Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ಸಿಲಿಕಾನ್ ಸಿಟಿಯಲ್ಲಿ ಜೀ ಕನ್ನಡದ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಸಿಲಿಕಾನ್ ಸಿಟಿ ಎಂದೇ ಖ್ಯಾತಿಗಳಿಸಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಏಪ್ರಿಲ್ 6 ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಸವೇಶ್ವರ ಕಾಲೇಜಿನ ಪಕ್ಕ, ಕೆಇಬಿ ಸಮುದಾಯ ಭವನದ ಎದುರು, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-560 010.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742191586, 9900149970 ಸಂಚಾರಿವಾಣಿಗಳನ್ನು ಅಥವಾ 080-26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ:
ಮಧುಸೂಧನ್.ವಿ
9900289844



Click it and Unblock the Notifications