Latest Updates
-
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಗೆ ಸುಸ್ತಾದ್ರಾ? ಈ ಪಾನೀಯಗಳಿದ್ದರೆ ಸಾಕು, ಬೇಸಿಗೆಯಲ್ಲೂ ಇರುತ್ತೀರಿ ಫ್ರೆಶ್! -
ಮೆಟ್ ಗಾಲಾ 2026: ಕರಣ್ ಜೋಹರ್ ಎಂಟ್ರಿಯಿಂದ ಫ್ಯಾಷನ್ ಲೋಕದಲ್ಲಿ ಸಂಚಲನ, ಭಾರತದಲ್ಲಿ ವೀಕ್ಷಿಸುವುದು ಹೇಗೆ?
ಸಿಲಿಕಾನ್ ಸಿಟಿಯಲ್ಲಿ ಜೀ ಕನ್ನಡದ ರುಚಿ ಅಭಿರುಚಿ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರ ನಡುವೆ ಸ್ಪರ್ಧೆ ಏರ್ಪಡಿಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಸಿಲಿಕಾನ್ ಸಿಟಿ ಎಂದೇ ಖ್ಯಾತಿಗಳಿಸಿರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಸ್ಪರ್ಧೆ ನಡೆಯಲಿದೆ.
ಬೆಂಗಳೂರು ನಗರ ಜಿಲ್ಲೆಯ ಆಯ್ಕೆ ಪ್ರಕ್ರಿಯೆಯನ್ನು ದಿನಾಂಕ ಏಪ್ರಿಲ್ 6 ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಡಿಷನ್ ನಡೆಯುವ ವಿಳಾಸ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್), ಬಸವೇಶ್ವರ ಕಾಲೇಜಿನ ಪಕ್ಕ, ಕೆಇಬಿ ಸಮುದಾಯ ಭವನದ ಎದುರು, ರಾಜಾಜಿನಗರ 2ನೇ ಬ್ಲಾಕ್, ಬೆಂಗಳೂರು-560 010.
ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶ ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9742191586, 9900149970 ಸಂಚಾರಿವಾಣಿಗಳನ್ನು ಅಥವಾ 080-26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಮಾಧ್ಯಮ ಸಂಪರ್ಕ:
ಮಧುಸೂಧನ್.ವಿ
9900289844



Click it and Unblock the Notifications