -
ಧಮಾಲ್ 4 ರಿಲೀಸ್: ಅಜಯ್ ದೇವಗನ್ ಕಾಮಿಡಿ ಹಬ್ಬಕ್ಕೆ ಫ್ಯಾಮಿಲಿ ಜೊತೆ ರೆಡಿಯಾಗಿ! -
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್!
ಶಾಲೆ ಸುತ್ತಮುತ್ತ ಜಂಕ್ ಆಹಾರ ನಿಷೇಧಿಸಬೇಕಾ?

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರು ತಿನ್ನುವ ಆಹಾರದ ಮೇಲೆ ಪಾಲಕರು ಮತ್ತು ಶಿಕ್ಷಕರು ಒಂದು ನಿಗಾ ಇಡುವುದು ಉತ್ತಮ. ಏಕೆಂದರೆ ಇಂತಹ ಪದಾರ್ಥಗಳೇ ಮುಂದೆ ಆರೋಗ್ಯದ ಮೇಲೆ ಮಾತ್ರವಲ್ಲ ಅವರ ಭವಿಷ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಬಲ್ಲದು.
ಕರ್ನಾಟಕದ ಕೆಲ ಖಾಸಗಿ ಶಾಲೆಗಳಲ್ಲಿ ಬ್ರೆಡ್ ಹೊರತಾಗಿ ಬೇಕರಿಯ ಯಾವ ಪದಾರ್ಥಗಳನ್ನೂ ತಿನ್ನಲು ಬಿಡುವುದಿಲ್ಲ. ಪ್ರತಿನಿತ್ಯ ಮನೆಯಲ್ಲಿಯೇ ತಯಾರಿಸಿದ ಆಹಾರ ತಂದರೆ ಸರಿ ಇಲ್ಲದಿದ್ದರೆ ಮಗು ಖಾಲಿ ಹೊಟ್ಟೆಯಲ್ಲಿ ವಾಪಸ್ ಬರಬೇಕಾದೀತು. ಇಂತಹ ಪದ್ಧತಿ ಕರ್ನಾಟಕದ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಜಾರಿಗೆ ಬರಬೇಕು.
ಈ ವಿಷಯ ಯಾಕೆ ಹೇಳಬೇಕಾಯಿತೆಂದರೆ, ದೆಹಲಿಯ ಕೆಲ ಪ್ರಜ್ಞಾವಂತ ಮಕ್ಕಳು ಪಿಜ್ಜಾ, ಬರ್ಗರ್ ಸೇರಿದಂತೆ ಎಲ್ಲಾ ಜಂಕ್ ಆಹಾರವನ್ನು ಶಾಲೆಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಷೇಧಿಸಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಮಕ್ಕಳ ಕಾಳಜಿಯನ್ನು ಮನಗಂಡ ನ್ಯಾಯಮೂರ್ತಿಗಳು ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಆರೋಗ್ಯ ಕೆಡಿಸುವ ಕುರುಕಲು ಆಹಾರ ಮಾತ್ರವಲ್ಲ ತಂಪು ಪಾನೀಯಗಳನ್ನು ಕೂಡ ಬ್ಯಾನ್ ಮಾಡಬೇಕೆಂದು ವಿದ್ಯಾರ್ಥಿಗಳ ವೇದಿಕೆ ಕೋರ್ಟನ್ನು ಕೋರಿದೆ. ಇಂದಿನ ದಿನಗಳಲ್ಲಿ ಎಲ್ಲೆಲ್ಲಿ ಶಾಲಾ ಕಾಲೇಜುಗಳಿವೆಯೋ ಅಲ್ಲಿ ಸುತ್ತಮುತ್ತಲೆಲ್ಲ ಕಾಂಡಿಮೆಂಟ್ಸ್ ಮಾರುವ ಅಂಗಡಿ ಇದ್ದೇ ಇರುತ್ತದೆ. ವ್ಯಾಪಾರ ನೂರಕ್ಕೆ ನೂರರಷ್ಟು ಖಾತ್ರಿ.
ಪಾಠಶಾಲೆಯಲ್ಲಿ ಮಾತ್ರ ಆರೋಗ್ಯ ಕಾಪಾಡುವ ಕುರಿತು ಗಂಟೆಗಟ್ಟಲೆ ಪಾಠ ಮಾಡುತ್ತಾರೆ, ಆದರೆ ಶಾಲೆಯ ಬಾಗಿಲಲ್ಲೇ ಜಂಕ್ ಆಹಾರಗಳು ಲಭ್ಯವಿದ್ದರೂ ಶಾಲೆ ಯಾವ ಕ್ರಮಗಳನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾಗೆ ಕೂಡ ನೋಟೀಸ್ ಜಾರಿಯಾಗಿದ್ದು, ಅರ್ಜಿಗೆ ಉತ್ತರ ನೀಡುವಂತೆ ಕೋರ್ಟ್ ಆಗ್ರಹಿಸಿದೆ.



Click it and Unblock the Notifications