Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
ಬಂಗಾರದಂಥ ಅಕ್ಕಿಯನ್ನು ಉಳಿಸುವುದು ಹೇಗೆ?

ಮದುವೆ ಮುಂತಾದ ಸಮಾರಂಭಗಳಲ್ಲಿ, ಮನೆಯಲ್ಲಿ ಊಟ ಮಾಡುವಾಗ ಎಷ್ಟೊಂದು ಅನ್ನ ಭೂಮಿಯ ಪಾಲಾಗಿ ಕೊನೆಗೆ ತಿಪ್ಪೆ ಸೇರುತ್ತದೆ ಎಂಬುದನ್ನು ನಾವು ಲೆಕ್ಕ ಇಡುತ್ತೇವೆಯೆ? ಖಂಡಿತ ಇಲ್ಲ. ದೇವಸ್ಥಾನಗಳಲ್ಲಿ ಎಂಜಲು ಎಲೆಯ ಮೇಲೆ ಅನಾಥವಾಗಿ ಬಿದ್ದ ಅನ್ನದ ಮೇಲೆ ಉರುಳಾಡುತ್ತೇವೆಯೇ ಹೊರತು ಆ ಅನ್ನವನ್ನು ಉಳಿಸಿದರೆ, ಇನ್ನೂ ನಾಲ್ಕಾರು ಜನ ಊಟ ಮಾಡಬಹುದಿತ್ತು ಎಂದು ಚಿಂತಿಸುವುದಿಲ್ಲ. ಹಂಡೆಗಟ್ಟಲೆ ಅನ್ನ ಸಾರು ಉಳಿದಾಗ ಹತ್ತಿರದಲ್ಲಿರುವ ಅನಾಥಾಶ್ರಮಕ್ಕೆ ಕೊಟ್ಟು ಬರುವ ಮನಸು ಮಾಡುವುದಿಲ್ಲ.
ಅಕ್ಕಿ ಬಗ್ಗೆ ಈಗ ಯಾಕಿಷ್ಟು ತಲೆಕೆಡಿಸಿಕೊಳ್ಳಬೇಕೆಂದರೆ. ಅಕ್ಕಿ ರೇಟು ದಿನದಿನಕ್ಕೆ ರಾಕೆಟ್ನಂತೆ ಮೇಲೇರುತ್ತಿದೆ. ಉತ್ತಮ ಗುಣಮಟ್ಟದ ಅಕ್ಕಿ ಬಡವರ ಕೈಗೆಟುಕದಂತಾಗಿದೆ. ಗೋದಾಮುಗಳಲ್ಲಿ ಅಕ್ಕಿ ಹೆಗ್ಗಣ ಮತ್ತು ಕಳ್ಳರ ಪಾಲಾಗುತ್ತಿದೆ. ಅಕ್ಕಿಯನ್ನು ಈಪಾಟಿ ಪೋಲು ಮಾಡುವ ಬದಲು ಉಳಿಸಿದರೆ ನಮಗೇ ಉಳಿತಾಯ. ಮುಂಬೈನಲ್ಲಿ ಯಾರೋ ಪ್ರಜ್ಞಾವಂತರೊಬ್ಬರು ಮದುವೆ ಮುಂತಾದ ಶುಭ ಸಮಾರಂಭದಲ್ಲಿ ಆರಕ್ಷತೆಗೆ ಅಕ್ಕಿ ಬಳಸಬಾರದು ಎಂದು ಅಭಿಯಾನವನ್ನು ಆರಂಭಿಸಿದ್ದರು ಮತ್ತು ಮದುವೆಯಲ್ಲೆಲ್ಲ ಕಾಲಬಳಿ ಬಿದ್ದು ಒದ್ದಾಡುತ್ತಿದ್ದ ಅಕ್ಕಿಯನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದರು.
ಅಕ್ಕಿಯನ್ನು ಉಳಿಸಲು ನಾವು ಏನು ಮಾಡಬಹುದು
* ಮನೆಯಲ್ಲಿ ಜನರು ಇದ್ದಷ್ಟೇ ಅನ್ನ ಬೇಯಿಸಿರಿ.
* ಅತಿಥಿಗಳಿಗೆ ಅನ್ನ ಹಾಕುವಾಗ ಅವರು ಕೇಳಿದಷ್ಟೇ ಬಡಿಸಿರಿ. ಬಲವಂತಮಾಡಿ ಬಡಿಸಬೇಡಿ.
* ಆರತಕ್ಷತೆಯಲ್ಲಿ ವಧುವರರನ್ನು ಆಶೀರ್ವದಿಸುವಾಗ ಮುಷ್ಟಿಗಟ್ಟಲೆ ಎಸೆಯಬೇಡಿ.
* ಮನೆಯಲ್ಲಿ ಕ್ವಿಂಟಾಲ್ಗಟ್ಟಲೆ ಅಕ್ಕಿ ಶೇಖರಿಸಿಟ್ಟಾಗ ಕೆಡದಂತೆ ಮುಂಜಾಗ್ರತೆ ವಹಿಸಿ.
* ಅಕಸ್ಮಾತ್ ಅನ್ನ ಜಾಸ್ತಿ ಉಳಿದರೆ ತಿಪ್ಪೆಗೆ ಹಾಕದೆ, ಅನಾಥಾಲಯಕ್ಕೆ ದಾನ ಮಾಡಿರಿ.
* ಅಕ್ಕಿ ಪೋಲಾಗುವ ಸಮಯ ಬಂದಾಗ ಅನ್ನವೇ ನಮ್ಮ ಪಾಲಿನ ದೇವರು ಎಂದು ನೆನೆಸಿಕೊಳ್ಳಿ.
ಹಾಗೆಯೆ, ಅಕ್ಕಿಗೆ ಸಂಬಂಧಿಸಿದಂತೆ ಬಂದಿರುವ ಎರಡು ಪ್ರತಿಕ್ರಿಯೆಗಳು
ಅಕ್ಕಿಯನ್ನು ಮೆಡಿಕಲ್ ಸ್ಟೋರ್ನಲ್ಲಿ ಸಿಗುವ PARAD TABLETS ಅನ್ನು ಮೂಟೆ ಒಳಗೆ ಮಧ್ಯೆ ಮಧ್ಯೆ ಸೇರಿಸಿ ಇಡುವುದರಿಂದ ಅಕ್ಕಿಯು ಹಾಳಾಗದಂತೆ ಹೆಚ್ಚು ತಿಂಗಳುಗಳ ಕಾಲ ರಕ್ಷಿಸಬಹುದು. ಬೇರೆ ಕಾಳು ಮತ್ತು ಇತರ ಧಾನ್ಯಗಳನ್ನು ಇದೇ ರೀತಿ ಸಂರಕ್ಷಿಸಬಹುದು.
ಹಿಂದೂ ಸಂಪ್ರದಾಯದಲ್ಲಿ ವಧು-ವರರನ್ನು ಲಕ್ಷ್ಮಿ ನಾರಾಯಣ ಸ್ವರೂಪವೆಂದು ನಂಬಲಾಗಿದೆ. ಹಾಗಾಗಿ ವಧು ವರರಿಗೆ ಅಕ್ಕಿಯಿಂದ ಧಾರೆ ಎರೆಯುವುದು ಲಕ್ಷ್ಮಿ ನಾರಾಯಣರಿಗೆ ಸುವರ್ಣ ಧಾರೆ ಎಂದೆನಿಸುತ್ತದೆ. ಈ ಅಕ್ಕಿಯು ಎಲ್ಲೂ ಹಾಳಾದ ಉದಾಹರಣೆ ಇಲ್ಲ. ಈ ಅಕ್ಕಿಯನ್ನು ಮತ್ತೆ ಉಪಯೋಗಿಸುತ್ತಾರೆ. ಎಲ್ಲರೂ ಇದನ್ನು ತುಳಿದು ಹಾಳುಮಾಡುವುದಿಲ್ಲ. ಎಲ್ಲಾ ಸಂಪ್ರದಾಯಗಳನ್ನು ಹೀಗೆ ಅವಹೇಳನ ಮಾಡಿ ಅಮೆರಿಕ ಸಂಸ್ಕೃತಿಯನ್ನು ತಂದು ಎಲ್ಲರ ಭಾವನೆ, ನಂಬಿಕೆ ಹಾಳು ಮಾಡುವುದು ಅಭ್ಯಾಸವಾಗಿದೆ. ದೊಡ್ಡ ಜನರು ತಿಂದು ಎಸೆಯುವ ಆಹಾರವನ್ನು ಗಮನಿಸಿ. ಅವರಿಗೆ ಅನ್ನಬ್ರಹ್ಮನ ಪಾವಿತ್ರತೆಯನ್ನು ಅರಿಕೆ ಮಾಡಿ ಪೋಲು ಮಾಡುವುದನ್ನು ನಿಲ್ಲಿಸಿ.



Click it and Unblock the Notifications