Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಸಿಲಿಕಾನ್ ಸಿಟಿಯಲ್ಲಿ ಜೀ ಕನ್ನಡದ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಸಿಲಿಕಾನ್ ಸಿಟಿ ಎಂದೇ ಖ್ಯಾತಿಗಳಿಸಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಏಪ್ರಿಲ್ 6 ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಸವೇಶ್ವರ ಕಾಲೇಜಿನ ಪಕ್ಕ, ಕೆಇಬಿ ಸಮುದಾಯ ಭವನದ ಎದುರು, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-560 010.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742191586, 9900149970 ಸಂಚಾರಿವಾಣಿಗಳನ್ನು ಅಥವಾ 080-26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ:
ಮಧುಸೂಧನ್.ವಿ
9900289844



Click it and Unblock the Notifications
