Latest Updates
-
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್
ದಾವಣಗೆರೆಯಲ್ಲಿ ರುಚಿ ಅಭಿರುಚಿ ಪಾಕ ಸ್ಪರ್ಧೆ

ಪ್ರತಿ ಜಿಲ್ಲೆಯ ವಿಶೇಷ ಅಡುಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ-ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ. 29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5 ಜನರನ್ನು ಆಯ್ಕೆ ಮಾಡಿ ಅವರಲ್ಲಿ ಪುನಃ ಸ್ಪರ್ಧೆ ನಡೆಸಿ ಒಬ್ಬರನ್ನು ಆ ಜಿಲ್ಲೆಯ ವಿಜೇತರೆಂದು ಘೋಷಿಸಲಾಗುವುದು. ಈ ಬಾರಿ ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತಿಗಳಿಸಿರುವ ದಾವಣಗೆರೆ ಜಿಲ್ಲೆಗೆ ರುಚಿ ಅಭಿರುಚಿ ತಂಡ ಬರಲಿದೆ.
ದಿನಾಂಕ 4.12.2009ರ ಶುಕ್ರವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ದಾವಣಗೆರೆಯ ಪಿ.ಜೆ. ಬಡಾವಣೆಯ, ಎ.ವಿ.ಕೆ ಕಾಲೇಜು ರಸ್ತೆಯಲ್ಲಿರುವ ಜಿಲ್ಲಾ ಗುರುಭವನದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18ರಿಂದ 40 ವರ್ಷ ವಯೋಮಾನದೊಳಗಿದ್ದು ದಾವಣಗೆರೆ ಜಿಲ್ಲೆಗೆ ಸಂಬಂಧಿಸಿದ ಯಾವುದಾದರೂ ವಿಶೇಷ ತಿನಿಸೊಂದನ್ನು ಸ್ಥಳದಲ್ಲಿಯೇ ಐದು ನಿಮಿಷದ ಅವಧಿಯಲ್ಲಿ ತಯಾರಿಸುವ ಸಾಮರ್ಥ್ಯ ಹೊಂದಿರಬೇಕು ಹಾಗೂ ತಿನಿಸು ತಯಾರಿಕೆಗೆ ಅಗತ್ಯವಿರುವ ಪದಾರ್ಥಗಳನ್ನು ಆಕಾಂಕ್ಷಿಗಳೇ ಖುದ್ದಾಗಿ ತರಬೇಕು.
ಜೀ ಕನ್ನಡ ವಾಹಿನಿ ಅಪರೂಪದ ಅವಕಾಶವೊಂದನ್ನು ನಿಮ್ಮ ಬಳಿಗೆ ತಂದಿದ್ದು ಉತ್ತಮ ತಿಂಡಿ ತಿನಿಸುಗಳನ್ನು ತಯಾರಿಸುವ ಮಹಿಳೆಯರು ಈ ಅವಕಾಶವನ್ನು ಸದುಪಯೋಗ ಮಾಡಿಸಿಕೊಳ್ಳಬಹುದಾಗಿದೆ. ಜೊತೆಗೆ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 97411 58120, 97411 58124 ಹಾಗೂ 99001 49970 ಸಂಚಾರಿವಾಣಿಗಳನ್ನು ಮತ್ತು (080)26860292 ದೂರವಾಣಿಗಳನ್ನು ಸಂಪರ್ಕಿಸಬಹುದಾಗಿದೆ.
ಸೂಚನೆ:
ಮುಂದೆ ಆಯ್ಕೆ ಪ್ರಕ್ರಿಯೆ ನಡೆಯಬಹುದಾದ ತಾತ್ಕಾಲಿಕ ಪಟ್ಟಿ. (ಇನ್ನು ಸ್ಥಳ ನಿಗದಿಯಾಗಿಲ್ಲ)
ದಿನಾಂಕ 12.12.09ರ ಶನಿವಾರ ಮಂಗಳೂರು.
ದಿನಾಂಕ 14.12.09ರ ಸೋಮವಾರ ಉಡುಪಿ.
ದಿನಾಂಕ 19.12.09ರ ಶನಿವಾರ ಮಡಿಕೇರಿ.
ದಿನಾಂಕ 04.01.10ರ ಸೋಮವಾರ ಹಾಸನ.
ಮಾಧ್ಯಮ ಸಂಪರ್ಕ:
ಮಧುಸೂಧನ್.ವಿ
99002 89844



Click it and Unblock the Notifications