Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಿಲಿಕಾನ್ ಸಿಟಿಯಲ್ಲಿ ಜೀ ಕನ್ನಡದ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಸಿಲಿಕಾನ್ ಸಿಟಿ ಎಂದೇ ಖ್ಯಾತಿಗಳಿಸಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಏಪ್ರಿಲ್ 6 ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಸವೇಶ್ವರ ಕಾಲೇಜಿನ ಪಕ್ಕ, ಕೆಇಬಿ ಸಮುದಾಯ ಭವನದ ಎದುರು, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-560 010.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742191586, 9900149970 ಸಂಚಾರಿವಾಣಿಗಳನ್ನು ಅಥವಾ 080-26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ:
ಮಧುಸೂಧನ್.ವಿ
9900289844



Click it and Unblock the Notifications