Just In
- 5 hrs ago ವೃಷಭ ರಾಶಿಗೆ ಗುರು ಸಂಚಾರ: ಗುರು ನಿಮ್ಮ ಲಗ್ನ ಮನೆಯಲ್ಲಿ ಇರುವುದರಿಂದ ಇದರ ಪ್ರಭಾವ ಹೇಗಿರಲಿದೆ?
- 6 hrs ago ವೃಷಭ ರಾಶಿಗೆ ದೇವಗುರುವಿನ ಸಂಚಾರ: ಮೇಷ ರಾಶಿಗಳಿಗೆ ಇದರ ಪ್ರಭಾವ ಹೇಗಿರಲಿದೆ?
- 6 hrs ago ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- 8 hrs ago ದಿನ ಭವಿಷ್ಯ ಏಪ್ರಿಲ್ 19: ಶುಕ್ರವಾರದ ಈ ಶುಭ ದಿನ ನಿಮ್ಮ ರಾಶಿಗೆ ಹೇಗಿರಲಿದೆ?
Don't Miss
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಲಿಕಾನ್ ಸಿಟಿಯಲ್ಲಿ ಜೀ ಕನ್ನಡದ ರುಚಿ ಅಭಿರುಚಿ
ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಸಿಲಿಕಾನ್ ಸಿಟಿ ಎಂದೇ ಖ್ಯಾತಿಗಳಿಸಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಏಪ್ರಿಲ್ 6 ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಸವೇಶ್ವರ ಕಾಲೇಜಿನ ಪಕ್ಕ, ಕೆಇಬಿ ಸಮುದಾಯ ಭವನದ ಎದುರು, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-560 010.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742191586, 9900149970 ಸಂಚಾರಿವಾಣಿಗಳನ್ನು ಅಥವಾ 080-26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ
ಸಂಪರ್ಕ:
ಮಧುಸೂಧನ್.ವಿ
9900289844