Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಶಾಲೆ ಸುತ್ತಮುತ್ತ ಜಂಕ್ ಆಹಾರ ನಿಷೇಧಿಸಬೇಕಾ?

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅವರು ತಿನ್ನುವ ಆಹಾರದ ಮೇಲೆ ಪಾಲಕರು ಮತ್ತು ಶಿಕ್ಷಕರು ಒಂದು ನಿಗಾ ಇಡುವುದು ಉತ್ತಮ. ಏಕೆಂದರೆ ಇಂತಹ ಪದಾರ್ಥಗಳೇ ಮುಂದೆ ಆರೋಗ್ಯದ ಮೇಲೆ ಮಾತ್ರವಲ್ಲ ಅವರ ಭವಿಷ್ಯದ ಮೇಲೆಯೂ ವ್ಯತಿರಿಕ್ತ ಪರಿಣಾಮ ಬೀರಬಲ್ಲದು.
ಕರ್ನಾಟಕದ ಕೆಲ ಖಾಸಗಿ ಶಾಲೆಗಳಲ್ಲಿ ಬ್ರೆಡ್ ಹೊರತಾಗಿ ಬೇಕರಿಯ ಯಾವ ಪದಾರ್ಥಗಳನ್ನೂ ತಿನ್ನಲು ಬಿಡುವುದಿಲ್ಲ. ಪ್ರತಿನಿತ್ಯ ಮನೆಯಲ್ಲಿಯೇ ತಯಾರಿಸಿದ ಆಹಾರ ತಂದರೆ ಸರಿ ಇಲ್ಲದಿದ್ದರೆ ಮಗು ಖಾಲಿ ಹೊಟ್ಟೆಯಲ್ಲಿ ವಾಪಸ್ ಬರಬೇಕಾದೀತು. ಇಂತಹ ಪದ್ಧತಿ ಕರ್ನಾಟಕದ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಜಾರಿಗೆ ಬರಬೇಕು.
ಈ ವಿಷಯ ಯಾಕೆ ಹೇಳಬೇಕಾಯಿತೆಂದರೆ, ದೆಹಲಿಯ ಕೆಲ ಪ್ರಜ್ಞಾವಂತ ಮಕ್ಕಳು ಪಿಜ್ಜಾ, ಬರ್ಗರ್ ಸೇರಿದಂತೆ ಎಲ್ಲಾ ಜಂಕ್ ಆಹಾರವನ್ನು ಶಾಲೆಗಳಲ್ಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ನಿಷೇಧಿಸಬೇಕೆಂದು ದೆಹಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಮಕ್ಕಳ ಕಾಳಜಿಯನ್ನು ಮನಗಂಡ ನ್ಯಾಯಮೂರ್ತಿಗಳು ಕೇಂದ್ರ ಸರಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಆರೋಗ್ಯ ಕೆಡಿಸುವ ಕುರುಕಲು ಆಹಾರ ಮಾತ್ರವಲ್ಲ ತಂಪು ಪಾನೀಯಗಳನ್ನು ಕೂಡ ಬ್ಯಾನ್ ಮಾಡಬೇಕೆಂದು ವಿದ್ಯಾರ್ಥಿಗಳ ವೇದಿಕೆ ಕೋರ್ಟನ್ನು ಕೋರಿದೆ. ಇಂದಿನ ದಿನಗಳಲ್ಲಿ ಎಲ್ಲೆಲ್ಲಿ ಶಾಲಾ ಕಾಲೇಜುಗಳಿವೆಯೋ ಅಲ್ಲಿ ಸುತ್ತಮುತ್ತಲೆಲ್ಲ ಕಾಂಡಿಮೆಂಟ್ಸ್ ಮಾರುವ ಅಂಗಡಿ ಇದ್ದೇ ಇರುತ್ತದೆ. ವ್ಯಾಪಾರ ನೂರಕ್ಕೆ ನೂರರಷ್ಟು ಖಾತ್ರಿ.
ಪಾಠಶಾಲೆಯಲ್ಲಿ ಮಾತ್ರ ಆರೋಗ್ಯ ಕಾಪಾಡುವ ಕುರಿತು ಗಂಟೆಗಟ್ಟಲೆ ಪಾಠ ಮಾಡುತ್ತಾರೆ, ಆದರೆ ಶಾಲೆಯ ಬಾಗಿಲಲ್ಲೇ ಜಂಕ್ ಆಹಾರಗಳು ಲಭ್ಯವಿದ್ದರೂ ಶಾಲೆ ಯಾವ ಕ್ರಮಗಳನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಫುಡ್ ಸೇಫ್ಟಿ ಅಂಡ್ ಸ್ಟಾಂಡರ್ಡ್ಸ್ ಅಥಾರಿಟಿ ಆಫ್ ಇಂಡಿಯಾಗೆ ಕೂಡ ನೋಟೀಸ್ ಜಾರಿಯಾಗಿದ್ದು, ಅರ್ಜಿಗೆ ಉತ್ತರ ನೀಡುವಂತೆ ಕೋರ್ಟ್ ಆಗ್ರಹಿಸಿದೆ.



Click it and Unblock the Notifications