Just In
- 7 hrs ago ಮೀನ ರಾಶಿಯಲ್ಲಿ ರಾಹು-ಮಂಗಳ ಯುತಿಯಿಂದ ಅಂಗಾರಕ ಯೋಗ: 12 ರಾಶಿಗಳ ಮೇಲಿರಲಿದೆ ಈ ನಕರಾತ್ಮಕ ಪರಿಣಾ
- 8 hrs ago ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- 8 hrs ago ಪುರುಷರಲ್ಲಿ ಹೆಚ್ಚಾಗುತ್ತಿದೆ ಬಂಜೆತನ: ಪುರುಷರು ಈ ಆಹಾರ ಸೇವಿಸಿದರೆ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚುವುದು
- 9 hrs ago ಏಪ್ರಿಲ್ 24 ದಿನ ಭವಿಷ್ಯ: ಬುಧವಾರದ ಈ ದಿನ ನಿಮ್ಮ ರಾಶಿಫಲ ಹೇಗಿದೆ?
Don't Miss
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಂಗಾರದಂಥ ಅಕ್ಕಿಯನ್ನು ಉಳಿಸುವುದು ಹೇಗೆ?
ಮದುವೆ ಮುಂತಾದ ಸಮಾರಂಭಗಳಲ್ಲಿ, ಮನೆಯಲ್ಲಿ ಊಟ ಮಾಡುವಾಗ ಎಷ್ಟೊಂದು ಅನ್ನ ಭೂಮಿಯ ಪಾಲಾಗಿ ಕೊನೆಗೆ ತಿಪ್ಪೆ ಸೇರುತ್ತದೆ ಎಂಬುದನ್ನು ನಾವು ಲೆಕ್ಕ ಇಡುತ್ತೇವೆಯೆ? ಖಂಡಿತ ಇಲ್ಲ. ದೇವಸ್ಥಾನಗಳಲ್ಲಿ ಎಂಜಲು ಎಲೆಯ ಮೇಲೆ ಅನಾಥವಾಗಿ ಬಿದ್ದ ಅನ್ನದ ಮೇಲೆ ಉರುಳಾಡುತ್ತೇವೆಯೇ ಹೊರತು ಆ ಅನ್ನವನ್ನು ಉಳಿಸಿದರೆ, ಇನ್ನೂ ನಾಲ್ಕಾರು ಜನ ಊಟ ಮಾಡಬಹುದಿತ್ತು ಎಂದು ಚಿಂತಿಸುವುದಿಲ್ಲ. ಹಂಡೆಗಟ್ಟಲೆ ಅನ್ನ ಸಾರು ಉಳಿದಾಗ ಹತ್ತಿರದಲ್ಲಿರುವ ಅನಾಥಾಶ್ರಮಕ್ಕೆ ಕೊಟ್ಟು ಬರುವ ಮನಸು ಮಾಡುವುದಿಲ್ಲ.
ಅಕ್ಕಿ ಬಗ್ಗೆ ಈಗ ಯಾಕಿಷ್ಟು ತಲೆಕೆಡಿಸಿಕೊಳ್ಳಬೇಕೆಂದರೆ. ಅಕ್ಕಿ ರೇಟು ದಿನದಿನಕ್ಕೆ ರಾಕೆಟ್ನಂತೆ ಮೇಲೇರುತ್ತಿದೆ. ಉತ್ತಮ ಗುಣಮಟ್ಟದ ಅಕ್ಕಿ ಬಡವರ ಕೈಗೆಟುಕದಂತಾಗಿದೆ. ಗೋದಾಮುಗಳಲ್ಲಿ ಅಕ್ಕಿ ಹೆಗ್ಗಣ ಮತ್ತು ಕಳ್ಳರ ಪಾಲಾಗುತ್ತಿದೆ. ಅಕ್ಕಿಯನ್ನು ಈಪಾಟಿ ಪೋಲು ಮಾಡುವ ಬದಲು ಉಳಿಸಿದರೆ ನಮಗೇ ಉಳಿತಾಯ. ಮುಂಬೈನಲ್ಲಿ ಯಾರೋ ಪ್ರಜ್ಞಾವಂತರೊಬ್ಬರು ಮದುವೆ ಮುಂತಾದ ಶುಭ ಸಮಾರಂಭದಲ್ಲಿ ಆರಕ್ಷತೆಗೆ ಅಕ್ಕಿ ಬಳಸಬಾರದು ಎಂದು ಅಭಿಯಾನವನ್ನು ಆರಂಭಿಸಿದ್ದರು ಮತ್ತು ಮದುವೆಯಲ್ಲೆಲ್ಲ ಕಾಲಬಳಿ ಬಿದ್ದು ಒದ್ದಾಡುತ್ತಿದ್ದ ಅಕ್ಕಿಯನ್ನು ಭಾರೀ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದರು.
ಅಕ್ಕಿಯನ್ನು ಉಳಿಸಲು ನಾವು ಏನು ಮಾಡಬಹುದು
*
ಮನೆಯಲ್ಲಿ
ಜನರು
ಇದ್ದಷ್ಟೇ
ಅನ್ನ
ಬೇಯಿಸಿರಿ.
*
ಅತಿಥಿಗಳಿಗೆ
ಅನ್ನ
ಹಾಕುವಾಗ
ಅವರು
ಕೇಳಿದಷ್ಟೇ
ಬಡಿಸಿರಿ.
ಬಲವಂತಮಾಡಿ
ಬಡಿಸಬೇಡಿ.
*
ಆರತಕ್ಷತೆಯಲ್ಲಿ
ವಧುವರರನ್ನು
ಆಶೀರ್ವದಿಸುವಾಗ
ಮುಷ್ಟಿಗಟ್ಟಲೆ
ಎಸೆಯಬೇಡಿ.
*
ಮನೆಯಲ್ಲಿ
ಕ್ವಿಂಟಾಲ್ಗಟ್ಟಲೆ
ಅಕ್ಕಿ
ಶೇಖರಿಸಿಟ್ಟಾಗ
ಕೆಡದಂತೆ
ಮುಂಜಾಗ್ರತೆ
ವಹಿಸಿ.
*
ಅಕಸ್ಮಾತ್
ಅನ್ನ
ಜಾಸ್ತಿ
ಉಳಿದರೆ
ತಿಪ್ಪೆಗೆ
ಹಾಕದೆ,
ಅನಾಥಾಲಯಕ್ಕೆ
ದಾನ
ಮಾಡಿರಿ.
*
ಅಕ್ಕಿ
ಪೋಲಾಗುವ
ಸಮಯ
ಬಂದಾಗ
ಅನ್ನವೇ
ನಮ್ಮ
ಪಾಲಿನ
ದೇವರು
ಎಂದು
ನೆನೆಸಿಕೊಳ್ಳಿ.
ಹಾಗೆಯೆ, ಅಕ್ಕಿಗೆ ಸಂಬಂಧಿಸಿದಂತೆ ಬಂದಿರುವ ಎರಡು ಪ್ರತಿಕ್ರಿಯೆಗಳು
ಅಕ್ಕಿಯನ್ನು ಮೆಡಿಕಲ್ ಸ್ಟೋರ್ನಲ್ಲಿ ಸಿಗುವ PARAD TABLETS ಅನ್ನು ಮೂಟೆ ಒಳಗೆ ಮಧ್ಯೆ ಮಧ್ಯೆ ಸೇರಿಸಿ ಇಡುವುದರಿಂದ ಅಕ್ಕಿಯು ಹಾಳಾಗದಂತೆ ಹೆಚ್ಚು ತಿಂಗಳುಗಳ ಕಾಲ ರಕ್ಷಿಸಬಹುದು. ಬೇರೆ ಕಾಳು ಮತ್ತು ಇತರ ಧಾನ್ಯಗಳನ್ನು ಇದೇ ರೀತಿ ಸಂರಕ್ಷಿಸಬಹುದು.
ಹಿಂದೂ ಸಂಪ್ರದಾಯದಲ್ಲಿ ವಧು-ವರರನ್ನು ಲಕ್ಷ್ಮಿ ನಾರಾಯಣ ಸ್ವರೂಪವೆಂದು ನಂಬಲಾಗಿದೆ. ಹಾಗಾಗಿ ವಧು ವರರಿಗೆ ಅಕ್ಕಿಯಿಂದ ಧಾರೆ ಎರೆಯುವುದು ಲಕ್ಷ್ಮಿ ನಾರಾಯಣರಿಗೆ ಸುವರ್ಣ ಧಾರೆ ಎಂದೆನಿಸುತ್ತದೆ. ಈ ಅಕ್ಕಿಯು ಎಲ್ಲೂ ಹಾಳಾದ ಉದಾಹರಣೆ ಇಲ್ಲ. ಈ ಅಕ್ಕಿಯನ್ನು ಮತ್ತೆ ಉಪಯೋಗಿಸುತ್ತಾರೆ. ಎಲ್ಲರೂ ಇದನ್ನು ತುಳಿದು ಹಾಳುಮಾಡುವುದಿಲ್ಲ. ಎಲ್ಲಾ ಸಂಪ್ರದಾಯಗಳನ್ನು ಹೀಗೆ ಅವಹೇಳನ ಮಾಡಿ ಅಮೆರಿಕ ಸಂಸ್ಕೃತಿಯನ್ನು ತಂದು ಎಲ್ಲರ ಭಾವನೆ, ನಂಬಿಕೆ ಹಾಳು ಮಾಡುವುದು ಅಭ್ಯಾಸವಾಗಿದೆ. ದೊಡ್ಡ ಜನರು ತಿಂದು ಎಸೆಯುವ ಆಹಾರವನ್ನು ಗಮನಿಸಿ. ಅವರಿಗೆ ಅನ್ನಬ್ರಹ್ಮನ ಪಾವಿತ್ರತೆಯನ್ನು ಅರಿಕೆ ಮಾಡಿ ಪೋಲು ಮಾಡುವುದನ್ನು ನಿಲ್ಲಿಸಿ.