Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಬಂಗಾರದಂಥ ಅಕ್ಕಿಯನ್ನು ಉಳಿಸುವುದು ಹೇಗೆ?

ಮದುವೆ ಮುಂತಾದ ಸಮಾರಂಭಗಳಲ್ಲಿ, ಮನೆಯಲ್ಲಿ ಊಟ ಮಾಡುವಾಗ ಎಷ್ಟೊಂದು ಅನ್ನ ಭೂಮಿಯ ಪಾಲಾಗಿ ಕೊನೆಗೆ ತಿಪ್ಪೆ ಸೇರುತ್ತದೆ ಎಂಬುದನ್ನು ನಾವು ಲೆಕ್ಕ ಇಡುತ್ತೇವೆಯೆ? ಖಂಡಿತ ಇಲ್ಲ. ದೇವಸ್ಥಾನಗಳಲ್ಲಿ ಎಂಜಲು ಎಲೆಯ ಮೇಲೆ ಅನಾಥವಾಗಿ ಬಿದ್ದ ಅನ್ನದ ಮೇಲೆ ಉರುಳಾಡುತ್ತೇವೆಯೇ ಹೊರತು ಆ ಅನ್ನವನ್ನು ಉಳಿಸಿದರೆ, ಇನ್ನೂ ನಾಲ್ಕಾರು ಜನ ಊಟ ಮಾಡಬಹುದಿತ್ತು ಎಂದು ಚಿಂತಿಸುವುದಿಲ್ಲ. ಹಂಡೆಗಟ್ಟಲೆ ಅನ್ನ ಸಾರು ಉಳಿದಾಗ ಹತ್ತಿರದಲ್ಲಿರುವ ಅನಾಥಾಶ್ರಮಕ್ಕೆ ಕೊಟ್ಟು ಬರುವ ಮನಸು ಮಾಡುವುದಿಲ್ಲ.
ಅಕ್ಕಿ ಬಗ್ಗೆ ಈಗ ಯಾಕಿಷ್ಟು ತಲೆಕೆಡಿಸಿಕೊಳ್ಳಬೇಕೆಂದರೆ. ಅಕ್ಕಿ ರೇಟು ದಿನದಿನಕ್ಕೆ ರಾಕೆಟ್ನಂತೆ ಮೇಲೇರುತ್ತಿದೆ. ಉತ್ತಮ ಗುಣಮಟ್ಟದ ಅಕ್ಕಿ ಬಡವರ ಕೈಗೆಟುಕದಂತಾಗಿದೆ. ಗೋದಾಮುಗಳಲ್ಲಿ ಅಕ್ಕಿ ಹೆಗ್ಗಣ ಮತ್ತು ಕಳ್ಳರ ಪಾಲಾಗುತ್ತಿದೆ. ಅಕ್ಕಿಯನ್ನು ಈಪಾಟಿ ಪೋಲು ಮಾಡುವ ಬದಲು ಉಳಿಸಿದರೆ ನಮಗೇ ಉಳಿತಾಯ. ಮುಂಬೈನಲ್ಲಿ ಯಾರೋ ಪ್ರಜ್ಞಾವಂತರೊಬ್ಬರು ಮದುವೆ ಮುಂತಾದ ಶುಭ ಸಮಾರಂಭದಲ್ಲಿ ಆರಕ್ಷತೆಗೆ ಅಕ್ಕಿ ಬಳಸಬಾರದು ಎಂದು ಅಭಿಯಾನವನ್ನು ಆರಂಭಿಸಿದ್ದರು ಮತ್ತು ಮದುವೆಯಲ್ಲೆಲ್ಲ ಕಾಲಬಳಿ ಬಿದ್ದು ಒದ್ದಾಡುತ್ತಿದ್ದ ಅಕ್ಕಿಯನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದರು.
ಅಕ್ಕಿಯನ್ನು ಉಳಿಸಲು ನಾವು ಏನು ಮಾಡಬಹುದು
* ಮನೆಯಲ್ಲಿ ಜನರು ಇದ್ದಷ್ಟೇ ಅನ್ನ ಬೇಯಿಸಿರಿ.
* ಅತಿಥಿಗಳಿಗೆ ಅನ್ನ ಹಾಕುವಾಗ ಅವರು ಕೇಳಿದಷ್ಟೇ ಬಡಿಸಿರಿ. ಬಲವಂತಮಾಡಿ ಬಡಿಸಬೇಡಿ.
* ಆರತಕ್ಷತೆಯಲ್ಲಿ ವಧುವರರನ್ನು ಆಶೀರ್ವದಿಸುವಾಗ ಮುಷ್ಟಿಗಟ್ಟಲೆ ಎಸೆಯಬೇಡಿ.
* ಮನೆಯಲ್ಲಿ ಕ್ವಿಂಟಾಲ್ಗಟ್ಟಲೆ ಅಕ್ಕಿ ಶೇಖರಿಸಿಟ್ಟಾಗ ಕೆಡದಂತೆ ಮುಂಜಾಗ್ರತೆ ವಹಿಸಿ.
* ಅಕಸ್ಮಾತ್ ಅನ್ನ ಜಾಸ್ತಿ ಉಳಿದರೆ ತಿಪ್ಪೆಗೆ ಹಾಕದೆ, ಅನಾಥಾಲಯಕ್ಕೆ ದಾನ ಮಾಡಿರಿ.
* ಅಕ್ಕಿ ಪೋಲಾಗುವ ಸಮಯ ಬಂದಾಗ ಅನ್ನವೇ ನಮ್ಮ ಪಾಲಿನ ದೇವರು ಎಂದು ನೆನೆಸಿಕೊಳ್ಳಿ.
ಹಾಗೆಯೆ, ಅಕ್ಕಿಗೆ ಸಂಬಂಧಿಸಿದಂತೆ ಬಂದಿರುವ ಎರಡು ಪ್ರತಿಕ್ರಿಯೆಗಳು
ಅಕ್ಕಿಯನ್ನು ಮೆಡಿಕಲ್ ಸ್ಟೋರ್ನಲ್ಲಿ ಸಿಗುವ PARAD TABLETS ಅನ್ನು ಮೂಟೆ ಒಳಗೆ ಮಧ್ಯೆ ಮಧ್ಯೆ ಸೇರಿಸಿ ಇಡುವುದರಿಂದ ಅಕ್ಕಿಯು ಹಾಳಾಗದಂತೆ ಹೆಚ್ಚು ತಿಂಗಳುಗಳ ಕಾಲ ರಕ್ಷಿಸಬಹುದು. ಬೇರೆ ಕಾಳು ಮತ್ತು ಇತರ ಧಾನ್ಯಗಳನ್ನು ಇದೇ ರೀತಿ ಸಂರಕ್ಷಿಸಬಹುದು.
ಹಿಂದೂ ಸಂಪ್ರದಾಯದಲ್ಲಿ ವಧು-ವರರನ್ನು ಲಕ್ಷ್ಮಿ ನಾರಾಯಣ ಸ್ವರೂಪವೆಂದು ನಂಬಲಾಗಿದೆ. ಹಾಗಾಗಿ ವಧು ವರರಿಗೆ ಅಕ್ಕಿಯಿಂದ ಧಾರೆ ಎರೆಯುವುದು ಲಕ್ಷ್ಮಿ ನಾರಾಯಣರಿಗೆ ಸುವರ್ಣ ಧಾರೆ ಎಂದೆನಿಸುತ್ತದೆ. ಈ ಅಕ್ಕಿಯು ಎಲ್ಲೂ ಹಾಳಾದ ಉದಾಹರಣೆ ಇಲ್ಲ. ಈ ಅಕ್ಕಿಯನ್ನು ಮತ್ತೆ ಉಪಯೋಗಿಸುತ್ತಾರೆ. ಎಲ್ಲರೂ ಇದನ್ನು ತುಳಿದು ಹಾಳುಮಾಡುವುದಿಲ್ಲ. ಎಲ್ಲಾ ಸಂಪ್ರದಾಯಗಳನ್ನು ಹೀಗೆ ಅವಹೇಳನ ಮಾಡಿ ಅಮೆರಿಕ ಸಂಸ್ಕೃತಿಯನ್ನು ತಂದು ಎಲ್ಲರ ಭಾವನೆ, ನಂಬಿಕೆ ಹಾಳು ಮಾಡುವುದು ಅಭ್ಯಾಸವಾಗಿದೆ. ದೊಡ್ಡ ಜನರು ತಿಂದು ಎಸೆಯುವ ಆಹಾರವನ್ನು ಗಮನಿಸಿ. ಅವರಿಗೆ ಅನ್ನಬ್ರಹ್ಮನ ಪಾವಿತ್ರತೆಯನ್ನು ಅರಿಕೆ ಮಾಡಿ ಪೋಲು ಮಾಡುವುದನ್ನು ನಿಲ್ಲಿಸಿ.



Click it and Unblock the Notifications


